ಸಮಾಜವನ್ನು ಕೋಮು ದೌರ್ಜನ್ಯದಿಂದ ಮುಕ್ತಗೊಳಿಸಲು ಸಂವಿಧಾನದಿಂದ ಸಾಧ್ಯ

Date:

ಸಮಾಜವನ್ನು ಕೋಮುವಾದ ದೌರ್ಜನ್ಯದಿಂದ ಮುಕ್ತಗೊಳಿಸಲು ಸಂವಿಧಾನದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥಮಾಡಿಕೊಳ್ಳಬೇಕು. ಇತರರಿಗೆ ಸಂವಿಧಾನದ ಆಶಯಗಳನ್ನು ಅರ್ಥಮಾಡಿಸಬೇಕು. ಯುವಕರು ಧರ್ಮ ಜಾತಿಯ ಭೇದ ಭಾವವಿಲ್ಲದೆ ಎಲ್ಲರನ್ನು ಪ್ರೀತಿಸುವಂತಾಗಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಹೇಳಿದರು.

ಕೋಲಾರ ನಗರದ ಸುವರ್ಣ ಕನ್ನಡ ಭವನದಲ್ಲಿ ನಡೆದ ʼಸಂವಿಧಾನ ಓದು ಅಭಿಯಾನʼದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, “ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಹಂಚಿಕೊಳ್ಳಬೇಕು. ಸಮಯ ಸಿಕ್ಕಾಗ ಜಾತ್ಯತೀತ ಮತ್ತು ಸಮ ಸಮಾಜದ ಬಗ್ಗೆ ಮಾತನಾಡಿ. ಪ್ರತಿಯೊಬ್ಬರು ಸಂವಿಧಾನದ ಆಶಯಗಳನ್ನು ಸಮಾಜದಲ್ಲಿ ಪಸರಿಸಬೇಕು” ಎಂದರು.

ಬೆಂಗಳೂರಿನ ಅನಂತ ನಾಯಕ್ ಮಾತನಾಡಿ, “ಸಂವಿಧಾನದ ಆಶಯಗಳನ್ನು ಮತ್ತು ಮೌಲ್ಯಗಳನ್ನು ಪ್ರಚಾರ ಮಾಡಬೇಕು .ಕೋಮುವಾದ ,ಜಾತಿ ವ್ಯವಸ್ಥೆಯಿಂದ ನಡೆಯುವ ದೌರ್ಜನ್ಯಗಳನ್ನು ಸಂವಿಧಾನ ಮಾತ್ರ ತಡೆಯ ಬಹುದಾಗಿದೆ.ಎಲ್ಲರು ಸಮಾನರೆಂಬ ಭಾವನೆ ಬರಬೇಕಾದರೆ ಸಂವಿಧಾನದ ಆಶಯಗಳನ್ನು ಪಾಲಿಸಬೇಕು. ಅಲ್ಪ ಸಂಖ್ಯಾತರನ್ನು ಅನುಮಾನದಿಂದ ನೋಡಲಾಗುತ್ತಿದೆ. ಸಮಾಜವನ್ನು ಕೋಮುವಾದ ದೌರ್ಜನ್ಯದಿಂದ ಮುಕ್ತಗೊಳಿಸಲು ಸಂವಿಧಾನದಿಂದ ಮಾತ್ರ ಸಾಧ್ಯ .ಸಮ ಸಮಾಜ ಮತ್ತು ಜಾತಿರಹಿತ ಸಮಾಜ ನಿರ್ಮಾಣ ಮಾಡಲು ಸಂವಿಧಾನವನ್ನು ಅಸ್ತ್ರವನ್ನಾಗಿ ಬಳಸಬೇಕೆಂದು” ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

“ಸಂವಿಧಾನದ ರಥವನ್ನು ರಾಜ್ಯದ ಎಲ್ಲ ಕಡೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನಿರಂತರವಾಗಿ ಎಲ್ಲೆಡೆ ಎಳೆದುಕೊಂಡು ಹೋಗುತ್ತಿದ್ದಾರೆ. ಅವರೊಂದಿಗೆ ನಾವು ಹೆಗಲು ನೀಡ ಬೇಕು. ಸಂವಿಧಾನದ ಆಶಯಗಳನ್ನು ನಿರಂತರವಾಗಿ ಎಲ್ಲರಿಗೂ ತಲಪಿಸಬೇಕು. ಸಂವಿಧಾನವನ್ನು ಬದಲಿಸುತ್ತೇವೆ ಎಂದು ಒಂದು ಗುಂಪು ಹೇಳುತ್ತಿದೆ. ಅವರಿಗೆ ಸಂವಿಧಾನದ ಆಶಯಗಳ ಬಗ್ಗೆ ಅರಿವು ಇಲ್ಲ. ಪದೇ ಪದೇ ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ. ದೇಶದ ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರ ಕಲ್ಪಿಸಲಾಗಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡ ಅನಂತನಾಯಕ್, ಅರಿವು ಭಾರತ ಸಂಸ್ಥೆಯ ಅರಿವು ಶಿವಪ್ಪ, ಕಸಾಪ ನಿಕಟಪೂರ್ವ ಜಿಲ್ಲಾಧ್ಯಕ್ಷ ಜೆ.ಜಿ. ಲೇಖಕ ಗೋವಿಂದಪ್ಪ, ಮೌಲಾನ ಅತೀಕ್ ಉರ್ ರೆಹಮಾನ್, ಕೋಲಾರ ಕೂಡ ಅಧ್ಯಕ್ಷ ಹನೀಫ್, ಕೋಮಲ್ ನಿರ್ದೇಶಕ ಷಂಷೀರ್, ರಾಜ್ ವಕ್ಫ್ ಬೋರ್ಡ್ ನಿರ್ದೇಶಕ ಸಚೀನ್ ಜಾವೀದ್, ಬೆಳಕು ಸಂಸ್ಥೆಯ ರಾಧಾಮಣಿ, ದಲಿತ ಮುಖಂಡ ಟಿ.ವಿಜಯಕುಮಾರ್, ರೈತ ಮುಖಂಡ ಅಬ್ಬಣಿ, ಶಿವಪ್ಪ, ಹೂವಳ್ಳಿ ನಾಗರಾಜ್, ಅರಿಫ್ ಉಲ್ಲಾ ಖಾನ್, ಶಶಿಕುಮಾರ್, ಗೋವಿಂದಪ್ಪ, ಗೋಪಿನಾಥ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ ಶ್ರೀನಿವಾಸನ್, ವಿವಿಧೆಡೆಯಿಂದ ಬಂದಿದ್ದ ಪ್ರತಿನಿಧಿಗಳು, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...