ತಾಳಿಕೋಟೆ | ತೊಗರಿ ಬೆಳೆ ಜಲಾವೃತ: ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಹೋರಾಟದ ಎಚ್ಚರಿಕೆ

Date:

ಮಳೆ ಹೆಚ್ಚಾದ ಕಾರಣ ತೊಗರಿ ಬೆಳೆ ಜಲಾವೃತವಾಗಿದ್ದು, ಬಂದ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಮೂಲಕ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘದ ಅಶೋಕ ಗೌಡ ಪಾಟೀಲ ಹಾಗೂ ರಾಷ್ಟ್ರೀಯ ರೈತ ಸಂಘದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ರೇಣುಕಾ ಪಾಟೀಲ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಅಶೋಕಗೌಡ ಪಾಟೀಲ ಮಾತನಾಡಿ, “ತೊಗರಿ ಬೆಳೆ ಮಳೆಗೆ ಹಾನಿಯಾಗಿ ರೈತರು ಸಂಕಷ್ಟದಲ್ಲಿ ಜೀವನ ದೂಡುವಂತಾಗಿದೆ. ಹತ್ತಿ ಬೆಳೆ ಮಳೆಗೆ ಸಿಲುಕಿ ತಾಮ್ರ ರೋಗ ಬಂದು ಕಾಂಡ ಕೊರೆವ ಕುಲದ ಬಾಧೆಯಿಂದ ಸಂಪೂರ್ಣ ಹೂವು, ಮೊಗ್ಗುಗಳು ಸಂಪೂರ್ಣ ನಾಶವಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪಾಟೀಲ ಮಾತನಾಡಿ, “ತಾಲೂಕಿನಾದ್ಯಂತ ಈರುಳ್ಳಿ, ಅಲಸಂದಿ, ಶೇಂಗಾ, ಗೋವಿನ ಜೋಳದ ತೆನೆ ಕಾಳುಗಟ್ಟುವ ಮೊದಲೇ ಕೊಳೆತು ಹಾಳಾಗಿದೆ. ರೈತರ ಸರ್ವ ಬೆಳೆಗಳೂ ಕೂಡ ಸಂಪೂರ್ಣವಾಗಿ ನಾಶವಾಗಿವೆ. ಹೆಸರು, ಉದ್ದು, ಅಲಸಂದೆ, ಶೇಂಗಾ ಬೆಳೆಗಳು ಅನಾವೃಷ್ಟಿ ಸಂಪೂರ್ಣ ಒಣಗಿತ್ತು, ಇದೀಗ ಅತಿವೃಷ್ಟಿಯಿಂದ ರೈತನ ಒಂದು ವರ್ಷದ ಸಂಪೂರ್ಣ ಬದುಕು ಹಾಳಾಗಿ ಹೋಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

“ತೋಟಗಾರಿಕೆ ಬೆಳೆಯಾದ ಕಬ್ಬು, ದ್ರಾಕ್ಷಿ, ದಾಳಿಂಬೆ, ನಿಂಬೆ, ದಾಳಿಂಬೆ, ಚಿಕ್ಕೋ ಬೆಳೆಗಳು ಮಳೆಯ ನೀರಿನ ಪ್ರಮಾಣ ಜಾಸ್ತಿಯಾಗಿ ಈ ಎಲ್ಲಾ ಬೆಳೆಗಳು ನಾಶವಾಗಿವೆ. ಸರ್ಕಾರ ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೋರಾಟ ಕೈಗೊಳ್ಳಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ರೈತ ಸಂಘದ ಮುಖಂಡರುಗಳಾದ ಹಣಮಂತ ವಡ್ಡರ, ಮೆಹಬೂಬ ಮನಗೂಳಿ, ಸಂಪತ್ ಜಮಾದಾರ, ಶರಣು ಕೌದಿ, ವಿಜಯಕುಮಾರ ಉಕ್ಕಲಿ, ಸಂಗು ಹುಣಸಗಿ, ಸುಭಾಷ್ ಸಜ್ಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...