ರಾಯಚೂರು | ಎಲ್ಲರನ್ನೂ ಕತ್ತಲಿನಿಂದ ಬೆಳಕಿನೆಡೆಗೆ ತರುವುದೇ ಪ್ರವಾದಿ ಆಶಯ: ಯೋಗೇಶ್ ಮಾಸ್ಟರ್

Date:

ಕತ್ತಲಿನಿಂದ ಬೆಳಕಿನೆಡೆಗೆ ಬರುವುದು ಪ್ರವಾದಿಯವರ ಕರೆಯಾಗಿತ್ತು. ನಾವೆಲ್ಲರೂ ದ್ವೇಷವನ್ನು ಅಳಿಸಿ, ಪ್ರೀತಿಯನ್ನು ಹಂಚಬೇಕು ಎಂದು ಹಿರಿಯ ಸಾಹಿತಿ ಯೋಗೇಶ್ ಮಾಸ್ಟರ್ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ʼಜಮಾತೆ ಇಸ್ಲಾಂ ಹಿಂದ್ʼ ಆಯೋಜಿಸಿದ್ದ ಸಮಾನತೆಯ ಸಮಾಜದ ಶಿಲ್ಪಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಂದು ಕಾಲದಲ್ಲಿ ಅರೇಬಿಯಾ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆಗಳು ಅತೀಯಾಗಿ ನಡೆಯುತ್ತಿದ್ದವು. ಪ್ರವಾದಿ ಅವರು ಪ್ರೀತಿ, ಸಹನೆಯಿಂದ ಅವರೆಲ್ಲರನ್ನೂ ಸನ್ಮಾರ್ಗದ ಕಡೆಗೆ ಕರೆ ತಂದರು. ಪ್ರಾಣಿಗಳಿಗೂ ಕೂಡ ಗೊತ್ತು, ಆಹಾರವನ್ನು ಹಂಚಿಕೊಂಡು ತಿನ್ನಬೇಕು ಅಂತ. ಆದರೆ, ಮನುಷ್ಯನು ತಿನ್ನುವ ಆಹಾರವನ್ನು ಬಿಸಾಕಿ, ದ್ವೇಷ ಸಾಧಿಸುವ ಕಡೆಗೆ ಮುಖ ಮಾಡಿದ್ದಾನೆ ಎಂದು, ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಮಾತನಾಡಿದ ಜಮಾತ್ ಇಸ್ಲಾಂ ಹಿಂದ್‌ನ ರಾಜ್ಯ ಮುಖಂಡ ಮಹಮದ್ ಕುಂಞಿ, ಪ್ರವಾದಿ ಅವರು ಹೇಳುತ್ತಾರೆ, ಕೊಲೆ ಮಾಡಿದವನು, ಕೊಲೆ ಆದವನು ಇಬ್ಬರು ಕೂಡ ನರಕಕ್ಕೆ ಎಂದು. ಕೊಲೆ ಮಾಡಬೇಕು ಎಂಬುದು ಇಬ್ಬರ ಮನಸ್ಥಿತಿ ಆಗಿರುತ್ತದೆ. ದೇವರ ಹೆಸರಲ್ಲಿ ಅಪಪ್ರಚಾರದಿಂದ ಸಮಾಜವನ್ನು ಹಾಳು ಮಾಡುತ್ತಿದ್ದಾರೆ. ಜಾತಿ ಜಾತಿಗಳ ಮಧ್ಯದಲ್ಲಿ ವಿಭಜನೆ ಮಾಡುತ್ತಿದ್ದಾರೆ. ಸುಳ್ಳು ವಿಜೃಂಭಿಸುತ್ತಿವೆ, ಸತ್ಯವನ್ನು ಮರೆಮಾಚುತ್ತಿದ್ದಾರೆ. ಇಂತಹ ಮನಸ್ಥಿತಿಯಿಂದ ಹೊರ ಬರಬೇಕಿದೆ.

ಈ ಜಗತ್ತಿನ ಮುಸಲ್ಮಾನರು, ಪ್ರವಾದಿ ಅವರು ತೋರಿಸಿದ ದಾರಿಯಲ್ಲಿ ನಡೆಯುತ್ತಿಲ್ಲ, ಅವರನ್ನು ಪೂಜಿಸುವುದಿಲ್ಲ, ಆರಾಧಿಸುವುದಿಲ್ಲ. ಅವರು ದೇವರು ಆಗಿಲ್ಲ, ಸಾಮಾನ್ಯ ಮನುಷ್ಯನಾಗಿ ಉಳಿದಿದ್ದರು. ಪ್ರಪಂಚದಲ್ಲಿ ಸುಮಾರು ಪ್ರವಾದಿಗಳು, ದಾರ್ಶನಿಕಗಳು ಬಂದರು. ಅವರೆಲ್ಲರೂ ಎಲ್ಲರನ್ನೂ ಜೋಡಿಸುವುದಕ್ಕೆ ಬಂದರೆ, ಹೊರೆತು ವಿಭಜಿಸುವುದಕ್ಕೆ ಅಲ್ಲ. ಸದ್ಯದ ಪರೀಸ್ಥಿತಿಯಲ್ಲಿ ನಾವು, ಧರ್ಮದ ಬಗ್ಗೆ ಮಾತನಾಡುವಾಗ ವಿಪರೀತ ಕೋಪ, ದ್ವೇಷದಿಂದ ಮಾತನಾಡುತ್ತೇವೆ. ಧರ್ಮದ ಬಗ್ಗೆ ಹೇಳುವಾಗ ಮುಗುಳ್ನಗೆಯಿಂದ ಮಾತಾಡಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿರೂಪಾಕ್ಷಪ್ಪ, ಜಮಾತ್ ಸಿಂಧನೂರು ತಾಲ್ಲೂಕು ಸಂಚಾಲಕ  ಮಹಮದ್ ಹುಸೇನ್‌, ವಿಭಾಗೀಯ ಸಂಚಾಲಕ ದಿಲವರ್ ಅಂಬರ್ ಖಾನ್, ಬಾಬರ್ ಬೇಗ್, ಸೈಯ್ಶದಾ ಸಹಬತ್ ನಾಜ್ ಇನ್ನಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...