ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

Date:

  • ಏಪ್ರಿಲ್ 1ರ ಒಳಗೆ ಗೊಂದಲ ಇತ್ಯರ್ಥವಾಗಲಿದೆ
  • ವಿವಾದದ ಕುರಿತು ಮೇಲಧಿಕಾರಿ ಗಮನಕ್ಕೆ ತರಲಾಗಿದೆ

ಬೇಲೂರು ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಕುರಾನ್ ಪಠಣ ಮಾಡಬಾರದೆಂದು ಹಿಂದುತ್ವವಾದಿ ಕೋಮು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಥೋತ್ಸವದಲ್ಲಿ ಕುರಾಣ್‌ ಪಠಣ ಸಂಬಂಧ ಉಂಟಾಗಿರುವ ಗೊಂದಲ ಏಪ್ರಿಲ್ 1ರ ಒಳಗೆ ಇತ್ಯರ್ಥ ಆಗಲಿದೆ. ವಿವಾದರಿಂದ ರಥೋತ್ಸವಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಚನ್ನಕೇಶವ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ವಿದ್ಯುಲ್ಲತಾ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡುವುದು ಬೇಡ ಎಂದು ಭಜರಂಗದಳ ಕಾರ್ಯಕರ್ತರು ವಾರದ ಹಿಂದೆ ಮನವಿ ಸಲ್ಲಿಸಿದ್ದಾರೆ. ಈ ವಿಷಯವನ್ನು ಮುಜರಾಯಿ ಇಲಾಖೆ ಆಯುಕ್ತರ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

“ಸೋಮವಾರ ಆಯುಕ್ತರನ್ನು ನೇರವಾಗಿ ಭೇಟಿ ಮಾಡಿ ಎಲ್ಲವನ್ನೂ ಸೂಕ್ಷ್ಮವಾಗಿ ತಿಳಿಸಿ ಅವರ ಗಮನಕ್ಕೆ ತಂದಿದ್ದೇನೆ. ಆಗಮ ಪಂಡಿತರನ್ನು ನಿಯೋಜನೆ ಮಾಡಿಕೊಡಬೇಕೆಂದು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಧಾರ್ಮಿಕ ವಿಚಾರ ಆಗಿರುವುದರಿಂದ ಆಗಮಿಕ ಪಂಡಿತರು ವಿವಾದವ್ನು ಬಗೆಹರಸಿಬೇಕಾಗಿದೆ. ಇದಕ್ಕೆ ಆಯುಕ್ತರು ಒಪ್ಪಿಕೊಂಡಿದ್ದು, ಎರಡು – ಮೂರು ದಿನಗಳಲ್ಲಿ ಆಗಮ ಪಂಡಿತರು ಬರುತ್ತಾರೆ” ಎಂದು ತಿಳಿಸಿದ್ದಾರೆ.

“ಎಲ್ಲರನ್ನೂ ಕರೆದು ಸಭೆ ಮಾಡಿ ವರದಿಯನ್ನು ಆಯುಕ್ತರಿಗೆ ಸಲ್ಲಿಸಲಾಗುವುದು, ವರದಿ ಅಧಾರದ ಮೇಲೆ ಏನು ಆದೇಶ ನೀಡುತ್ತಾರೋ ಅದನ್ನು ಪಾಲನೆ ಮಾಡುತ್ತೇವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಬೇಲೂರು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬಂದು ಏಳು ವರ್ಷ ಆಗಿದೆ. ಆಗಿನಿಂದಲೂ ಕುರಾನ್ ಪಠಣ ಸಂಪ್ರದಾಯ ನಡೆಯುತ್ತಿದೆ. ಪ್ರಧಾನ ಅರ್ಚಕರು, 40 ವರ್ಷದಿಂದ ಕೆಲಸ ಮಾಡುತ್ತಿರುವವರ ಜೊತೆ ಸಭೆ ಮಾಡಿದ್ದೇವೆ. 2012 ರಿಂದ ಈಚೆಗೆ ರಥದ ಮುಂದೆ ಕುರಾನ್ ಓದಿಸುತ್ತಿದ್ದೇವೆ. ಅದಕ್ಕಿಂತ ಹಿಂದೆ ಈ ಪದ್ಧತಿ ಇರಲಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ಆರೋಪ; ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು

“ದೇವಸ್ಥಾನದ ಮೆಟ್ಟಿಲ ಬಳಿ ನಿಂತು ಕುರಾನ್ ಓದಿ ಹೋಗುತ್ತಿದ್ದರು ಎಂದು ತಿಳಿಸಿದ್ದಾರೆ. ಈ ವಿಷಯವನ್ನು ಆಯುಕ್ತರ ಗಮನಕ್ಕೆ ತಂದಿದ್ದೇವೆ. 1932ರಲ್ಲಿ ಮ್ಯಾನುಯಲ್ ನಲ್ಲಿ ಎರಡು – ಮೂರು ಕಡೆ ಪ್ರಸ್ತಾಪ ಮಾಡಿದ್ದಾರೆ. ರಥದ ಮುಂದೆ ಕುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಆದರೆ, ಆಹ್ವಾನ ನೀಡುವಂತೆ ಪುಸ್ತಕದಲ್ಲಿ ಬರೆದಿದ್ದಾರೆ, ಅದರಂತೆ ಆಹ್ವಾನ ಪತ್ರಿಕೆ ಕಳುಹಿಸುತ್ತೇವೆ, ಅವರು ಬರುತ್ತಾರೆ. ಎರಡು ಆಣಿ, ಅಕ್ಕಿ ಕೊಡುವಂತೆ ಪುಸ್ತಕದಲ್ಲಿ ಉಲ್ಲೇಖ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...