ಬೀದರ್‌ | ದೇಶದ ಶಾಂತಿ, ಸುವ್ಯವಸ್ಥೆಗೆ ಪೊಲೀಸ್ ಇಲಾಖೆ ಪಾತ್ರ ದೊಡ್ಡದು : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

Date:

ದೇಶದ ಗಡಿ ರಕ್ಷಣೆಯ ಹೊಣೆ ಸೈನಿಕರ ಮೇಲಿದ್ದರೆ, ಆಂತರಿಕ ರಕ್ಷಣೆಯ ಹೊಣೆ ಪೊಲೀಸರ ಮೇಲಿದೆ. ಸೈನಿಕರು, ಪೊಲೀಸರು ಒಂದು ನಾಣ್ಯದ ಎರಡು ಮುಖಗಳಿಂದಂತೆ. ಇಂದು ದೇಶದ ಜನರು ನೆಮ್ಮದಿಯ ನಿದ್ರೆ ಮಾಡುತ್ತಿದ್ದರೆ ಅದಕ್ಕೆ ಕಾರಣ ಪೊಲೀಸರು ಎಂದು ಜಿಲ್ಲಾಧಿಕಾರ ಗೋವಿಂದರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಮಂಗಲಪೇಟ್ ಬಳಿಯ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿ ಮಾತನಾಡಿದರು.

“ಪೊಲೀಸರು ಪ್ರಾಣವನ್ನು ಒತ್ತೆ ಇಟ್ಟು ದೇಶದ ನಾಗರಿಕ ರಕ್ಷಣೆ ಹಾಗೂ ದೇಶದ ಸುಭದ್ರತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂದು ದೇಶದಲ್ಲಿ ಶಾಂತಿ, ಉತ್ತಮ ಆಡಳಿತ, ಕಾನೂನು ಸುವ್ಯವಸ್ಥೆ ಸುವ್ಯವಸ್ಥಿತವಾಗಿ ನಡೆಯುತ್ತಿದ್ದರೆ ಅದಕ್ಕೆ ಪೊಲೀಸ್ ಇಲಾಖೆಯೆ ಕಾರಣವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚಿಗೆ ನಮ್ಮ ರಾಜ್ಯದಲ್ಲಿ ಹೂಡಿಕೆದಾರರ ಪ್ರಮಾಣ ಹೆಚ್ಚಳವಾಗಿದೆ. ಇದಕ್ಕೆ ಪರೋಕ್ಷವಾಗಿ ಪೊಲೀಸ್ ಇಲಾಖೆಯೇ ಕಾರಣವಾಗಿದೆ. ಕರ್ನಾಟಕ ಪ್ರಸ್ತುತ ಹೂಡಿಕೆ ಪ್ರಮಾಣದಲ್ಲಿ ಎರಡನೇ ಸ್ಥಾನದಲ್ಲಿದೆ. ಒಂದು ರಾಜ್ಯದಲ್ಲಿ ಹೂಡಿಕೆ ಮಾಡಬೇಕೆಂದರೆ ಅಲ್ಲಿನ ಕಾನೂನು ಸುವ್ಯವಸ್ಥೆಯನ್ನು ಮೊದಲು ಅರಿಯುತ್ತಾರೆ ನಂತರ ಹೂಡಿಕೆ ಮಾಡುತ್ತಾರೆ” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, “1959ರ ಅಕ್ಟೋಬರ್ 21 ರಂದು ಭಾರತ-ಚೀನಾ ಗಡಿಭಾಗವಾದ ಲಡಾಕ್ ಪ್ರದೇಶದಲ್ಲಿ ಗಡಿ ರಕ್ಷಣೆಗಾಗಿ 20 ಸೈನಿಕರು ನಿಯೋಜನೆಗೊಂಡಿದ್ದರು, ಆ ವೇಳೆ ಚೀನಾ ದಾಳಿ ನಡೆಸಿತ್ತು, ಭಾರತದ ಸೈನಿಕರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಇಲ್ಲದಿದ್ದರೂ ಚೀನಾ ಸೈನಿಕರ ವಿರುದ್ದ ಹೋರಾಡಿ ನಮ್ಮ ಹತ್ತು ಜನ ಪೊಲೀಸ್ ಯೋಧರು ವೀರ ಮರಣ ಹೊಂದಿದ್ದರು. ಅವರ ನೆನಪಿಗಾಗಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಹುತಾತ್ಮರ ದಿನ ಆಚರಿಸಲಾಗುತ್ತಿದೆ. ಈ ದಿನದಂದು ನಮ್ಮ ದೇಶದ ರಕ್ಷಣೆಗಾಗಿ ಮಡಿದ ಪೊಲೀಸರಿಗೆ ಗೌರವ ಸಲ್ಲಿಸಲಾಗುತ್ತದೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದೇಶದಲ್ಲಿ ಕಳೆದ ವರ್ಷ ಹುತ್ಮಾತ್ಮರಾದ 189 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರು ವಾಚಿಸಿ ಅವರಿಗೆ ನುಡಿ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಈಜಲು ಹೋಗಿ ಇಬ್ಬರು ಯುವಕರು ನೀರು ಪಾಲು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ., ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ.ಎಂ., ಬೀದರ ವಾಯುಸೇನೆ ಗ್ರೂಪ್ ಕಮಾಂಡರ್ ರಿತೇಶ ಶರ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೆಘಣ್ಣನವರ, ಬೀದರ ಉಪ ಪೊಲೀಸ್ ಅಧೀಕ್ಷಕ ಶಿವನಗೌಡ ಪಾಟೀಲ್, ಹುಮನಾಬಾದ್ ಉಪ ಪೊಲೀಸ್ ಅಧೀಕ್ಷಕ ಜೆ.ಎಸ್. ನ್ಯಾಮೆಗೌಡ, ಭಾಲ್ಕಿ ಉಪ ಪೊಲೀಸ್ ಅಧೀಕ್ಷಕ ಶಿವಾನಂದ ಪವಾಡಶೆಟ್ಟಿ, ಬೀದರ ಡಿ.ಆರ್. ಉಪ ಪೊಲೀಸ್ ಅಧೀಕ್ಷಕ ಸುನೀಲ್ ಕೋಡ್ಲಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...