ಮಂಡ್ಯ | ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ : ಭಾಸ್ಕರ್ ಪ್ರಸಾದ್ ಕಿಡಿ

Date:

ಮಂಡ್ಯ ಜಿಲ್ಲೆ, ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಒಳ ಮೀಸಲಾತಿ ಹೋರಾಟಗಾರ ಬಿ. ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ ಒಳ ಮೀಸಲಾತಿ ಜಾರಿ ಮಾಡದೆ ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ ಎಂದು ಕಿಡಿಕಾರಿದರು.

‘ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಹೋರಾಟದ ಗತಿ, ಸ್ವರೂಪ ಬದಲಾಯಿಸಬೇಕಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಇದುವರೆಗೆ ಸರ್ಕಾರ ಹೇಳಿದಂತೆ ನಡೆದುಕೊಂಡಿಲ್ಲ. ಈಗಲೂ ಸಹ ಮೀನಾಮೇಶ ಏಣಿಸುತ್ತಿದೆ ‘ ಎಂದು ಲೇವಡಿ ಮಾಡಿದರು.

ಮಾದಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಜಾರಿಯಾಗಬೇಕು. ಇದನ್ನೇ ಪ್ರತಿಭಟನೆ ಮೂಲಕ ಪ್ರಶ್ನೆ ಮಾಡುತ್ತಿರುವುದು ಹೊರತು ಯಾವುದೇ ಸಮುದಾಯವನ್ನು ಪ್ರಶ್ನೆ ಮಾಡುತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ಎ. ಜೆ ಸದಾಶಿವ ಆಯೋಗದ ವರದಿ, ಶಿಫಾರಸ್ಸು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕ್ರಾಂತಿಕಾರಿ ಅರೆಬೆತ್ತಲೆ, ಉರುಳು ಸೇವೆ, ಮೈ ಮೇಲೆ ಮಲ ಸುರಿದುಕೊಳ್ಳುವುದು ಸೇರಿದಂತೆ ವಿವಿಧ ರೀತಿಯಲ್ಲಿ ವಿನೂತನ ಪ್ರತಿಭಟನೆ ಮೂಲಕ ಸರ್ಕಾರವನ್ನು ಎಚ್ಚರಿಸಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮತ ಹಾಕಿದ ತಪ್ಪಿಗೆ ಚಡಿ ಏಟನ್ನು ಮೈ ತುಂಬ ನಾವೇ ಹೊಡೆದುಕೊಳ್ಳುತ್ತೇವೆ, ಒಳ ಮೀಸಲಾತಿ ಜಾರಿಯಾಗುವವರೆಗೂ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ನಿರಂತರ ಹೋರಾಟದಿಂದಾಗಿ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ಭರವಸೆ ನೀಡಿ ಜನಗಣತಿಗೆ ಅದೇಶಿಸಿದೆ. ಆದರೆ, ಈ ನಡುವೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಸಿ. ಮಹದೇವಪ್ಪ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳು, ಬಡ್ತಿ ಮೀಸಲಾತಿ ಮತ್ತು ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಲು ಮುಂದಾಗಿದ್ದಾರೆ.

ಇದು ಮಾದಿಗ ಸಮುದಾಯವನ್ನು ಸಮಾನತೆಯಿಂದ ವಂಚಿಸುವ ತಂತ್ರಗಾರಿಕೆ. ಒಳ ಮೀಸಲಾತಿ ಜಾರಿ ಮಾಡಿದ ನಂತರ ಯಾವುದೇ ಹುದ್ದೆಗಳನ್ನಾದರೂ ತುಂಬಿದರೂ ನಮ್ಮ ಅಭ್ಯಂತರವಿಲ್ಲ. ಒಳ ಮೀಸಲಾತಿ ಜಾರಿ ಮಾಡದೆ ಹೊಸ ನೇಮಕಾತಿ, ಬ್ಯಾಕ್ ಲಾಗ್ ಮತ್ತು ಬಡ್ತಿ ಮೀಸಲಾತಿ ಜಾರಿ ಮಾಡಿದಲ್ಲಿ ರಾಜ್ಯದ ಮಾದಿಗ ಸಮುದಾಯ ಉಗ್ರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಸಿದರು.

ಒಳ ಮೀಸಲಾತಿ ಆಗ್ರಹಿಸಿ ಮೈಸೂರಿನ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿಯಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಅರೆಬೆತ್ತಲೆ ಪಾದಯಾತ್ರೆ ಮಳವಳ್ಳಿಗೆ ಆಗಮಿಸಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಕಾರ್ಯಕರ್ತರು ಮಾಲಾರ್ಪಣೆ ಮಾಡಿದರು.

ಇದೇ ಜೂನ್ 9 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಲಕ್ಷಾಂತರ ಮಂದಿ ಹೋರಾಟಗಾರರು ಭಾಗವಹಿಸುವ ನಿರೀಕ್ಷೆ ಇದೆ. ಮಂಡ್ಯ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಪೊನ್ನಂಪೇಟೆ ಸಿಇಟಿ ಕಾಲೇಜು ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಪತ್ರಿಕಾಗೋಷ್ಠಿಯಲ್ಲಿ ನಡಕಲಪುರ ಮಂಜುನಾಥ್, ಕೃಷ್ಣಮೂರ್ತಿ, ರಮೇಶ್, ಶಿವನಂದ್, ಶಾಂತಕುಮಾರ್, ಅರುಣ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...