- ಪ್ರತಿಯೊಬ್ಬರು ಪ್ರಜ್ಞಾವಂತರಾಗಲು ಶಿಕ್ಷಕರೇ ಕಾರಣವಾಗಿದ್ದಾರೆ.
- ಶಿಕ್ಷಕರಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯವಿದೆ.
ಸಮಾಜದಲ್ಲಿ ಗುರುವಿಗೆ ವಿಶೇಷ ಸ್ಥಾನವಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಗತ್ಯವಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಅಭಿಪ್ರಾಯಪಟ್ಟರು.
ನಗರದ ಕಲಾ ಸಂಕುಲ ಸಂಸ್ಥೆಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, “ಪ್ರತಿಯೊಬ್ಬರು ಪ್ರಜ್ಞಾವಂತರಾಗಲು ಶಿಕ್ಷಕರೇ ಕಾರಣವಾಗಿದ್ದಾರೆ. ಸಮಾಜ ಸುಧಾರಣೆ, ಮಾನವೀಯತೆ ಮೌಲ್ಯಗಳ ಬೆಳವಣಿಗೆಗೆ ಶಿಕ್ಷಕರ ಕೊಡುಗೆ ಅಪಾರವಿದೆ. ಪ್ರತಿಭಾವಂತ ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ” ಎಂದು ಹೇಳಿದರು.
ಮುಖಂಡ ಎ.ವಸಂತಕುಮಾರ ಮಾತನಾಡಿ, “ಅಕ್ಷರ ಜ್ಞಾನಕ್ಕೆ ಗುರುಗಳ ಕೊಡುಗೆ ಅಪಾರವಾಗಿದೆ. ಶಿಕ್ಷಕರಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯವಿದೆ. ಅದೇಷ್ಟೋ ಶಿಕ್ಷಕರು ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪವಾಗಿದ್ದಾರೆ. ಶಿಕ್ಷಕರ ದಿನಾಚರಣೆಯಂದು ಶಿಕ್ಷಕರನ್ನು ಗೌರವಿಸುವದು ಸಮಾಜ ಹೊಣೆಗಾರಿಕೆ” ಎಂದರು.
ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಚ್ಛೇದನ ಪ್ರಕರಣ; ರಾಜಿ ಸಂಧಾನದಿಂದ ಎಂಟು ಜೋಡಿಗಳ ಮರುಮದುವೆ
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಡಾ.ಶರಣಬಸವ ಪಾಟೀಲ್, ನಟಿ ಡಾ.ಮಾಲತಿಗೌಡ, ಫಾತಿಮಾ ಫೌಂಡೇಷನ್ ಅಧ್ಯಕ್ಷೆ ಡಾ.ಫಾತಿಮ ಹುಸೇನ್, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಎಚ್.ವೈ.ಸರಸ್ವತಿ , ರೇಖಾ ಬಡಿಗೇರ್ ಸೇರಿದಂತೆ, ಶಿಕ್ಷಕರು ಉಪಸ್ಥಿತರಿದ್ದರು.
ವರದಿ : ಹಫಿಜುಲ್ಲ, ಸಿಟಿಜನ್ ಜರ್ನಲಿಸ್ಟ್





