ಕೊಪ್ಪಳದಲ್ಲಿ ‘ಜಿಂಕೆ ಪಾರ್ಕ್‌’ ನಿರ್ಮಾಣಕ್ಕೆ ರೈತ ಸಂಘ ಆಗ್ರಹ

Date:

  • ಜಿಂಕೆಗಳ ಹಾವಳಿಯಿಂದ ಬೇಸತ್ತು ಹೋಗಿರುವ ರೈತರು
  • ನೂತನ ಸರ್ಕಾರವಾದರೂ ಜಿಂಕೆ ಪಾರ್ಕ್‌ ನಿರ್ಮಿಸಲಿ

ಜಿಂಕೆಗಳ ಹಾವಳಿಯಿಂದ ರೈತರು ಹೈರಾಣಾಗಿದ್ದು, ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನೂತನ ಸರ್ಕಾರವಾದರೂ ಕೊಪ್ಪಳದಲ್ಲಿ ಜಿಂಕೆ ಪಾರ್ಕ್‌ (ಉದ್ಯಾನ) ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಆಗ್ರಹಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಜಿಂಕೆ ಪಾರ್ಕ್ ನಿರ್ಮಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ 2005 ರಿಂದ ಹೋರಾಟ ನಡೆಯುತ್ತಿದೆ. ಇಷ್ಟು ದೀರ್ಘ ಕಾಲದಿಂದ ಹೋರಾಟ ಮಾಡುತ್ತಾ ಬಂದರೂ ಈ ವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಯಾವೊಬ್ಬ ಮುಖ್ಯಮಂತ್ರಿ ಮತ್ತು ಜನಪ್ರತಿನಿಧಿಗಳು ಜಿಂಕೆ ಪಾರ್ಕ್ ನಿರ್ಮಾಣದ ಬಗ್ಗೆ ಗಮನ ಹರಿಸಿಲ್ಲ.

ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಗದ್ದುಗೆ ಏರುವವರು ಯಾರೆ ಇರಲಿ ಕೊಪ್ಪಳ ಜಿಲ್ಲೆಯಲ್ಲಿ ಒಂದು ಜಿಂಕೆ ಪಾರ್ಕ್ ನಿರ್ಮಾಣ ಮಾಡಿಕೊಡಬೇಕೆಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೊಪ್ಪಳ ಜಿಂಕೆ

ಉತ್ತರ ಕರ್ನಾಟಕ ಭಾಗದ ಕೊಪ್ಪಳ, ರಾಯಚೂರು, ಗದಗ, ಬಳ್ಳಾರಿ, ಹಾವೇರಿ ಮತ್ತು ಧಾರವಾಡ, ಬಾಗಲಕೋಟೆ, ಬೀದರ್ ಈ ಎಂಟೂ ಜಿಲ್ಲೆಗಳಲ್ಲಿ ರೈತರು ಜಿಂಕೆ ಹಾವಳಿಗೆ ಬೆಸತ್ತು ಹೋಗಿದ್ದಾರೆ. ಕಳೆದ 18 ವರ್ಷಗಳಿಂದ ಈ ಸಮಸ್ಯೆ ಇದ್ದರೂ ಯಾವ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಜಿಂಕೆ ಪಾರ್ಕ್ ನಿರ್ಮಾಣ ಮಾಡಿಕೊಡಲು ಮುಂದೆ ಬರಲಿಲ್ಲ ಎಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ ಆರೋಪಿಸಿದ್ದಾರೆ.

2010ರಲ್ಲಿ ಗದಗ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೂಲಕ ಜಿಂಕೆ ಪುಸ್ತಕ ಬಿಡುಗಡೆ ಮಾಡಿಸಿದ್ದೇವು. ನಂತರ 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಮತ್ತು ಸಚಿವ ಬಸವರಾಜ ರಾಯರಡ್ಡಿ ಹಾಗೂ ಅರಣ್ಯ ಸಚಿವರಿಗೆ 2016ರ ಜುಲೈ 15ರಿಂದ ಆಗಸ್ಟ್ 15 ರವರಿಗೆ ಒಂದು ತಿಂಗಳ ಕಾಲ ಜಿಂಕೆ ಪಾರ್ಕ್ ಮಾಡಲು ಪತ್ರ ಚಳುವಳಿ ಮಾಡಲಾಗಿತ್ತು. ಅಲ್ಲದೇ ಮೂವರಿಗೂ ಎಸ್ಎಂಎಸ್ ಚಳವಳಿ ಮಾಡಿದೇವು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇದ್ರೀಸ್‌ ಪಾಷ ಸಾವು ಪ್ರಕರಣ | ಪುನೀತ್‌ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

2017ರಲ್ಲಿ “ಜಿಂಕೆ ಕಾಟ – ರೈತರ ಪರದಾಟ” ಎಂಬ 21 ನಿಮಿಷದ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಿ ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಗಮನ ಸೇಳೆದರೂ ಯಾವ ಸರ್ಕಾರವು ಜಿಂಕೆ ಪಾರ್ಕ್ ನಿರ್ಮಾಣ ಮಾಡಿ ಕೊಡಲಿಲ್ಲ ಎಂದು ರೈತ ಮುಖಂಡ ಮಹೇಶಪ್ಪ ಹಡಪದ್ ಆಗ್ರಸಿದರು.  

ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಗದಗ ಜಿಲ್ಲೆಯ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಬಾಬರಿ, ಯರೇಹಂಚಿನಾಳ ಗ್ರಾಮ ಘಟಕ ಅಧ್ಯಕ್ಷ ಬಸವರಾಜ ಕಮತರ, ರವಿ ಕಮತರ, ಚನ್ನಪ್ಪ ನಾಲವಾಡ, ರವಿ ಹೊಸಮನಿ, ಕಿರಣ ಸೀಳಿನ್,  ರಾಜಪ್ಪ ಮಡಿವಾಳರ, ಫಕ್ಕಿರಪ್ಪ ಸೋಂಪೂರ, ಬಸವಣ್ಣಪ್ಪ ಕುರಿ, ಮಾರುತಿ ನೆರಗಲ್ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...