ಮುರುಘಾ ಮಠದ ಅಧಿಕಾರ ಮತ್ತೆ ಅತ್ಯಾಚಾರ ಆರೋಪಿ ಮುರುಘಾಶ್ರೀ ಕೈಗೆ!

Date:

ಹೈಕೋರ್ಟ್‌ ನಿರ್ದೇಶನದ ಮೇರೆಗೆ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಕೆ.ಬಿ.ಗೀತಾ ಅವರು ಪೀಠಾಧಿಪತಿ ಸ್ಥಾನದ ಅಧಿಕಾರವನ್ನು ಅತ್ಯಾಚಾರ ಆರೋಪಿ ಮುರುಘಾಶ್ರೀಗೆ ಹಸ್ತಾಂತರಿಸಿದ್ದಾರೆ.

ಪೀಠಾಧಿಪತಿಗೆ ಅಧಿಕಾರ ಮರಳಿಸಿದ ಆದೇಶ ಡಿ.5ರಂದು ಹೊರಬಿದ್ದಿದ್ದು, ನ್ಯಾಯಾಧೀಶರ ಕಚೇರಿ ಗುರುವಾರ ಅಧಿಕೃತ ಪತ್ರವನ್ನು ಮಠಕ್ಕೆ ತಲುಪಿಸಿದೆ. ಬಸವಪ್ರಭು ಸ್ವಾಮೀಜಿ ನ್ಯಾಯಾಲಯದ ಆದೇಶ ಪ್ರತಿ ಸ್ವೀಕರಿಸಿ ಶಿವಮೂರ್ತಿ ಮುರುಘಾ ಶರಣರಿಗೆ ತಲುಪಿಸಿದ್ದಾರೆ. ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿರುವುದರಿಂದ ಶರಣರು ಹೊರಗಿನಿಂದಲೇ ಆಡಳಿತ ನಡೆಸಲಿದ್ದಾರೆ.

ಮುರುಘಾಶ್ರೀ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತವನ್ನು ನ್ಯಾಯಾಧೀಶರು ಪೀಠಾಧಿಪತಿಗೆ ಹಸ್ತಾಂತರಿಸಿದ್ದಾರೆ. ಮಠದ ಸದ್ಭಕ್ತರು ಸಹಕರಿಸಬೇಕು’ ಎಂದು ಎಸ್‌ಜೆಎಂ ವಿದ್ಯಾ‍ಪೀಠದ ಅಧ್ಯಕ್ಷರೂ ಆಗಿರುವ ಶಿವಮೂರ್ತಿ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ 2022ರ ಸೆ.1ರಂದು ಬಂಧನಕ್ಕೊಳಗಾಗಿದ್ದರು. ನ್ಯಾಯಾಂಗ ಬಂಧನದಲ್ಲಿದ್ದರಿಂದ ಮಠದ ಸುಗಮ ಆಡಳಿತಕ್ಕಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ 2022ರ ಡಿ.13ರಂದು ಆದೇಶಿಸಿತ್ತು.

ಮಠದ ಉಸ್ತುವಾರಿಯಾಗಿದ್ದ ಬಸವಪ್ರಭು ಅವರು ಸರ್ಕಾರದ ಈ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಸರ್ಕಾರದ ಆಡಳಿತಾಧಿಕಾರಿ ನೇಮಕ ಆದೇಶವನ್ನು ರದ್ದುಪಡಿಸಿದ ನ್ಯಾಯಾಲಯ, ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನಿಯೋಜಿಸಿ ಜುಲೈ 3ರಂದು ಆದೇಶಿಸಿತ್ತು. ಶಿವಮೂರ್ತಿ ಶರಣರು ನ.16ರಂದು ಜಾಮೀನು ಮೇಲೆ ಕಾರಾಗೃಹದಿಂದ ಹೊರಬಂದ ಬಳಿಕ ಈ ಆದೇಶ ರದ್ದಾಗಿತ್ತು.

ಮುನ್ನೆಲೆಗೆ ಬಂದ ಹಣ ದುರುಪಯೋಗ ನೋಟಿಸ್‌

ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ₹ 24 ಲಕ್ಷವನ್ನು ದುರುಪಯೋಗ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಬಸವಪ್ರಭು ಸ್ವಾಮೀಜಿ ಅವರಿಗೆ ತಾತ್ಕಾಲಿಕ ಆಡಳಿತಾಧಿಕಾರಿ ನೀಡಿದ್ದ ನೋಟಿಸ್‌ ಮುನ್ನೆಲೆಗೆ ಬಂದಿದೆ.

ಅಡಗೂರು ಮಠದ ₹ 6 ಲಕ್ಷ, ಚಿತ್ರದುರ್ಗದ ಎಸ್‌ಜೆಎಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ₹ 8 ಲಕ್ಷ ಹಾಗೂ ಬೆಂಗಳೂರಿನ ಕಾನಿಷ್ಕ ಗ್ರ್ಯಾಂಡ್‌ ಹೋಟೆಲ್‌ ಮಾಲೀಕರಿಂದ ಪಡೆದ ₹ 10 ಲಕ್ಷವನ್ನು ಕಾನೂನು ಬಾಹಿರವಾಗಿ ಬಳಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ನೀಡಿದ ಸಮಜಾಯಿಷಿ ಸರಿಯಾಗಿಲ್ಲ. ಕೂಡಲೇ ಹಣವನ್ನು ಮಠ ಅಥವಾ ವಿದ್ಯಾಪೀಠಕ್ಕೆ ಮರಳಿಸಬೇಕು. ತಪ್ಪಿದರೆ ಹಣ ವಸೂಲಿ ಪ್ರಕ್ರಿಯೆಗೆ ದಾವೆ ಹೂಡಬೇಕಾಗುತ್ತದೆ ಎಂದು ನ. 4ರಂದು ನೀಡಿದ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

“ತಾತ್ಕಾಲಿಕ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರು ಈ ನೋಟಿಸ್‌ ನೀಡಿದ್ದರು. ಈಗ ಆಡಳಿತಾಧಿಕಾರಿ ನೇಮಕ ಆದೇಶ ರದ್ದಾಗಿದೆ. ಪೀಠಾಧಿಪತಿ ಶಿವಮೂರ್ತಿ ಶರಣರು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಮಠದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...