ಮೈಸೂರು | ರೈತ ಚಳವಳಿಯೂ ಗಾಂಧೀ ಮಾರ್ಗದ ತತ್ವ ಸಿದ್ಧಾಂತದಲ್ಲಿ ನಡೆಯುತ್ತಿದೆ : ಹೊಸೂರು ಕುಮಾರ್

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಬಿಳಿಕೆರೆ ಹೋಬಳಿಯ ಕುಪ್ಪೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ 157ನೇ ವರ್ಷದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ ‘ರೈತ ಚಳವಳಿಯೂ ಗಾಂಧೀ ಮಾರ್ಗದ ತತ್ವ ಸಿದ್ಧಾಂತದಲ್ಲಿ ನಡೆಯುತ್ತಿದೆ’ ಎಂದು ತಿಳಿಸಿದರು.

ಶಾಂತಿ ಮಾರ್ಗದ ಹೋರಾಟದಿಂದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ರೈತ ಚಳವಳಿ ಎಂದಿಗೂ ದುರುಪಯೋಗ ಆಗದಂತೆ ನಡೆದುಕೊಳ್ಳಬೇಕಾದ ಕರ್ತವ್ಯ ಕಾರ್ಯಕರ್ತರ ಮೇಲಿದೆ. ಚಳವಳಿಯನ್ನು ಮೊನ್ನೆಡೆಸುವ ಜವಾಬ್ದಾರಿ ಗ್ರಾಮ ಪದಾಧಿಕಾರಿಗಳದ್ದಾಗಿದೆ. ಸ್ಥಳೀಯವಾಗಿ ಸಾಂಘಿಕ ಹೋರಾಟದ ಮೂಲಕ ನೊಂದವರಿಗೆ ನ್ಯಾಯ ಒದಗಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ರೈತ ಚಳವಳಿ ಎಂದೆಂದಿಗೂ ಗಾಂಧೀಯವರನ್ನು ನೆನೆಯುವ ಅತ್ಯಗತ್ಯವಿದೆ. ಅವರ ಆಶಯಗಳನ್ನು ಹೋರಾಟದಲ್ಲಿ ಅಳವಡಿಸಿಕೊಂಡು ಸಾಗಬೇಕಿದೆ. ಜಡ್ಡು ಗಟ್ಟಿದ ಆಡಳಿತ ವ್ಯವಸ್ಥೆ, ಸರ್ಕಾರಗಳಿಗೆ ಹೋರಾಟವೊಂದೇ ಬಿಸಿ ಮುಟ್ಟಿಸಲಿರುವ ಏಕೈಕ ದಾರಿ. ಆದ್ದರಿಂದ, ಸಂಘಟಿತರಾಗಿ ಪ್ರಬಲ ಹೋರಾಟ ನಡೆಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷರಾದ ಬೆಂಕಿಪುರ ಚಿಕ್ಕಣ್ಣ, ಈಶ್ವರ್, ಜಿಲ್ಲಾ ಪದಾಧಿಕಾರಿಗಳಾದ ಬಸವರಾಜೆ ಗೌಡ, ಅಗ್ರಹಾರ ರಾಮೇಗೌಡ, ತಂಬಾಕು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮೋದೂರು ಶಿವಣ್ಣ, ಗೌರವಧ್ಯಕ್ಷ ಚಂದ್ರೆಗೌಡ, ಕಟ್ಟೆಮಳಲವಾಡಿ ಮಹದೇವು, ರವಿ, ಮಹೇಶ್, ಗ್ರಾಮ ಅಧ್ಯಕ್ಷ ಮಹದೇವು, ಶಂಕರ್, ಮಾದೇವು, ವೆಂಕಟೇಶ್, ಅಣ್ಣೆಗೌಡ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...