ಬೀದರ್‌ | ಪ್ರಗತಿಶೀಲ ಚಳುವಳಿಯ ಪ್ರಖರ ಧ್ವನಿ ʼನಿರಂಜನʼ

Date:

ಖ್ಯಾತ ಬರಹಗಾರ, ಲೇಖಕ ನಿರಂಜನ ಅವರು ಕನ್ನಡದ ಅನನ್ಯ ಪ್ರತಿಭೆ. ಸಾಹಿತ್ಯ ಮತ್ತು ರಾಜಕಾರಣವನ್ನು ಬೇರೆಯಾಗಿ ಕಾಣದ ಹಲವು ಲೇಖಕರಲ್ಲಿ ನಿರಂಜನರು ಒಬ್ಬರು ಎಂದು ಬಾಗಲಕೋಟೆ ಅಧ್ಯಾಪಕ ರೇವಣಸಿದ್ದಪ್ಪ ದೊರೆಗಳ್ ಹೇಳಿದರು.

ಬಸವಕಲ್ಯಾಣ ನಗರದ ಸಂಜೀವಿನಿ ಆಸ್ಪತ್ರೆ ಸಭಾಂಗಣದಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಂಡಿದ್ದ ನಿರಂಜನ ಜನ್ಮ ಶತಮಾನೋತ್ಸವ ಪ್ರಯುಕ್ತ ನಿರಂಜನರ ಸಾಹಿತ್ಯದ ತಾತ್ವಿಕತೆ ಕುರಿತು ಪ್ರತಿಷ್ಠಾನದ 81ನೇ ಉಪನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.

ʼಬರಹದಿಂದಲೇ ಬದುಕುತ್ತೇನೆ ಎಂದು ನಂಬಿದ ಬಹುದೊಡ್ಡ ಬರಹಗಾರ ನಿರಂಜನ. ಕನ್ನಡದ ಹಲವು ಲೇಖಕರು ಪತ್ರಕರ್ತರಾಗಿದ್ದರು. ಅವರ ಬರಹ ಪತ್ರಿಕೆ ಬರಹ, ಅಂಕಣ ಹಾಗೂ ಸೃಜನಶೀಲ ಬರಹವು ಬರೆಯುತ್ತಿದ್ದರು. ನಿರಂಜನರು ಹಾಗೂ ಅವರ ಪತ್ನಿ ಅನುಪಮಾ ನಿರಂಜನ ಕನ್ನಡದ ಶ್ರೇಷ್ಠ ಬರಹಗಾರ ದಂಪತಿ. ಬಾಲ್ಯದಲ್ಲಿ ಕತೆಗಳು ಬರೆದ ನಿರಂಜನರು ಕಮ್ಯುನಿಸ್ಟ್ ತತ್ವ ಸಿದ್ಧಾಂತಗಳನ್ನು ನಿರಂತರವಾಗಿ ಉಳಿಸಿಕೊಂಡು ಬಂದಿದ್ದರುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂಜನರು ಬರೆದ ‘ಕೊನೆಯ ಗಿರಾಕಿ’ ಕತೆಯನ್ನು ಕಲಬುರ್ಗಿಯ ಅಧ್ಯಾಪಕ ಡಾ.ಶಿವಾಜಿ ಮೇತ್ರೆ ಅವರು ವಿಮರ್ಶಿಸಿ, ʼನಿರಂಜನರ ಅವರ ಕತೆ ಮಾತು ಬಾರದ, ಅಸಹಾಯಕ, ಬಡ ಹುಡುಗಿಯನ್ನು ಪುರುಷ ಪ್ರಧಾನ ವ್ಯವಸ್ಥೆ ಎಸಗಿದ ದೌರ್ಜನ್ಯ ಹಾಗೂ ದಾರುಣತೆಯನ್ನು ಬಿಂಬಿಸುತ್ತದೆ. ಕನ್ನಡದ ಶ್ರೇಷ್ಠ ಕತೆಗಳ ಸಾಲಿಗೆ ಸೇರುವ ಈ ಕತೆ ಸಮಾಜದ ವಿಕೃತ ಮುಖವನ್ನು ಅನಾವರಣಗೊಳಿಸುತ್ತದೆʼ ಎಂದು ವಿಶ್ಲೇಷಿಸಿದರು.

ಅಧ್ಯಾಪಕ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, ʼಜನ ಚಳುವಳಿ ಹಾಗೂ ಸಾಮಾಜಿಕ ಬದುಕಿನ ನೋವಿನ, ಅಸಹಾಯಕತೆ, ಸಂಘರ್ಷದ ಹಲವು ಮುಖಗಳು ನಿರಂಜನರ ಸೃಜನಶೀಲ ಕೃತಿಗಳಲ್ಲಿ ಅಡಕಗೊಂಡಿವೆ. ಕನ್ನಡದ ಪ್ರಗತಿಶೀಲ ಚಳುವಳಿಯ ಪ್ರಮುಖ ಧ್ವನಿ ನಿರಂಜನರುʼ ಎಂದು ಹೇಳಿದರು.

ರಂಗಕರ್ಮಿ ಉಮೇಶ ಪಾಟೀಲ ನಿರಂಜನರ ʼಕೊನೆಯ ಗಿರಾಕಿʼ ಕತೆಯನ್ನು ನಾಟಕೀಯವಾಗಿ ಓದಿದರು. ನಾಗೇಂದ್ರ ಬಿರಾದಾರ ರಂಗಗೀತೆ ಹಾಡಿ ಸಭಿಕರನ್ನು ರಂಜಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರಳ ಸಾಮೂಹಿಕ ವಿವಾಹ : ದಾಂಪತ್ಯಕ್ಕೆ ಕಾಲಿಟ್ಟ 138 ಜೋಡಿಗಳು

ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಎಸ್.ಜಿ.ಹುಡೇದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಡಾ. ಬಸವರಾಜ ಸ್ವಾಮಿ, ಪ್ರತಿಷ್ಠಾನದ ನಿರ್ದೇಶಕ ಬಕ್ಕಯ್ಯ ಸ್ವಾಮಿ, ಭೀಮಾಶಂಕರ ಮಾಶಾಳಕರ, ನಾಗಪ್ಪ ನಿಣ್ಣೆ, ಬಸವಣ್ಣಪ್ಪ ನೆಲೋಗಿ, ವೀರಶೆಟ್ಟಿ ಪಾಟೀಲ್, ಶಿವಪುತ್ರ ಸಂಗನಬಸವ, ಸೋಮನಾಥ ಡೊಣಗಾರೆ, ಶಿವಪುತ್ರ ಮಿರಾಜದಾರ ಮೊದಲಾದವರು ಇದ್ದರು. ಚಂದ್ರಕಾಂತ ಅಕ್ಕಣ್ಣ ಸ್ವಾಗತಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ದೇವೇಂದ್ರ ಬರಗಾಲೆ ನಿರೂಪಿಸಿದರು. ಶರಣಬಸವ ಬಿರಾದಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...