ಬಾಗಲಕೋಟೆ | ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭ: ಶಾಸಕ ವಿಜಯಾನಂದ ಕಾಶಪ್ಪನವರ

Date:

ನೇಕಾರಿಕೆ ದೇವಲ ಮಹರ್ಷಿಗಳು ಸಮಾಜಕ್ಕೆ ನೀಡಿದ ಕೊಡುಗೆ ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ಸವಾಲು ನೇಕಾರರ ಮುಂದಿದೆ. ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭಿಸಲಾಗುವುದು ಎಂದು ಹುನಗುಂದ ಶಾಸಕರಾದ ವಿಜಯಾನಂದ ಕಾಶಪ್ಪನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಾ ಶಂಕರಿ ರಾಮಲಿಂಗ ದೇವಸ್ಥಾನದ ಆವರಣದಲ್ಲಿ ದೇವಾಂಗ ಸಂಘ ಹಾಗೂ ದೇವಲ ಮಹರ್ಷಿಗಳ ಜಯಂತ್ಯುತ್ಸವದ ನಿಮಿತ್ತ ಆಯೋಜಿಸಲಾಗಿದ್ದ ದೇವಾಂಗ ಪುರಾಣದ ಸಮಾರೋಪ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇವಾಂಗ ಜಗದ್ಗುರುಗಳ ಅಣತಿಯಂತೆ ಕೂಡಲಸಂಗಮದಲ್ಲಿ ಜನವರಿ ತಿಂಗಳ ಕೊನೆಯ ವಾರದಲ್ಲಿ ರಾಜ್ಯಮಟ್ಟದ ನೇಕಾರ ಸಮಾವೇಶ ಆಯೋಜಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
kashappa1

ಪುರಸ್ಕೃತ ಗುರುದಾಸ ನಾಗಲೋಟಿ ಮಾತನಾಡಿ, ಇಳಕಲ್ ಸೀರೆ ಇಂದಿಗೂ ತನ್ನ ಖ್ಯಾತಿ ಉಳಿಸಿಕೊಂಡಿದೆ. ಮಹಿಳೆಯರು ಮೂಲಕವೂ ಆನ್‌ಲೈನ್ ಖರೀದಿಸುತ್ತಿದ್ದಾರೆ. ದೇವಾಂಗ ಸಮಾಜದ ಯುವಕರು ನೇಕಾರಿಕೆಯಲ್ಲಿ ಶ್ರಮ ವಹಿಸಿ ಕೆಲಸ ಮಾಡಿದರೆ ನೌಕರಿಗಿಂತಲೂ ಹೆಚ್ಚು ಸಂಪಾದಿಸಬಹುದು ಎಂದು ಹೇಳಿದರು.

ಬಾಗಲಕೋಟೆ ಜಿಲ್ಲಾ ದೇವಾಂಗ ನೌಕರ ಸಂಘದ ಅಧ್ಯಕ್ಷ ಬಸವರಾಜ ಕುದರಿ ಅವರು ನೇಕಾರಿಕೆಯ ಸ್ಥಿತಿಗತಿ, ಜಾಗತೀಕರಣವು ನೇಕಾರರ ಜೀವನದ ಮೇಲೆ ಉಂಟು ಮಾಡಿದ ದುಷ್ಪರಿಣಾಮ ಹಾಗೂ ಪರಿಹಾರೋಪಾಯ ಕುರಿತು ಉಪನ್ಯಾಸ ನೀಡಿದರು.

ಹಂಪಿ ಹೇಮಕೂಟ ಗಾಯತ್ರಿ ಸಾನ್ನಿಧ್ಯ ವಹಿಸಿದ್ದರು. ಪೀಠದ ದಯಾನಂದಪುರಿ ಮಾತನಾಡಿದರು. ಬಡವರಿಗೆ ವಸ್ತ್ರ ವಿತರಿಸಲಾಯಿತು.

ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪಡೆದ ನೀಲಕಂಠ ಕಾಳಗಿ, ಸಿದ್ದಪ್ಪ ಮಾದರ (ಸಿತಿಮಾ). ಸುನಂದಾ ಕಂದಗಲ್ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ

ಮುನಿಸ್ವಾಮಿಗಳು ದೇವಾಂಗಮಠ, ದೇವಾಂಗ ಅಧ್ಯಕ್ಷ ಅಶೋಕ ಬಿಜ್ಜಲ್, ಬಾಗಲಕೋಟ ಜಿಲ್ಲಾ ದೇವಾಂಗ ಸಮಾಜದ ಅಧ್ಯಕ್ಷ ಸತೀಶ ಸಪ್ಪರದ, ಉತ್ಸವ ಸಮಿತಿ ಅಧ್ಯಕ್ಷ ಅಮೃತ್ ಬಿಜ್ಜಲ್, ಗಾಯತ್ರಿ , ಮಹಿಳಾ ಮಂಡಳದ ಅಧ್ಯಕ್ಷೆ ಲಲಿತಾಬಾಯಿ ಸಪ್ಪರದ, 4 ದೇವಾಂಗ ಪೇಟೆಗಳ ಅಧ್ಯಕ್ಷರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...