ತಾಳಿಕೋಟೆ | ಮಳೆಯಿಂದ ಬೆಳೆ ನಾಶ; ತಕ್ಷಣ ಪರಿಹಾರಕ್ಕೆ ರೈತ ಸಂಘಟನೆಗಳ ಮನವಿ

Date:

ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಾದ್ಯಂತ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಬಹುತೇಕ ಎಲ್ಲಾ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಸಮಯ ಹಾಳು ಮಾಡದೆ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಮನವಿ ಮಾಡಿವೆ.

“ವಿಪರೀತ ಮಳೆಯಿಂದಾಗಿ ತಾಲೂಕಿನ ಮುಖ್ಯ ಬೆಳೆಗಳಾದ ತೊಗರಿ, ಹತ್ತಿ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಬಹುತೇಕ ಬೆಳೆಗಳು ಹಾಳಾಗಿವೆ. ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳಲ್ಲಿ ನೀರು ನಿಂತು ಹಾಳಾಗಿವೆ. ತಾಲೂಕಿನ ಪ್ರತಿ ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ ರೂ. 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ, ಬಹು ವಾರ್ಷಿಕ ಬೆಳೆಗಳಿಗೆ ರೂ. 2 ಲಕ್ಷ ಪರಿಹಾರ ನೀಡಬೇಕು ಎಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ” ಎಂದು ರಾಜ್ಯ ರೈತ ಸಂಗದ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಆಗ್ರಹಿಸಿದರು.

ಶ್ರೀಶೈಲ್ ವಾಲಿಕಾರ ಮಾತನಾಡಿ, “ಭೀಮೆ, ಕೃಷ್ಣಾ ಹಾಗೂ ದೋಣಿ ಪ್ರವಾಹದಿಂದಾಗಿ ಸಾಕಷ್ಟು ರೈತರ ಬೆಳೆಗಳು ಹಾಳಾಗಿರುವ ಜೊತೆಗೆ ಮನೆ ಮಠಗಳು ಕೂಡ ಬಿದ್ದು, ಹಲವು ಸಾಕು ಪ್ರಾಣಿಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗಿವೆ. ಇದಕೆಲ್ಲ ಪರಿಹಾರ ನೀಡಬೇಕೆಂದು ಆಗ್ರಹ ಮಾಡುತ್ತಿದ್ದೇವೆ. ಒಂದು ವೇಳೆ ತಡವಾದರೆ ಉಗ್ರ ಹೋರಾಟ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ

ಮನವಿ ಸ್ವೀಕರಿಸಿ ಮಾತನಾಡಿದ ತಾಳಿಕೋಟೆ ತಹಸೀಲ್ದಾರ್, “ಈಗಾಗಲೇ ಮೊದಲ ಹಂತದ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಇತ್ತೀಚೆಗೆ ಹೆಚ್ಚಿನ ಮಳೆ ಉಂಟಾಗಿ ಅನೇಕ ರೈತರ ಜಮೀನುಗಳಲ್ಲಿ ನೀರು ನಿಂತು ನಷ್ಟಗೊಂಡಿರುವ ಕುರಿತು ಪ್ರಥಮ ವರದಿಯನ್ನು ಆಯಾ ಗ್ರಾಮ ಪಂಚಾಯತ್ ಅಥವಾ ತಲಾಟಿ ಕಚೇರಿ ಮುಂದೆ ಅಂಟಿಸಲಾಗಿದೆ. ಪಟ್ಟಿಯಲ್ಲಿ ಹೆಸರಿಲ್ಲದ ಬೆಳೆಹಾನಿಯಾದ ರೈತರು ದಾಖಲೆಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು” ಎಂದರು.

ಈ ವೇಳೆ ಬಾಗೇವಾಡಿ ತಾಲೂಕು ಅಧ್ಯಕ್ಷ ಮುದಕಣ್ಣ ಬಾಗೇವಾಡಿ, ಮಹಿಳಾ ತಾಲೂಕು ಅಧ್ಯಕ್ಷೆ ಸುಜಾತ ಅವಟಿ, ನಿಂಗಣ್ಣ ಸುಣದಳ್ಳಿ, ಈರಯ್ಯ ಅಲಾಳಮಠ, ಶಿವಶಂಕ್ರಪ್ಪ ಸಜ್ಜನ್, ಲಿಂಗರಾಜ ಮೇಟಿ, ರಮೇಶಗೌಡ ವಡವಡಗಿ, ದೇವರೆಡ್ಡಿ ಬಿರಾದಾರ, ದೇವೀಂದ್ರಪ್ಪಗೌಡ್ ಪಾಟೀಲ್, ಮಹದೇಪ್ಪಾಗೌಡ ಜಲಪುರ್, ದೇವಿಡ್ರಪ್ಪಾಗೌಡ ಕೊನಾಳ, ಸಂಗನಗೌಡ ಬೆಂಡೆಗೊಂದಳ, ಈರಣ್ಣ ಸಿಂಪಿಗೆರೆ, ಮಡಿವಾಳಪ್ಪ ಸಿಂಪಿಗೆರೆ, ಶಿವಾಜಿ ಮೊಪಗಾರ, ಸಿದ್ದಪ್ಪತಳವಾರ್, ಅಪ್ಪಸಾಹೇಬ್ ಸಜ್ಜನ್, ಮುರ್ತುಜ ಹಳ್ಳದಮನಿ. ಮಲ್ಲು ಮುದನೂರ್, ಅಪ್ಪಯ್ಯ ಕಾರಕಳ್ಳಿಮಠ, ಶಿವಶಂಕರಪ್ಪ ಟಕಳಕ್ಕಿ, ಬಸವರಾಜ್ ನಾಟಿಕಾರ್, ಭೀಮಣ್ಣ ಸಜ್ಜನ, ಬೋರಮ್ಮ ಕುಂಬಾರ, ಸುಧಾ ಮಡ್ಡಿ, ದ್ರಾಕ್ಷಿಯಿಣಿ ಲಿಂಗದಳ್ಳಿ, ವಿ ರೇಣುಕಾ ಹಂಚಾಟೆ, ಲಕ್ಷ್ಮಿಬಾಯಿ ಸಜ್ಜನ ಸೇರಿದಂತೆ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...