ಗದಗ | ಸಂವಿಧಾನ ಪೀಠಿಕೆ ಓದುವ ಮೂಲಕ ನವ ಜೀವನಕ್ಕೆ ಕಾಲಿಟ್ಟ ವಧು-ವರರು

Date:

  • ಬುದ್ಧ, ಬಸವ ಮತ್ತು ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ
  • ಗದಗ ಜಿಲ್ಲೆಯ ಡೋಣಿ ಗ್ರಾಮದಲ್ಲಿ ಸಂವಿಧಾನ ಸಾಕ್ಷಿ ಮದುವೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ‘ಸಂವಿಧಾನ’ ಸಾಕ್ಷಿಯಾಗಿ ಈರಣ್ಣ ಜೊತೆ ನೇತ್ರಾವತಿ ಹಾಗೂ ಮಲ್ಲಪ್ಪ ಜೊತೆ ಕವಿತಾ ನವ ಜೋಡಿಗಳು ವಿಶೇಷ ರೀತಿಯಲ್ಲಿ ವಿವಾಹವಾದರು.

ಹಣತೆ ಹಚ್ಚುವ ಮೂಲಕ ಸಂವಿಧಾನ ಸಾಕ್ಷಿ ವಿವಾಹಕ್ಕೆ ಚಾಲನೆ ನೀಡಲಾಯಿತು. ಬುದ್ಧ, ಬಸವ ಮತ್ತು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ರಾಮಚಂದ್ರ ಹಂಸನೂರು ನವ ಜೋಡಿಗಳಿಗೆ ಸಂವಿಧಾನದ ಪೀಠಿಕೆ ಬೋಧಿಸುವುದರೊಂದಿಗೆ ನವ ಜೋಡಿಗಳು ನವ ಜೀವನಕ್ಕೆ ಕಾಲಿಟ್ಟರು.

ಕಾರ್ಯಕ್ರಮದಲ್ಲಿ ಚಂದ್ರಶೇಖರ್ ರಾಮೇನಹಳ್ಳಿ ಸಂವಿಧಾನ ಪೂರ್ವ ಪೀಠಿಕೆ ಬೋಧಿಸಿ ಮಾತನಾಡಿ, “ಸಂವಿಧಾನ ಆಶಯಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಯಾವುದೇ ರೀತಿಯ ತಾರತಮ್ಯ ಮಾಡಬಾರದೆಂದು ಡಾ. ಬಿ ಆರ್ ಅಂಬೇಡ್ಕರ್ ಅಂದು ಸಂವಿಧಾನವನ್ನು ರಚನೆ ಮಾಡಿಕೊಟ್ಟಿದ್ದಾರೆ. ಸಂವಿಧಾನ ಜೀವನ ಮೌಲ್ಯವಾಗಬೇಕೆಂದು ನಮ್ಮೆಲ್ಲರ ಆಶಯ, ಅಂಬೇಡ್ಕರ್ ಅವರ ಆಶಯವು ಆಗಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನವಜೋಡಿಗಳು ಮದುವೆ ಎಂಬುದು ನಂಬಿಕೆ ಮೇಲೆ ನಿಂತಿರುವುದು. ಒಬ್ಬ ಹುಡುಗ ಒಬ್ಬ ಹುಡುಗಿ ಪರಸ್ಪರ ಒಪ್ಪಿ ಇಡೀ ಜೀವನವನ್ನು ಜೊತೆಗೆ ಕಳೆಯುವುದು” ಎಂದರು.

