ಮೈಸೂರು | ಮೇಯರ್ ಶಿವಕುಮಾರ್ ಪಾಲಿಕೆಯ ಘನತೆಗೆ ಧಕ್ಕೆ ತಂದಿದ್ದಾರೆ‌; ಮಾಜಿ ಮೇಯರ್ ಆರೋಪ

Date:

  • ‘ಬಿಜೆಪಿ ಶಾಸಕ, ಸಂಸದರ ಕೈಗೊಂಬೆಯಾಗಿದ್ದಾರೆ ಮೇಯರ್ ಶಿವಕುಮಾರ್’
  • ʼಎಂಸಿಸಿಯಲ್ಲಿ ಶೇ.40ಕ್ಕೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆʼ

ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮೇಯರ್ ಶಿವಕುಮಾರ್ ಪದೇ ಪದೇ ಸಭೆಗಳನ್ನು ಮುಂದೂಡುವ ಮೂಲಕ ಮತ್ತು ಸ್ಥಾಯಿ ಸಮಿತಿಗಳ ಚುನಾವಣೆಯನ್ನು ವಿಳಂಬ ಮಾಡುವ ಮೂಲಕ ಪಾಲಿಕೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮೇಯರ್ ಅಯೂಬ್ ಖಾನ್ ಹಾಗೂ ಆರಿಫ್ ಹುಸೇನ್ ಆರೋಪಿಸಿದ್ದಾರೆ.

“ಶಿವಕುಮಾರ್ ಅವರು ಬಿಜೆಪಿ ಶಾಸಕ ಮತ್ತು ಸಂಸದರ ಕೈಗೊಂಬೆಯಾಗಿದ್ದಾರೆ. ಬಿಜೆಪಿಯವರ ಇಚ್ಛೆಯಂತೆ ವರ್ತಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಶಿವಕುಮಾರ್ ಅವರು ಮೇಯರ್‌ ಸ್ಥಾನ ಪಡೆದು ಆರು ತಿಂಗಳಾಯಿತು. ಈವರೆಗೆ ಕೇವಲ ಎರಡು ಕೌನ್ಸಿಲ್ ಸಭೆಗಳನ್ನು ನಡೆಸಿದ್ದಾರೆ. ಆದರೆ, ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಸಭೆ ನಡೆದಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಕುಮಾರ್ ಅವರು ಸರಿಯಾದ ಕಾರಣಗಳಿಲ್ಲದೆ ಉದ್ದೇಶಪೂರ್ವಕವಾಗಿ ಕೌನ್ಸಿಲ್ ಸಭೆಗಳನ್ನು ಮುಂದೂಡುತ್ತಿದ್ದಾರೆ. ಇದು ಮೈಸೂರಿನ ಅಭಿವೃದ್ಧಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಹಣಕಾಸು ಸ್ಥಾಯಿ ಸಮಿತಿ ರಚಿಸದೆ, ಈ ಹಣಕಾಸು ವರ್ಷದಲ್ಲಿ ಹಣಕಾಸು ಯೋಜನೆಯನ್ನು ಮಂಡಿಸಲು ಸಾಧ್ಯವಿಲ್ಲ” ಎಂದು ಅಯೂಬ್ ಖಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

50 ಲಕ್ಷ ರೂ.ಗಿಂತ ಹೆಚ್ಚಿನ ಅನುದಾನ ವೆಚ್ಚಯಾಗುವ ಯೋಜನಾ ಕಾಮಗಾರಿಗೆ ಸ್ಥಾಯಿ ಸಮಿತಿಯ ಅನುಮೋದನೆ ಬೇಕು. ಬಿಜೆಪಿ ನಾಯಕರು ತಮ್ಮ ಅಗತ್ಯಗಳಿಗೆ ತಕ್ಕಂತೆ ಕೆಲಸವನ್ನು ವಿಭಜಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಅನುಮೋದನೆ ಪಡೆಯುತ್ತಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ” ಎಂದು ಅಯೂಬ್ ಖಾನ್ ಹೇಳಿದರು.

ಬಿಜೆಪಿ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಿರುವ ಮೇಯರ್ ಶಿವಕುಮಾರ್ ಸದನದ ಘನತೆಯನ್ನು ಕಡಿಮೆ ಮಾಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ(ಎಂಸಿಸಿ)ಯಲ್ಲಿ ಇಂದು ಶೇ.40ಕ್ಕೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಮಾಜಿ ಮೇಯರ್ ಆರಿಫ್ ಆರೋಪಿಸಿದರು.

“ಶೇ.90ರಷ್ಟು ಕಾಮಗಾರಿಗಳಿಗೆ ಸ್ಥಾಯಿ ಸಮಿತಿ ಅನುಮೋದನೆ ಅಗತ್ಯವಿದೆ. ಶೇ.24.1ರಷ್ಟು ಮೀಸಲಾತಿ ಇದೆ. ಆದರೆ, ಈ ಬಾರಿ ಇನ್ನೂ ಸ್ಥಾಯಿ ಸಮಿತಿಯ ರಚನೆಯಾಗಿಲ್ಲ” ಎಂದು ಮಾಜಿ ಉಪಮೇಯರ್ ಶ್ರೀಧರ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...