ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಪಟ್ಟಣದ ಕೋಟೆ ಕ್ಯಾಂಪ್ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳತನ ನಡೆದಿದೆ.
ಆಭರಣ ಕಳವು ಆದ ಮಾಲೀಕ ಆಸ್ಮಾ ಪರ್ವೀನ್ ಎಂಬಾತ ಕೆಲಸದ ನಿಮಿತ್ತ ಜ. 25ರಂದು ಬೆಂಗಳೂರಿಗೆ ತೆರಳಿದ್ದರು. ಫೆ. 01 ರಂದು ಮನೆಗೆ ವಾಪಸ್ ಬಂದು ನೋಡಿದಾಗ, ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಳ್ಳರು ಯಾವುದೋ ಆಯುಧದಿಂದ ಬಾಗಿಲ ಬೀಗವನ್ನು ಮೀಟಿ ಒಳಗೆ ನುಗ್ಗಿ, ಮನೆಯ ಲಾಕರ್ ಮುರಿದು ಅದರಲ್ಲಿದ್ದ ಸುಮಾರು 96,000 ರೂಪಾಯಿ ಬೆಲೆಬಾಳುವ 16ಗ್ರಾಂ ಚಿನ್ನದ ಆಭರಣಗಳು ಹಾಗೂ 7,000 ರೂಪಾಯಿ ಮೌಲ್ಯದ 140 ಗ್ರಾಂ ಬೆಳ್ಳಿಯ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಸಂಕೇತಿಕಾ ಉಪವಾಸ ಧರಣಿ
ಕಳುವಾದ ಒಟ್ಟು ಆಭರಣಗಳ ಅಂದಾಜು ಮೌಲ್ಯ 1,03,000/- ರೂಪಾಯಿಗಳಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





