ಬೀದರ್‌ | ಲೋಕಸಭಾ ಫಲಿತಾಂಶ ಅಪೇಕ್ಷಿಸಿದ ತದ್ವಿರುದ್ಧ ಬಂದಿದೆ : ಭಗವಂತ ಖೂಬಾ

Date:

ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಸೋಲು-ಗೆಲುವು ಮತದಾರರ ನಿರ್ಣಯವಾಗಿರುತ್ತದೆ. ಹೀಗಾಗಿ ಮತದಾರರು ನೀಡಿದ ತೀರ್ಪಿಗೆ ನಾನು ಬದ್ಧನಾಗಿ ಸ್ವಾಗತಿಸುತ್ತೇನೆ ಎಂದು ಬೀದರ್‌ ಲೋಕಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು.

ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮೊದಲ ಬಾರಿಗೆ ಶನಿವಾರ ಸಂಜೆ ಫೇಸ್ಬುಕ್‌ ಲೈವ್‌ನಲ್ಲಿ ಮಾತನಾಡಿ, “ಕಳೆದ ಜೂ.4ರಂದು ಹೊರಬಿದ್ದಿರುವ ಬೀದರ್ ಲೋಕಸಭಾ ಕ್ಷೇತ್ರದ ಫಲಿತಾಂಶ ನಮ್ಮೆಲ್ಲರನ್ನು ಹುಸಿಗೊಳಿಸಿದೆ. ನಾವು ಅಪೇಕ್ಷಿಸಿದ ತದ್ವಿರುದ್ಧ ಫಲಿತಾಂಶ ಬಂದಿದೆ. ಆ ಫಲಿತಾಂಶದಿಂದ ಕ್ಷೇತ್ರದ ಲಕ್ಷಾಂತರ ಕಾರ್ಯಕರ್ತರು ಅಘಾತ, ದಿಗ್ಭ್ರಮೆಗೆ ಒಳಗಾಗಿ ನೊಂದ ಮನಸ್ಸಿನಿಂದ ನನ್ನನ್ನು ಕರೆ ಮಾಡಿದ್ದಾರೆ. ಫಲಿತಾಂಶ ಹೀಗೆ ಬರಲು ಕಾರಣಗಳೇನು ಎಂಬುದರ ಕುರಿತು ಚರ್ಚಿಸಿ ನನಗೆ ಧೈರ್ಯ ತುಂಬಿದ್ದಾರೆ” ಎಂದರು.

“ನಾನು ಕೇವಲ ಅಧಿಕಾರದ ಆಸೆಗಾಗಿ ಅಲ್ಲದೇ ಸಾಮಾಜಿಕ ಕಾರ್ಯ ಮಾಡಲು ಬಿಜೆಪಿಗೆ ಸೇರಿರುವುದು. ಒಬ್ಬ ಸಾಮಾನ್ಯ ಕಾರ್ಯಕರ್ತ, ರೈತನ ಮಗನಾದ ನನಗೆ ಎರಡು ಅವಧಿಗೆ ಅವಕಾಶ ಕೊಟ್ಟು, ಕೇಂದ್ರದಲ್ಲಿ ಸಚಿವ ಸ್ಥಾನ ಲಭಿಸಲು ಕ್ಷೇತ್ರದ ಜನ ಆಶೀರ್ವಾದ ಮಾಡಿದ್ದೀರಿ. ಕಳೆದ ಹತ್ತು ವರ್ಷಗಳಲ್ಲಿ ಅನೇಕ ಕನಸುಗಳನ್ನು ಹೊತ್ತು ರೈತರ, ಬಡವರ, ಯುವಕರ, ಮಹಿಳೆಯರು ಸೇರಿದಂತೆ ಎಲ್ಲ ಜಾತಿ, ಧರ್ಮಗಳ ಭೇದ-ಭಾವ ಎನ್ನದೇ ಸರ್ವರ ಏಳಿಗೆಗಾಗಿ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿರುವುದು ತೃಪ್ತಿಯಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಳೆ (ಜೂ.9) ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಆ ಕ್ಷಣಕ್ಕಾಗಿ ಕಾತುರರಾಗಿದ್ದೇವೆ. ಮಾಜಿ ಕೇಂದ್ರ ಸಚಿವನಾಗಿದ್ದರೂ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಅನೇಕ ಯೋಜನೆಗಳನ್ನು ಸಾಧ್ಯವಾದಷ್ಟು ತಂದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೀದರ್‌ ಜಿಲ್ಲೆಯಲ್ಲಿ ಎಲ್ಲರ ಒಗ್ಗಟ್ಟಿನಿಂದ ವಿಪಕ್ಷ ಸಂಘಟನೆ ಬಲಪಡಿಸಿ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ಜನ ಜಾಗೃತಿ ಮಾಡೋಣ. ಜನರಿಗೆ ರಾಜ್ಯ ಸರ್ಕಾರದ ಅನ್ಯಾಯವನ್ನು ತಡೆದು ನ್ಯಾಯ ಒದಗಿಸುವ ಕರ್ತವ್ಯ ನಾವೆಲ್ಲರೂ ನಿಭಾಯಿಸುವ ಮೂಲಕ ಸಾಮಾಜಿಕ ಸೇವೆ ಮಾಡೋಣ. ಮುಂದಿನ ಚುನಾವಣೆಯಲ್ಲಿ ಪಕ್ಷ ಮತ್ತೆ ಗೆದ್ದು ಬರುವ ರೀತಿಯಲ್ಲಿ ಪ್ರಾಮಾಣಿಕ ಸೇವೆ ಮಾಡಲು ಸಿದ್ಧರಾಗೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಕಾವಲುಗಾರರ ನೇಮಕಕ್ಕೆ ಆಗ್ರಹ

ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕೆಲಸ ಇರುವ ಕಾರಣ ಇನ್ನು ಕೆಲವು ದಿನ ದೆಹಲಿಯಲ್ಲೇ ಉಳಿದು ಬೀದರ್‌ಗೆ ಬರುವೆ, ನಿಮ್ಮೆಲ್ಲರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಸಿದ್ಧನಿದ್ದೇನೆ” ಎಂದು ಮಾಜಿ ಕೇಂದ್ರ ಸಚಿವ ಖೂಬಾ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...