₹100 ಸನಿಹಕ್ಕೆ 1ಕೆಜಿ ಟೊಮೆಟೊ ದರ!

Date:

  • ಮಳೆಯ ಕೊರತೆಯಿಂದ ಮಾರುಕಟ್ಟೆಗೆ ತರಕಾರಿಗಳ ಪೂರೈಕೆ ಕಡಿಮೆ
  • ಮೊದಲ ಬಾರಿಗೆ ಕರ್ನಾಟಕ ರಾಜ್ಯದಿಂದ ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತು

ರಾಜ್ಯದಲ್ಲಿ ಮುಂಗಾರು ಈಗ ಚುರುಕಾಗಿದ್ದು, ಕೆಲವೆಡೆ ಜೋರು ಮಳೆಯಾಗುತ್ತಿದ್ದರೆ, ಇನ್ನೂ ಕೆಲವೆಡೆ ಮಳೆರಾಯನ ದರ್ಶನವಾಗಿಲ್ಲ. ಮಳೆಯ ಕೊರತೆಯಿಂದ ತರಕಾರಿಗಳು ಒಣಗಿದ್ದು, ಮಾರುಕಟ್ಟೆಗೆ ಸರಬರಾಜು ಕಡಿಮೆಯಾಗುತ್ತಿದೆ. ಜತೆಗೆ ರಾಜ್ಯದಲ್ಲಿ ಬೆಳೆದ ಟೊಮೆಟೊ ಪ್ರಥಮ ಬಾರಿಗೆ ಬಾಂಗ್ಲಾದೇಶಕ್ಕೆ ರಫ್ತಾಗುತ್ತಿದೆ. ಇದೆಲ್ಲದರ ನಡುವೆ, ಕೆ.ಜಿ ಟೊಮೆಟೊ ಬೆಲೆ ₹100ರ ಸನಿಹಕ್ಕೆ ಬಂದಿದೆ.

ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ತರಕಾರಿಗಳ ಬೆಲೆ ಗಗನಕ್ಕೆ ಏರುತ್ತಿದೆ. 15 ಕೆಜಿ ಟೊಮೆಟೊ ಬಾಕ್ಸ್ ಸಾವಿರ ಸನಿಹಕ್ಕೆ ಬಂದಿದೆ. ಅಲ್ಲದೆ, ಮಾರುಕಟ್ಟೆಯಲ್ಲಿನ ತರಕಾರಿಗಳ ಬೆಲೆ ಹೆಚ್ಚಳವಾಗಿದ್ದು, ಗ್ರಾಹಕನ ಕೈ ಸುಡುವಂತಾಗಿದೆ.

ರಾಜ್ಯದ ಟೊಮೆಟೊ ಬಾಂಗ್ಲಾದೇಶಕ್ಕೆ ರಫ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಇತರೆ ರಾಜ್ಯಗಳಲ್ಲಿ ಭಾರಿ ಮಳೆಯಾದ ಕಾರಣ ಮೊದಲ ಬಾರಿಗೆ ಕರ್ನಾಟಕ ರಾಜ್ಯದಿಂದ ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತಾಗುತ್ತಿದೆ. ಇದು ಕೂಡ ರಾಜ್ಯದಲ್ಲಿ ಟೊಮೆಟೊ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.

ಹಾಗೆಯೇ, ಕೋಲಾರದಿಂದ ಹೊರರಾಜ್ಯಗಳಿಗೆ ಟೊಮೆಟೊ ರಫ್ತು ಹೆಚ್ಚಾಗುತ್ತಿದ್ದು, ಬೇರೆ ರಾಜ್ಯಗಳಲ್ಲಿ ಟೊಮೆಟೊಗೆ ಹೆಚ್ಚಿನ ಬೇಡಿಕೆ ಇದೆ.   

ಹೆಚ್ಚಳವಾದ ಟೊಮೆಟೊ ದರ

ಕಳೆದ ಒಂದು ವಾರದ ಹಿಂದೆ ಕಡಿಮೆ ಇದ್ದ ಟೊಮೆಟೊ ದರ ಇದೀಗ ₹100ರ ಸಮೀಪಿಸಿದೆ. ಭಾನುವಾರ ಟೊಮೆಟೊ ದರ ಕೆಜಿಗೆ ₹50 ರಿಂದ ₹60 ರೂಪಾಯಿ ಇತ್ತು. ಸೋಮವಾರ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ₹70-80 ಇದೆ.

ಇತ್ತೀಚೆಗೆ ಸುರಿದ ಮಳೆಯ ಹಿನ್ನೆಲೆಯಲ್ಲಿ ತರಕಾರಿ ಕೊಳೆತಿದ್ದು, ರಾಜಧಾನಿ ಬೆಂಗಳೂರಿನ ಕೆ.ಆರ್‌.ಮಾರ್ಕೆಟ್‌, ಯಶವಂತಪುರ, ಮಲ್ಲೇಶ್ವರ, ಜಯನಗರ ಮಾರುಕಟ್ಟೆಗಳಲ್ಲಿ ತರಕಾರಿಗಳ ಪೂರೈಕೆ ತೀರಾ ಕಡಿಮೆಯಾಗಿದೆ. ಟೊಮೆಟೊ ಸೇರಿದಂತೆ ಬದನೆಕಾಯಿ, ಬಟಾಣಿ ಹಾಗೂ ಮೆಣಸಿನಕಾಯಿ ದರ ದುಪ್ಪಟ್ಟಾಗಿದ್ದು, ಕಳೆದ ಒಂದು ವಾರದಲ್ಲಿ ತರಕಾರಿಗಳ ಬೆಲೆ ಹೆಚ್ಚಳವಾಗಿದೆ.  

ಈ ಸುದ್ದಿ ಓದಿದ್ದೀರಾ? ಪ್ರಯಾಣಿಕರ ಸುರಕ್ಷತಾ ನಿಯಮ ಅನುಸರಿಸದ ಬಿಎಂಟಿಸಿ ಬಸ್‌ ಸಿಬ್ಬಂದಿ: ಆರೋಪ

ಕಳೆದ ವಾರ ಕೆಜಿಗೆ ₹40 ಇದ್ದ ಬದನೆಕಾಯಿ ಹಾಗೂ ಮೆಣಸಿನಕಾಯಿ ದರ ಇದೀಗ ₹ 80 ತಲುಪಿದೆ. ಬಟಾಣಿ ಕೆಜಿಗೆ ₹100 ರಿಂದ ₹150 ಏರಿಕೆಯಾಗಿದೆ. ಬೀನ್ಸ್‌ ಹಾಗೂ ನುಗ್ಗೆಕಾಯಿ ₹100-120 ಇದೆ. ಲಿಂಬು, ಬೆಳ್ಳುಳ್ಳಿ, ಬೀಟ್‌ರೂಟ್, ಆಲೂಗಡ್ಡೆ, ಹಾಗಲಕಾಯಿ ಬೆಲೆ ₹5-10 ಹೆಚ್ಚಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...