ತಾಳಿಕೋಟೆ | ಜ.18ರಂದು ದಲಿತ ಹೋರಾಟಗಾರ ಲಕ್ಷ್ಮೀನಾರಾಯಣರ ಸ್ಮರಣೆ

Date:

ಜನವರಿ 18 ರಂದು ಬೆಂಗಳೂರಿನಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮೀನಾರಾಯಣ್ ನಾಗವಾರ ಸ್ಥಾಪಿತ) ರಾಜ್ಯ ಸಮಿತಿ ವತಿಯಿಂದ ʼಸಮಾನತೆಯ ಹಾದಿಯಲ್ಲಿ ಹೋರಾಟಗಾರ ಲಕ್ಷ್ಮೀನಾರಾಯಣ ನಾಗವಾರರ ಅಳಿಯದ ನೆನಪುʼ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟನೆಯ ಬೆಳಗಾವಿ ವಿಭಾಗೀಯ ಸಂಚಾಲಕ ದೇವೇಂದ್ರ ಹಾದಿಮನಿ ಹೇಳಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಲಕ್ಷ್ಮೀನಾರಾಯಣ ನಾಗವಾರ ಈ ರಾಜ್ಯದ ಶೋಷಿತರಿಗೆ, ದಮನಿತರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಂತ ಮಾಣಿಕ್ಯನ ಕಳೆದುಕೊಂಡ ನಾವುಗಳು ಆ ಹೋರಾಟಗಾರನ ನೆನಪಿಸಿಕೊಳ್ಳುವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿದೆ. ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸತ್ಯಾಗ್ರಹ ಮಾಡುವಂತ ಹೋರಾಟಗಾರ ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ರವರನ್ನು ಪೋಲಿಸ್ ಸಂಬಂಧಿಗಳು ಬಂಧಿಸಿದ್ದಾರೆ. ಅವರ ಪರವಾಗಿ ನಮ್ಮ ಸಂಘಟನೆ ಧ್ವನಿಯುತ್ತಬೇಕಾಗಿದೆ. ಮತ್ತೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ಬಸಮ್ಮ ಎಂಬ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆ ಪಾಪಿಗಳಿಗೆ ಮತ್ತು ದಲಿತ ಕುಟುಂಬಗಳ ಮೇಲೆ ದೌರ್ಜನ್ಯ ಎಸಗಿ, ಬೆದರಿಕೆ ಹಾಕಿದವರ ದರ್ಪಕ್ಕೆ ಕೊನೆಗಾಣಿಸಲು ದಲಿತ ಸಂಘರ್ಷ ಸಮಿತಿಯ ಲಕ್ಷ್ಮೀನಾರಾಯಣ ನಾಗವಾರ ಬಣ ಸಿದ್ಧವಾಗಿ ನಿಂತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 01 06 at 6.31.55 PM

ಸಮಾನತೆಯ ಹಾದಿಯಲ್ಲಿ ದಿವಂಗತ ಲಕ್ಷ್ಮೀನಾರಾಯಣ ನಾಗವಾರ ಹೋರಾಟಗಾರನ ಅಳಿಯದ ನೆನಪು ಕಾರ್ಯಕ್ರಮದ ಕರಪತ್ರ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ವಿರುದ್ಧ ಹೋರಾಟಗಾರರ ಬಂಧನ: ಬಿಡುಗಡೆಗೆ ಜನ ವೇದಿಕೆ ಸಂಘಟನೆ ಆಗ್ರಹ

ಸಭೆಯಲ್ಲಿ ಮಹೇಶ ಛಲವಾದಿ ಮಾತನಾಡಿ, ನಾಗೇಶ ಕಟ್ಟಿಮನಿ, ತಾಳಿಕೋಟೆ ತಾಲೂಕು ಸಂಚಾಲಕ ಮಾಂತೇಶ್ ಕಟ್ಟಿಮನಿ, ಕಾಶಿನಾಥ ಕಾರಗನೂರ, ದೇವು ಗೊಟಖಂಡಿಕಿ, ಭೀಮರಾವ್ ರತ್ನಾಕರ್, ಬಸವರಾಜ್ ಬಳಗಾನೂರ, ಚಂದ್ರು ದೊಡ್ಡಮನಿ, ಬಾಬು ಮೀಣಜಿಗಿ, ಸಂಜೀವ್ ಉತಾಳೆ, ಕಾಶಿನಾಥ್ ದೊಡ್ಡಮನಿ ತುಂಬಿಗಿ, ಪರಶುರಾಮ್ ನವದಗಿ, ಯುವನಾಯಕ ಕಾಶಿನಾಥ್ ಕಟ್ಟಿಮನಿ, ಅಮೋಘ ಹಂದ್ರಾಳ ಚಬನೂರ, ಕಾಶಿನಾಥ ಅಡಗಿನಾಳ, ಮುನ್ನಾ ಹುಣಸ್ಯಾಳ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...