ಬೀದರ್‌ | ಕಮಲನಗರ ಬರಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ರೈತ ಸಂಘ ಆಗ್ರಹ

Date:

  • ಅತಿವೃಷ್ಟಿ- ಅನಾವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಹಾನಿಯಾಗಿದೆ.
  • ತೆಲಂಗಾಣ ಮಾದರಿಯಲ್ಲಿ ಪ್ರತಿ ಎಕರೆಗೆ ರೂ.10 ಸಾವಿರ ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು.

ಮುಂಗಾರು ಹಂಗಾಮಿನ ಬೆಳೆ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಹಾನಿಯಾಗಿದೆ. ಸಾಲ ಸೂಲ ಮಾಡಿ ಬಿತ್ತನೆ ಮಾಡಿದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಕಮಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಿ, ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕಮಲನಗರ ಪಟ್ಟಣದ ಡಾ. ಚನ್ನಬಸವ ಪಟ್ಟದ್ದೇವರು ಗ್ರಂಥಾಲಯದಿಂದ ಮುಖ್ಯರಸ್ತೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮಿನಿ ಬಸ್‌ ನಿಲ್ದಾಣ ಎದುರುಗಡೆ ಕೆಲಕಾಲ ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

“ಮುಂಗಾರು ಬೆಳೆಗಳಾದ ಹೆಸರು , ಉದ್ದು, ಸೊಯಾಬಿನ್‌ ಸೇರಿದಂತೆ ಇತರೆ ಬೆಳೆಗಳು ಅನಾವೃಷ್ಠಿಯಿಂದ ಬಹುತೇಕ ಹಾನಿಯಾಗಿವೆ. ಮೊದಲೇ ರೈತರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಸರ್ಕಾರ ರೈತ ಸಮ್ಮಾನ ಯೋಜನೆಯ ಮೂಲಕ ನೀಡಬೇಕಾದ 4 ಸಾವಿರ ರೂ. ಸಹಾಯಧನ ಕೂಡ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದರ, ಔರಾದ ತಾಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ, ಔರಾದ ತಾಲೂಕು ಅಧ್ಯಕ್ಷ ಪ್ರಕಾಶ ಬಾವಗೆ, ಭಾಲ್ಕಿ ತಾಲೂಕು ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದರ, ವಿಶ್ವನಾಥ ಧರಣೆ, ಹಿರಿಯ ಹೋರಾಟಗಾರ ವೈಜಿನಾಥ ವಡ್ಡೆ, ಮಹೋಹರರಾವ ಹೊರಂಡಿ ಹಾಗೂ ಪ್ರಮುಖರಾದ ಬಸವರಾಜ ಬಿರಾದರ. ರಮೇಶ ಪಾಟೀಲ್, ಸಿದ್ರಾಮಪ್ಪ ಡಿಗ್ಗಿ, ರಾಜಕುಮಾರ ಬಿರಾದರ ಸೇರಿದಂತೆ ಇತರರಿದ್ದರು.

ಬೇಡಿಕೆಗಳು:

  1. ಬೆಳೆ ವಿಮೆ ಕಟ್ಟಿದ ರೈತರಿಗೆ ತಕ್ಷಣ ಬೆಳೆ ವಿಮೆ ಕಂಪನಿಯಿಂದ ಹಣ ಬಿಡುಗಡೆ ಮಾಡಿ ರೈತರ ಖಾತೆಗೆ ಜಮೆ ಮಾಡಿಸಬೇಕು.
  2. ಕೇಂದ್ರ ಸರಕಾರ ಕಬ್ಬಿಗೆ ಎಫ್.ಆರ್.ಪಿ. ದರ ನಿಗದಿಪಡಿಸಿದಂತೆ ರಾಜ್ಯ ಸರಕಾರವೂ ಎಸ್.ಎ.ಪಿ. ದರ ನಿಗದಿಪಡಿಸಿ ಪ್ರತಿ ಟನ್‌ಗೆ ರೂಪಾಯಿ 500 ರೂ. ರಂತೆ ಕೊಡಬೇಕು.
  3. ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿಬೇಕು.
  4. 2020 ರಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳು ಕೇಂದ್ರ ಸರಕಾರ ರದ್ದುಪಡಿಸಿದಂತೆ ರಾಜ್ಯ ಸರಕಾರವೂ ರದ್ದುಪಡಿಸಬೇಕು.
  5. ರಾತ್ರಿ ಸಮಯದಲ್ಲಿ ರೈತರ ತೋಟದ ಮನೆಗಳಿಗೆ ವಿದ್ಯುತ್ ಒದಗಿಸಬೇಕು.
  6. ನಮ್ಮ ಹೊಲ ನಮ್ಮ ದಾರಿ ಯೋಜನೆಯಲ್ಲಿ ರೈತರ ಹೊಲಗಳಿಗೆ ದಾರಿ ನಿರ್ಮಿಸಬೇಕು.
  7. ಕಾಡು ಪ್ರಾಣಿಗಳಿಂದ ರೈತರ ಬೆಳೆ ರಕ್ಷಣೆಗೆ ಅರಣ್ಯ ಇಲಾಖೆ ಪರ್ಯಾಯ ವ್ಯವಸ್ಥೆ ರೂಪಿಸಿ ರೈತರ ಹಿತ ಕಾಪಾಡಬೇಕು.
  8. ತೆಲಂಗಾಣ ಮಾದರಿಯಲ್ಲಿ ಪ್ರತಿ ಎಕರೆಗೆ ರೂ.10 ಸಾವಿರ ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೋರುತ್ತಿದೆ ಸರ್ಕಾರಿ ಶಾಲಾ ಮಾಳಿಗೆ; ಆತಂಕದಲ್ಲಿ ಮಕ್ಕಳು

  1. ಹಿಂದಿನ ಬಿಜೆಪಿ ನೇತ್ರತ್ವದ ರಾಜ್ಯ ಸರ್ಕಾರ ರೈತ ಸಮ್ಮಾನ ಯೋಜನೆಯಡಿ ನೀಡುತ್ತಿದ್ದ 4ಸಾವಿರ ರೂ. ಕಾಂಗ್ರೇಸ್‌ ಸರ್ಕಾರವೂ ನೀಡಬೇಕು.
  2. ಸಹಕಾರ ಬ್ಯಾಂಕ್‌ ನಿಂದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷದವರೆಗೆ ಸಾಲ ನೀಡಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...