“ದೇವಸ್ಥಾನಗಳಿಗೆ ಹೋಗ್ತಿರಿ ಏನಾದ್ರು ಕೊಟ್ಟಿದೆಯಾ, ಅದೇ ಸಂವಿಧಾನದ ಮೂಲಕ ನೀವು ಏನು ಕೇಳಿದರೂ ಅದು ನಿಮ್ಮ ಹಕ್ಕು ಎಂದು ಕೊಡುತ್ತದೆ. ಅದನ್ನು ಮಾಡಿದವರು ಅಂಬೇಡ್ಕರ್. ಪ್ರತಿಯೊಬ್ಬರು ಶಿಕ್ಷಣ ಪಡೆಯುವ ಹಕ್ಕನ್ನು ಕಲ್ಪಿಸಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡದೆ ಇರುವುದಾಗಲಿ, ಅವಕಾಶ ಕೊಡದೇ ಇರುವುದಾಗಲಿ ಯಾವುದನ್ನು ಮಾಡದೇ ತಂದೆ ತಾಯಿಗಳು ತಾರತಮ್ಯ ಮಾಡದೇ ತಮ್ಮ ಮಗಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಹೆಣ್ಣು ಮಗಳನ್ನು ಗೌರವಯುತವಾಗಿ, ಧೈರ್ಯವಾಗಿ ಬದುಕಲು ಕಲಿಸಬೇಕು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ದಲಿತ ಮುಖಂಡ ಶರೀಫ ಬಿಳಿಯಲಿ ಪ್ರಾಸ್ತಾವಿಕವಾಗಿ ಮಾತನಾಡಿ, “ಅಂಬೇಡ್ಕರ್ ಅವರ ಬಗ್ಗೆ ಸಾಕಷ್ಟು ಮಾತನಾಡಬಹುದು, ಅಂಬೇಡ್ಕರ್ ಯೋಜನೆಗಳನ್ನ ಪಡೆಯಬಹುದು, ಆದರೆ, ಅಂಬೇಡ್ಕರ್ ಬದುಕಿದ ರೀತಿಯಲ್ಲಿ, ಅವರು ಕಟ್ಟಿಕೊಟ್ಟಿರುವ ಆಶಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿಲ್ಲ. ಕಾರಣ ನಮ್ಮೊಳಗೆ ಇರುವ ಆಚರಣೆ, ಇಂತಹ ಸಮಯಕ್ಕೆ ತಾಳಿ ಕಟ್ಟಬೇಕು ಎಂಬ ಆಚರಣೆಗಳನ್ನು ನಾವು ಬಿಟ್ಟಿಲ್ಲ. ನಾಲ್ಕು ಮಂದಿ ಹಿರಿಯರು, ನಾಲ್ಕು ಮಂದಿ ಸ್ನೇಹಿತರು, ನಾಲ್ಕು ಜನ ತಾಯಂದಿರು ಸೇರಿದ್ರು, ನಾವು ಎಷ್ಟೇ ಜನರಿದ್ರು ಶುಭ ಲಗ್ನ ಎನ್ನಿರಯ್ಯ” ಎಂದು ಬಸವಣ್ಣನವರ ಮಾತನ್ನು ನೆನಪಿಸಿದರು.

ಈ ಸುದ್ದಿ ಓದಿದ್ದೀರಾ? ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು; ಹೈಕೋರ್ಟ್ ಆದೇಶ

“ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲ ಹಕ್ಕುಗಳನ್ನು ಕೊಟ್ಟಿದ್ದಾರೆ. ಆ ಹಕ್ಕುಗಳನ್ನು ಮರೆತು ನಾವು ಇಂದು ಗೊಡ್ಡು ಸಂಪ್ರದಾಯಗಳ ವೈದಿಕ ಆಚರಣೆಗೆ ಬಲಿಯಾಗುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

ಭಾವ ಸಂಗಮ ವಿವಾಹ ವೇದಿಕೆ ಗದಗ, ಲಡಾಯಿ ಪ್ರಕಾಶನ ಗದಗ, ದಲಿತ ಕಲಾ ಮಂಡಳಿ ಡಾ. ಬಿ ಆರ್ ಅಂಬೇಡ್ಕರ್ ನಗರ ಡೋಣಿ ಯುವಕರ ಸಹಯೋಗದಲ್ಲಿ ಜರುಗಿದ ವಿವಾಹದಲ್ಲಿ ಮುಖಂಡರಾದ ಆನಂದ ಸಿಂಗಾಡಿ, ರಮೇಶ ಬಾಳಮ್ಮನವರ, ಮಲ್ಲೇಶ ಹೊಸಮನಿ, ಮುತ್ತು‌ಬಿಳಿಯಲಿ, ಶಿವಾನಂದ ಬಿಳಿಯಲಿ, ವಿಜಯ ಜಲವಾದಿ, ಮಲ್ಲೇಶ ಹೊಸಮನಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...