ʼಆಟಿʼಯ ಸಾಂಸ್ಕೃತಿಕ ಅರ್ಥ ಅರಿಯಬೇಕಿದೆ: ಡಾ. ಕಾರಂತ ಟ್ರಸ್ಟ್‌ನ ಅಮೃತಾ ಶೆಟ್ಟಿ

Date:

ʼಆಟಿʼಯೆಂದರೆ ಹತ್ತಾರು ಬಗೆಯ ತಿಂಡಿಗಳನ್ನು ತಯಾರಿಸಿ ಸವಿಯುವುದಷ್ಟೇ ಅಲ್ಲ, ಬದಲಾಗಿ ಆಟಿಯ ನೈಜ ಮಹತ್ವ ಹಾಗೂ ನಿಜವಾದ ಸಾಂಸಕೃತಿಕ ಅರ್ಥ ತಿಳಿಯುವ ಕೆಲಸ ನಡೆಯಬೇಕಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯೆ ಆತ್ರಾಡಿ ಅಮೃತಾ ಶೆಟ್ಟಿ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಮಹಿಳಾ ಘಟಕ ಉರ್ವದ ತುಳು ಭವನದಲ್ಲಿ ಆಯೋಜಿಸಿದ್ದ ʼಆಟಿದ ಗೇನʼ ಕಾರ್ಯಕ್ರಮದಲ್ಲಿ ಆಟಿಯ ಕುರಿತು ಅವರು ಮಾತನಾಡಿದರು.

“ಆಟಿ ತಿಂಗಳ ಸಮಸ್ಯೆಗಳ ಬಗ್ಗೆ ತಿಳಿಯಬೇಕು, ಈಗ ಆ ರೀತಿಯ ಸಮಸ್ಯೆಗಳಿಲ್ಲ. ಆದರೆ, ಮುಂದಿನ ಪೀಳಿಗೆಗೆ ಅದರ ಅರಿವು ಇರಬೇಕು. ಆಟಿ ಕಷಾಯ ಕುಡಿಯುವ ಕಾರಣ ಮತ್ತು ಪರಿಣಾಮಗಳನ್ನು ತಿಳಿದುಕೊಳ್ಳಬೇಕು. ಆಟಿ ಎಂದರೆ ಅನಿಷ್ಟ ಅಲ್ಲ. ಒಳ್ಳೆಯ, ಸುಖದ ತಿಂಗಳು. ತುಳುವ ಹೆಣ್ಣಿನ ತಾಕತ್ತು ಮತ್ತು ಮನೆ ಸಂಸಾರ ನಿಭಾಯಿಸಯವ ಶಕ್ತಿ ನಿರೂಪಣೆಯ ಹಾಗೂ ಸಾಬೀತುಪಡಿಸುವ ಸಮಯವಾಗಿದೆ. ಮನೆಯವರಿಗೂ ಬಂದವರಿಗೂ ಹೊಟ್ಟೆ ತುಂಬಿಸುವ ಆಕೆಯ ಕಾಳಜಿ ಮತ್ತು ಬದುಕಿನ ಮೌಲ್ಯ ತಿಳಿದುಕೊಳ್ಳಬೇಕು. ಮಳೆಗಾಲದಲ್ಲಿ ತಿನ್ನುವ ಆಹಾರವೆಲ್ಲವೂ ಹಸಿವಿಗೆ ಹೊರತು ನಾಲಗೆ ರುಚಿಗಲ್ಲ. ಆಟಿ ಕಷಾಯ ಹಿಂದಿನವರಿಗೆ ಬದುಕಿನ ಭಾಗವಾಗಿತ್ತು. ಈಗ ಸೋಷಿಯಲ್ ಮೀಡಿಯಾ ಮಿಂಚಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, “ಆಟಿಯಲ್ಲಿ ಕೇವಲ ಗದ್ದೆಯ ಕೆಸರಿನಲ್ಲಿ ಆಡುವುದಷ್ಟೇ ಸೀಮಿತವಾಗದೆ, ವರ್ಷದಲ್ಲಿ ಒಂದು ಬಾರಿಯಾದರೂ ಭತ್ತ ಬೆಳೆಸುವ ಉಮೇದನ್ನು ಬೆಳೆಸಿಕೊಳ್ಳೋಣ, ಹಡಿಲು ಬಿದ್ದ ಗದ್ದೆಯಲ್ಲಿ ಮತ್ತೆ ಬೆಳೆ ಮಾಡುವುದರತ್ತ ಚಿತ್ತ ಹರಿಸಬೇಕಿದೆ” ಎಂದರು.

ಇದನ್ನೂ ಓದಿ: ಮಂಗಳೂರು | ಕಲ್ಲಚ್ಚು ಪ್ರಶಸ್ತಿ; ಐವರು ಸಾಧಕರು ಆಯ್ಕೆ

ಎಜೆ ಆಸ್ಪತ್ರೆಯ ಫಿಸಿಯಾಲಜಿ ವಿಭಾಗದ ಡಾ.ಕಲ್ಪನಾ ಅಶ್ಫಕ್ ಕಾರ್ಯಕ್ರಮ ಉದ್ಘಾಟಿಸಿದರು. ಮುಂಡಾಲ ಯುವ ವೇದಿಕೆ ಅಧ್ಯಕ್ಷ ಪ್ರದೀಪ್ ಕಾಪಿಕಾಡ್, ಮಲಾರ್ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲ ಎಸ್. ಪೊಳಲಿ, ಗ್ರಾ.ಪಂ.ಪಿಡಿಒ ವಸಂತಿ ಜಯಪ್ರಕಾಶ್, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಪವಿತ್ರಾ ಕೆ, ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಚೇತನಾ ರೋಹಿತ್ ಉಳ್ಳಾಲ್, ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಕವಿತಾ ಶೈಲೇಶ್, ಶಿಕ್ಷಕಿ ಮಲ್ಲಿಕಾ ರಘುರಾಜ್, ವೀಣಾ ಶ್ರೀನಿವಾಸ್, ಹರೀಶ್ ಕೊಡಿಯಾಲ್ ಬೈಲ್, ಕಿರಣ್, ರಘುರಾಜ್ ಕದ್ರಿ, ರಜನೀಶ್ ಕಾಪಿಕಾಡ್ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...