ಬೀದರ್‌ | ಮದ್ಯ ಸೇವಿಸಿ ಶಾಲೆಗೆ ಬರುವ ಶಿಕ್ಷಕರು ಕ್ಷೇತ್ರದಲ್ಲಿ ಇರುವುದು ಬೇಡ : ಶಾಸಕ ಪ್ರಭು ಚವ್ಹಾಣ

Date:

ಔರಾದ್‌ ತಾಲ್ಲೂಕಿನ ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬರುತ್ತಾರೆ. ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂತಹ ಶಿಕ್ಷಕರು ನನ್ನ ಕ್ಷೇತ್ರದಲ್ಲಿ ಇರುವುದು ಬೇಡ ಎಂದು ಶಾಸಕ ಪ್ರಭು ಚವ್ಹಾಣ ಖಡಕ್‌ ಸೂಚನೆ ನೀಡಿದರು.

ಔರಾದ ತಾಲ್ಲೂಕಿನ ಗಣೇಶಪೂರ(ಎ), ಬೋರಾಳ, ತುಳಜಾಪೂರ, ಎಕಲಾರ, ಕೊಳ್ಳುರ, ಬರದಾಪೂರ, ಲಿಂಗದಳ್ಳಿ(ಕೆ), ನಾಗೂರ(ಎನ್) ಹಾಗೂ ನಾಗೂರ(ಎಂ)ನಲ್ಲಿ ಬುಧವಾರ ಗ್ರಾಮ ಸಂಚಾರ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರಲ್ಲದೇ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಪರಿಶೀಲನೆ ನಡೆಸಿದರು.

ʼಮದ್ಯ ಸೇವಿಸಿ ಶಾಲೆಗೆ ಬರುವ ಶಿಕ್ಷಕರಿಂದ ಮಕ್ಕಳ ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇಂತಹ ಶಿಕ್ಷಕರನ್ನು ಗುರುತಿಸಿ ಕಾನೂನಿನ ಚೌಕಟ್ಟಿನಲ್ಲಿ ಶಿಸ್ತು ಕ್ರಮ ಜರುಗಿಸಿ ಬೇರೆಡೆ ಕಳುಹಿಸಬೇಕುʼ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರುʼ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಗ್ರಾಮ ಸಂಚಾರದ ಸಂದರ್ಭದಲ್ಲಿ ನಾನು ಪ್ರತಿ ಶಾಲೆಗೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದೇನೆ. ಅನೇಕ ಶಾಲೆಗಳಲ್ಲಿ ಅವ್ಯವಸ್ಥೆ ಎದ್ದು ಕಾಣಿಸುತ್ತಿದೆ. ಬೆರಳೆಣಿಕೆಯಷ್ಟು ಶಾಲೆಗಳನ್ನು ಹೊರತುಪಡಿಸಿ ಬಹಳಷ್ಟು ಶಾಲೆಗಳಲ್ಲಿ ಮಕ್ಕಳ ಕೊರತೆಯಿದೆ. ಶಿಕ್ಷಕರ ಸಮಸ್ಯೆಯೂ ಮಕ್ಕಳ ಕಲಿಕೆಗೆ ಅಡ್ಡಿಯಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನಿಯೋಜಿಸಬೇಕುʼ ಎಂದರು.‌

ಬಯೋಮೆಟ್ರಿಕ್ ವ್ಯವಸ್ಥೆಯಿದ್ದರೂ ಶಿಕ್ಷಕರು ಗೈರಾಗುವುದು ನಿಂತಿಲ್ಲ :

ʼಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಸುಧಾರಣೆಗೆ ಬಯೋಮೆಟ್ರಿಕ್ ವ್ಯವಸ್ಥೆ ಮಾಡಿರುವುದಾಗಿ ತಿಳಿಸಲಾಗುತ್ತಿದೆ. ಆದರೂ ಶಿಕ್ಷಕರು ಕೆಲಸಕ್ಕೆ ಗೈರಾಗುವುದು ನಿಂತಿಲ್ಲ. ಸಾಕಷ್ಟು ಕಡೆಗಳಲ್ಲಿ ಶಿಕ್ಷಕರು ಸಮಯಕ್ಕೆ ಶಾಲೆಗೆ ಹೋಗುತ್ತಿಲ್ಲವೆಂಬ ದೂರುಗಳು ಬರುತ್ತಿವೆ. ಇವುಗಳನ್ನು ಕೂಡಲೇ ಸರಿಪಡಿಸಬೇಕಕು ಎಂದು ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

