ಚುನಾವಣೆ ಘೋಷಣೆಗೂ ಮುನ್ನ ಶೋಧನೆ, ಜಪ್ತಿ ಮಾಡುವ ಅಧಿಕಾರವಿಲ್ಲ: ಹೈಕೋರ್ಟ್‌

Date:

  • 530 ಅಕ್ಕಿ ಮೂಟೆ ಹಿಂತಿರುಗಿಸುವಂತೆ ರಿಟರ್ನಿಂಗ್‌ ಅಧಿಕಾರಿಗೆ ಸೂಚನೆ
  • ಇಸ್ತಿಯಾಕ್‌ ಅಹಮದ್‌ ಎಂಬುವವರು ಹೈಕೋರ್ಟ್‌ ಮೆಟ್ಟಿಲೇರಿದ್ದರು

ಚುನಾವಣಾ ಅಧಿಕಾರಿಗಳಿಗೆ ಚುನಾವಣೆ ಘೋಷಣೆ ಬಳಿಕವಷ್ಟೇ ಶೋಧನೆಯ ಅಧಿಕಾರ ಇರುತ್ತದೆ. ಅದಕ್ಕೂ ಮುನ್ನ ಶೋಧನೆ ಮತ್ತು ವಸ್ತುಗಳ ಜಪ್ತಿ ಮಾಡಲು ಅಧಿಕಾರ ಇಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತನ ಕಡೆಯಿಂದ ವಶಪಡಿಸಿಕೊಂಡಿದ್ದ ಅಕ್ಕಿ ಮೂಟೆಗಳನ್ನು ವಾಪಸ್‌ ನೀಡಬೇಕು ಎಂದು ಚುನಾವಣಾಧಿಕಾರಿಗಳಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಇಸ್ತಿಯಾಕ್‌ ಅಹಮದ್‌ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು “ಚುನಾವಣೆ ಘೋಷಣೆಗೂ ಮುನ್ನ ರಿಟರ್ನಿಂಗ್‌ ಅಧಿಕಾರಿ ಅಥವಾ ಚುನಾವಣಾ ಅಧಿಕಾರಿಗಳು ಶೋಧ ನಡೆಸುವ ಹಾಗೂ ವಸ್ತುಗಳನ್ನು ಜಪ್ತಿ ಮಾಡುವ ಅಧಿಕಾರ ಹೊಂದಿರುವುದಿಲ್ಲ. ಕಾರಣ, ಅಧಿಕಾರಿಗಳನ್ನು ಚುನಾವಣೆ ನಡೆಸುವುದಕ್ಕಾಗಿಯೇ ನೇಮಕ ಮಾಡಲಾಗಿರುತ್ತದೆ. ಆದ್ದರಿಂದ ಚುನಾವಣೆಗೂ ಮುನ್ನ ಅವರು ಅಧಿಕಾರವನ್ನು ಬಳಸಲು ಆಗುವುದಿಲ್ಲ” ಎಂದು ತೀರ್ಪು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆ ಘೋಷಣೆ ಬಳಿಕವಷ್ಟೇ ಸಂಪೂರ್ಣ ಚುನಾವಣೆ ಪ್ರಕ್ರಿಯೆ ಪ್ರಾರಂಭ ಆಗುತ್ತದೆ. ಸಾಮಾನ್ಯ ಸಂದರ್ಭಗಳಲ್ಲಿ ಅಗತ್ಯ ವಸ್ತುಗಳ ಕಾಯಿದೆ 1955ರ ಅಡಿಯಲ್ಲಿ ಅಧಿಕಾರಿಗಳು ವಸ್ತುಗಳನ್ನು ವಶಪಡಿಸಿಕೊಳ್ಳುತ್ತಾರೆ. ಆದರೆ, ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರಿಗೆ ಶೋಧ ನಡೆಸುವ ಅಧಿಕಾರವನ್ನು ನೀಡಲಾಗಿಲ್ಲ. ಅವರ ಕ್ರಮ ಕೂಡ ಕಾನೂನುಬಾಹಿರವಾಗಿದೆ” ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಮಾರ್ಚ್‌ 19ರಂದು ಶಿವಾಜಿನಗರದ ತಮ್ಮ ನಿವಾಸದಲ್ಲಿದ್ದ 25 ಕೆ.ಜಿಯ 530 ಅಕ್ಕಿ ಮೂಟೆಗಳನ್ನು ಶಿವಾಜಿನಗರದ ರಿಟರ್ನಿಂಗ್‌ ಅಧಿಕಾರಿ ವಶಪಡಿಸಿಕೊಂಡ ಕಾರಣಕ್ಕೆ ಇಸ್ತಿಯಾಕ್‌ ಅಹಮದ್‌ ಅವರು ಹೈಕೋರ್ಟ್‌ ಮೆಟ್ಟಿಲು ಏರಿದ್ದರು. ನೋಟಿಸ್‌ ನೀಡಿದ್ದರೂ ಅಕ್ಕಿ ಮೂಟೆಗಳನ್ನು ರಿಟರ್ನಿಂಗ್‌ ಅಧಿಕಾರಿ ಅಹಮದ್‌ ಅವರಿಗೆ ವಾಪಸ್‌ ನೀಡಿದ್ದಿಲ್ಲ.

ಈ ಸುದ್ದಿ ಓದಿದ್ದೀರಾ? ಪ್ರಚೋದನಕಾರಿ ಭಾಷಣ : ನಟಿ ಶೃತಿ ವಿರುದ್ಧ ಪ್ರಕರಣ ದಾಖಲು

“ನಾನೊಬ್ಬ ಸಾಮಾಜಿಕ ಕಾರ್ಯಕರ್ತನಾಗಿದ್ದು, ಹಬ್ಬದ ಸಂದರ್ಭಗಳಲ್ಲಿ ಅಗತ್ಯ ಇರುವವರಿಗೆ ಅಕ್ಕಿ ನೀಡಲು ಮುಂದಾಗಿದ್ದೆ. ಅದನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ” ಎಂದು ಅಹ್ಮದ್‌ ನ್ಯಾಯಾಲಯಕ್ಕೆ ಹೇಳಿದ್ದರು. ಚುನಾವಣಾ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವುದಿಲ್ಲ ಎಂದು ಬಾಂಡ್ ಸಲ್ಲಿಸುವಂತೆ ಇಸ್ತಿಯಾಕ್‌ ಅಹ್ಮದ್ ಅವರಿಗೆ ಕೋರ್ಟ್‌ ಸೂಚಿಸಿದೆ.

ಚುನಾವಣೆ ಘೋಷಣೆಗೂ ಮುನ್ನ ಯಾವುದೇ ವಸ್ತುಗಳನ್ನು ವಶಪಡಿಸಿಕೊಳ್ಳುವಂತಿಲ್ಲ. ಆದರೆ, ಈಗ ಚುನಾವಣೆ ಘೋಷಣೆ ಆಗಿರುವುರಿಂದ ಅರ್ಜಿದಾರರು ದಾಸ್ತಾನು ಬಿಡುಗಡೆಯಾದ ಬಳಿಕ ವಿತರಣೆ ಮಾಡಬಾರದು ಎಂದು ಹೇಳಿದೆ.

ಅರ್ಜಿದಾರರಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ವಶಪಡಿಸಿಕೊಂಡ ಅಕ್ಕಿ ಮೂಟೆಗಳನ್ನು ಅರ್ಜಿದಾರರ ವಶಕ್ಕೆ ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಷರತ್ತುಗಳನ್ನು ಪಾಲಿಸುವಂತೆ ಹೈಕೋರ್ಟ್‌ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...