ಬಿಜೆಪಿ ಬದಲಿಸಿದ್ದ ಪಠ್ಯಗಳನ್ನು ಕಾಂಗ್ರೆಸ್‌ ತೆಗೆಯಬೇಕು: ಕುಂ.ವೀ

Date:

  • ಇಲ್ಲಿಯವರೆಗೆ 16 ಬೆದರಿಕೆ ಪತ್ರ ಬಂದಿವೆ, ಲೇಖಕನಿಗೆ ಬೆದರಿಕೆ ಪತ್ರಗಳು ಪ್ರೇಮಪತ್ರಗಳಂತೆ
  • ಭಾರತೀಯತೆ, ಸಂಸ್ಕೃತಿ ಪಠ್ಯಕ್ರಮ ಎಂದು ಸುನೀಲ್ ಕುಮಾರ್ ಹೇಳಿರುವುದು ಅಪಕ್ವ ಹೇಳಿಕೆ

ಸರ್ಕಾರಗಳು ಬಂದಾಗ ಶಾಲಾ ಪಠ್ಯಗಳು ಬದಲಾಗುತ್ತವೆ, ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರ ಮಾಡಿದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆಯಬೇಕು ಎಂದು ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯ 500 ವರ್ಷಗಳ ಹಿಂದಕ್ಕೆ ಕರೆದುಕೊಂಡು ಹೋಗಿದೆ, ಅವರು ರೂಪಿಸಿದ್ದ ಪಠ್ಯದಲ್ಲಿ ಮಕ್ಕಳ ಭವಿಷ್ಯ ಇರಲಿಲ್ಲ, ವೈಚಾರಿಕತೆ ಇರಲಿಲ್ಲ, ಪಠ್ಯ ರಚನೆ ಸಮಿತಿಗೆ ಅಪಕ್ವ ರೋಹಿತ್ ಚಕ್ರತೀರ್ಥ ಅಧ್ಯಕ್ಷನನ್ನಾಗಿ ಮಾಡಿದ್ದು, ನಾಗೇಶ್ ಮಾಡಿದ ಮೊದಲ ತಪ್ಪು ಎಂದು ಕಿಡಿಕಾರಿದರು.

ಹೊಸ ಸರ್ಕಾರ ಬಂದಿದ್ದು, ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯವನ್ನೇ ಜಾರಿ ಮಾಡಬೇಕು. ಸಾವರ್ಕರ್, ಹೆಡಗೆವಾರ್‌ ಎಂಬ ಹುಸಿ ದೇಶಭಕ್ತರ ಪಠ್ಯವನ್ನು ತೆಗೆಯಬೇಕು. ಯಾವ ಪಠ್ಯವನ್ನು ಬೋಧಿಸಬೇಕೆಂದು ಸರ್ಕಾರ ಕೂಡಲೇ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯತೆ, ಸಂಸ್ಕೃತಿ ಪಠ್ಯಕ್ರಮ ಎಂದು ಸುನೀಲ್ ಕುಮಾರ್ ಹೇಳಿರುವುದು ಅಪಕ್ವ ಹೇಳಿಕೆ. ಭಾರತೀಯತೆ ಎಂದರೆ ಸಮಗ್ರತೆ, ಎಲ್ಲರನ್ನೂ ಒಳಗೊಳ್ಳುವ ಸಮಗ್ರತೆ. ಹಿಂದೂ, ಮುಸ್ಲಿಂ, ಜೈನ, ಕ್ರೈಸ್ತ, ಪಾರ್ಸಿ ಎಲ್ಲರನ್ನೂ ಒಳಗೊಳ್ಳಬೇಕು, ಆರ್ ಎಸ್ ಎಸ್ ಪ್ರಣೀತ ಭಾರತೀಯತೆಯಲ್ಲ. ಶೇ. 1.5ರಷ್ಟು ಜನರ ಭಾರತೀಯತೆ ಅಲ್ಲ ಎಂದು ತಿರುಗೇಟು ನೀಡಿದರು.

ಈ ಹಿಂದೆ ನಡೆಸಿದ್ದ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ ಗಣತಿ ವರದಿ ಬಹಿರಂಗವಾಗಬೇಕು ಮತ್ತು ಜಾರಿಯಾಗಬೇಕು. ಬ್ರಾಹ್ಮಣ ಸೇರಿದಂತೆ ಎಲ್ಲ ವರ್ಗಗಳಲ್ಲಿ ಯಾರು ಹಿಂದುಳಿದವರೋ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ, ಅನುದಾನ ಕೊಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ ಶಾಸಕರ ಊರಿನಲ್ಲೇ ಇಲ್ಲ ಖಾಯಂ ಶಿಕ್ಷಕರು

ಕಳೆದ 15 ದಿನಗಳ ಹಿಂದೆಯೂ ನನಗೆ ಬೆದರಿಕೆ ಪತ್ರ ಬಂದಿದೆ. ಯಾವ ಲೇಖಕನಿಗೆ ಹೆಚ್ಚು ಬೆದರಿಕೆ ಪತ್ರ ಬರುವುದೋ ಆತನೇ ನಿಜವಾದ ಲೇಖಕ. ಲೇಖಕನಿಗೆ ಬೆದರಿಕೆ ಪತ್ರಗಳು ಪ್ರೇಮಪತ್ರಗಳು ಇದ್ದಂತೆ ಎಂದುಕೊಂಡಿದ್ದೇನೆ, ಮೋದಿಯನ್ನು ಅವಹೇಳನ ಮಾಡುತ್ತೀರಿ, ಮುಸ್ಲಿಮರನ್ನು ಒಲೈಸುತ್ತೀರಿ ಎಂದು ಬೆದರಿಕೆ ಪತ್ರಗಳು ಬರುತ್ತಿದ್ದು, ಒಟ್ಟು ನನಗೆ 16 ಪತ್ರಗಳು ಬಂದಿದೆ ಎಂದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಸಂಬಂಧ ಮಾತನಾಡಿ, ಗ್ಯಾರಂಟಿ ಯೋಜನೆಗಳು ಬಡವರ ಪರವಾದ ಯೋಜನೆಗಳು, ಬಡವರಿಗೆ 10 ಕೆಜಿ ಅಕ್ಕಿ ಕೊಟ್ಟರೇ ಇವರಪ್ಪನ ಗಂಟು ಹೋಗೋದೇನೂ..? ಬಿಜೆಪಿ ಅವರು ಲೋಕಸಭೆಯಲ್ಲಿ ಗೆಲ್ಲಬೇಕಾದರೆ ಗ್ಯಾರಂಟಿ ಯೋಜನೆ ಬೆಂಬಲಿಸಬೇಕು ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...