ಬಾಗೇಪಲ್ಲಿ | ಮಕ್ಕಳ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ಕಲಿಸಿ : ಮಂಗಳನಾಥ ಸ್ವಾಮೀಜಿ ಕಿವಿಮಾತು

Date:

ನಾವು ಯಾವುದೇ ಬಾಷೆ ಕಲಿತರು, ಬೇರೆ ದೇಶದಲ್ಲಿ ಕೆಲಸ ಮಾಡಿದರೂ ಮಾತೃ ದೇಶದ ಸಂಸ್ಕೃತಿ, ಪರಂಪರೆ ಹಾಗೂ ಸಂಪ್ರದಾಯಗಳು, ವಿದ್ಯೆ ಕಲಿಸಿರುವ ಗುರು ಹಿರಿಯರನ್ನು, ಜನ್ಮ ಕೊಟ್ಟಿರುವ ತಂದೆ-ತಾಯಿಯನ್ನು ಮರೆಯಬಾರದು. ಇವೆಲ್ಲ ಸಂಸ್ಕಾರಗಳನ್ನು ಬಾಲ್ಯದಲ್ಲೆ ಮಕ್ಕಳಿಗೆ ಕಲಿಸಬೇಕು ಎಂದು ಚಿಕ್ಕಬಳ್ಳಾಪುರ ಅಧಿಚುಂಚನಗಿರಿ ಶಾಖಾ ಮಠದ ಮಠಾಧೀಶ ಶ್ರೀ ಮಂಗಳನಾಥ ಸ್ವಾಮೀಜಿ ಕಿವಿಮಾತು ಹೇಳಿದರು.

ಬಾಗೇಪಲ್ಲಿ ಪಟ್ಟಣದ ಬಿಜಿಎಸ್ ಪಬ್ಲಿಕ್ ಶಾಲಾವರಣದಲ್ಲಿ ಭಾನುವಾರ ಶಾಲಾ ಆಡಳಿತ ಮಂಡಳಿ ಅಯೋಜಿಸಿದ್ದ ಮಾತೃ ಭೋಜನಾ ಹಾಗೂ 2024ನೇ ಸಾಲಿನ ಶಾಲಾ ವಾರ್ಷಿಕೊತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು ಬಳಿಕ ಆಶೀರ್ವಚನ ನೀಡಿದರು.

ಮಕ್ಕಳಲ್ಲಿ ಸಮಾನತೆ ಹಾಗೂ ಬಾವೈಕ್ಯತೆಯ ಭಾವನೆಗಳನ್ನು ಬೆಳಸುವ ನಿಟ್ಟಿನಲ್ಲಿ ಜಾತಿ-ಧರ್ಮ, ಭೇದ-ಭಾವ ಮರೆತು ಮಾತೃ ಭೋಜನಾ ಕಾರ್ಯಕ್ರಮವನ್ನು ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಆಚರಿಸಲಾಗುತ್ತಿದೆ. ಮಕ್ಕಳು ಕೇವಲ 8 ಗಂಟೆ ಕಾಲ ಮಾತ್ರ ಶಾಲೆಯಲ್ಲಿ ಇರುತ್ತಾರೆ ಉಳಿದ 16 ಗಂಟೆ ಸಮಯ ಪಾಲಕರ ಬಳಿ ಇರುತ್ತಾರೆ. ವಿವಿಧ ಸಾಧಕರ ಕುರಿತು, ಪಾಲಕರ ಕಷ್ಟಗಳ ಕುರಿತು ಮಕ್ಕಳಿಗೆ ತಿಳಿಹೇಳಿ ಜೀವನದ ಬಗ್ಗೆಯೂ ಅರಿವು ಮೂಡಿಸಿ. ಮಕ್ಕಳಿಗೆ ಅವಶ್ಯಕತೆ ಇಲ್ಲದ ಮೊಬೈಲ್‌ನಂತಹ ವಸ್ತುಗಳನ್ನು ಕೊಟ್ಟು ಕೆಟ್ಟದಕ್ಕೆ ದಾರಿಮಾಡದಿರಿ. ಈ ನಿಟ್ಟಿನಲ್ಲಿ ಎಲ್ಲಾ ಪೋಷಕರು ಮುನ್ನೆಚ್ಚರಿಕೆವಹಿಸಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಗೇಪಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಪ್ರಶಾಂತ್ ಆರ್.ವರ್ಣಿ ಮಾತನಾಡಿ, ಪಾಲಕರು ಶಾಲಾ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೆ ಮೊಬೈಲ್ ಕೊಡುವ ಕೆಟ್ಟ ಪದ್ದತಿಯನ್ನು ನಿಲ್ಲಿಸಬೇಕು. 18 ವರ್ಷ ವಯಸ್ಸಿನೊಳಗಿನ ಶಾಲಾ, ಕಾಲೇಜು ಮಕ್ಕಳಿಗೆ ದ್ವಿಚಕ್ರ ವಾಹನ ಕೊಟ್ಟು ಅಪರಾಧಗಳಿಗೆ ಕಾರಣರಾಗಬೇಡಿ. ಚಿಕ್ಕವಯಸ್ಸಿನ ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ ಮಾಡುವ ಮೌಢ್ಯ ಪದ್ದತಿಗೆ ಪಾಲಕರು ಅವಕಾಶ ಕಲ್ಪಿಸಬೇಡಿ. ದ್ವಿಚಕ್ರ ವಾಹನ ಅಪಘಾತ ಹಾಗೂ ಬಾಲ್ಯ ವಿವಾಹದಂತಹ ಅಪರಾಧ ಪ್ರಕರಣಗಳಿಗೆ ಕಾರಣರಾಗಿರುವ ವಿದ್ಯಾರ್ಥಿಗಳ ಬದಲಿಗೆ ಪಾಲಕರು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೋಷಕರಲ್ಲಿ ಅರಿವು ಮೂಡಿಸಿದರು.

ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಅಯೋಜಿಸಿದ್ದ ಮಾತೃ ಭೋಜನಾ ಕಾರ್ಯಕ್ರಮದಲ್ಲಿ ಪಾಲಕರು ಸಿದ್ದಪಡಿಸಿಕೊಂಡು ತಂದಿದ್ದ ವಿವಿಧ ಬಗೆಯ ತಿಂಡಿ, ತಿನುಸುಗಳನ್ನು ಗಣ್ಯರು ಮಕ್ಕಳಿಗೆ ತಿನ್ನಿಸುವ ಮೂಲಕ ಭಾವೈಕ್ಯತೆ ಮೆರೆದರು. ಇದೇ ವೇಳೆ ಮಂಗಳನಾಥ ಸ್ವಾಮೀಜಿಯವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬಾಗೇಪಲ್ಲಿ | ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಖೆ ಅಧಿಚುಂಚನಗಿರಿ ಶಿಕ್ಷಣ ಸಂಸ್ಥೆ ಸಿಇಒ ಶಿವರಾಮರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಪುರಸಭೆ ಉಪಾಧ್ಯಕ್ಷೆ ಸುಜಾತ ನರಸಿಂಹನಾಯ್ಡು, ಸದಸ್ಯ ನರಸಿಂಹಮೂರ್ತಿ, ಪ್ರಾಂಶುಪಾಲ ಮುನಿರಾಜು ಹಾಗೂ ಮಕ್ಕಳ ಪಾಲಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...