WhatsApp Image 2025 01 23 at 8.59.11 AM

ʼನಾನು ಶಿಕ್ಷಣದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದು, ಉತ್ತಮ ತರಗತಿ ಕೋಣೆಗಳು, ಶುದ್ದ ಕುಡಿಯುವ ನೀರು, ಆಟದ ಮೈದಾನ, ಡಿಜಿಟಲ್ ಕ್ಲಾಸ್‌ರೂಮ್ ನಂತಹ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸುತ್ತಿದ್ದೇನೆ. ಇನ್ನು ಏನು ಬೇಕೆಂದರೂ ಕೊಡಲು ಸಿದ್ದ. ಆದರೆ ಶಿಕ್ಷಕರು ಸರಿಯಾಗಿ ಕೆಲಸ ಮಾಡಬೇಕು. ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಬೇಕುʼ ಎಂದು ಶಿಕ್ಷಕರಿಗೆ ಹೇಳಿದರು.

ʼಕ್ಷೇತ್ರದಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ಶಾಲೆಗಳಲ್ಲಿ ಮಕ್ಕಳಿಲ್ಲದಿದ್ದರೆ ಶಾಲೆಗಳು ಮುಚ್ಚಿ ಹೋಗುವ ಆತಂಕವಿರುತ್ತದೆ. ಹಾಗಾಗಿ ಸಾರ್ವಜನಿಕರು ಕೂಡ ಈ ದಿಶೆಯಲ್ಲಿ ಜವಾಬ್ದಾರಿತನ ತೋರಿಸಬೇಕು. ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದೇ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿಸಬೇಕುʼ ಎಂದು ಶಾಸಕರು ಜನರಲ್ಲಿ ಮನವಿ ಮಾಡಿಕೊಂಡರು.

ಉತ್ತಮ ಶಾಲೆಯ ಮುಖ್ಯಗುರುಗಳಿಗೆ ಸನ್ಮಾನ:

ಗ್ರಾಮ ಸಂಚಾರದ ವೇಳೆ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ಶಾಸಕರು, ಶಾಲೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಗಣೇಶಪೂರ ಶಾಲೆ ಮುಖ್ಯಗುರು ಸಂಜು ಬಿರಾದಾರ, ಎಕಲಾರ ಮುಖ್ಯಗುರು ಪ್ರಭು ಬಾಳೂರೆ ಹಾಗೂ ಕೊಳ್ಳುರ ಶಾಲೆಯ ಮುಖ್ಯಗುರು ಕಲ್ಲಪ್ಪ ಬೋರಾಳೆ ಅವರನ್ನು ಶಾಸಕರು ಶಾಲು ಹೊದಿಸಿ ಸನ್ಮಾನಿಸಿದರು.

ʼಎಲ್ಲ ಶಾಲೆಗಳಲ್ಲಿಯೂ ಇದೇ ರೀತಿಯ ಕೆಲಸಗಳಾಗಬೇಕು. ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳ ಹಾಜರಾತಿ ಹೆಚ್ಚಾಗಬೇಕು. ತರಗತಿಗಳು ಸರಿಯಾಗಿ ನಡೆಯಬೇಕು ಎಂದು ತಿಳಿಸಿದರು.

ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

WhatsApp Image 2025 01 23 at 8.58.15 AM
ಎಕಲಾರ ಪ್ರಾಥಮಿಕ ಶಾಲೆಯ ಮುಖ್ಯಗುರು ಪ್ರಭು ಬಾಳೂರೆ ಅವರನ್ನು ಶಾಸಕರು ಸನ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?

ಈ ಸಂದರ್ಭದಲ್ಲಿ ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ವಸಂತ ಬಿರಾದಾರ, ಶಿವರಾಜ ಅಲ್ಮಾಜೆ, ಧೊಂಡಿಬಾ ನರೋಟೆ, ಸಚಿನ್ ರಾಠೋಡ, ರಮೇಶ ಉಪಾಸೆ, ಖಂಡೋಬಾ ಕಂಗಟೆ, ದಯಾನಂಧ ಘೂಳೆ, ಸಂತೋಷ ಪೋಕಲವಾರ, ಕೇರಬಾ ಪವಾರ, ಸಂಜು ವಡೆಯರ್, ಸಚಿನ ಬಿರಾದಾರ, ರಾಜಪ್ಪ ಸೋರಾಳೆ, ಸಾಗರ ಪಾಟೀಲ, ಶಿವಾಂಜಯ ಬಿರಾದಾರ ಅಧಿಕಾರಿಗಳಾದ ಸುಭಾಷ, ರವಿ ಕಾರಬಾರಿ, ಡಾ.ಗಾಯತ್ರಿ, ಧೂಳಪ್ಪ, ವೆಂಕಟರಾವ ಶಿಂಧೆ, ಇಮಲಪ್ಪಾ ಸೇರಿದಂತೆ ವಿವಿಧ ಇಲಾಖೆಗಳ ಆಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...