ಧಾರವಾಡ | ರೈತಪರ ಯೋಜನೆಗಳು ರದ್ದುಪಡಿಸಿ ಅನ್ಯಾಯ; ಬಿಜೆಪಿ ಶಾಸಕ ಆರೋಪ

Date:

  • ಬಿಟ್ಟಿಭಾಗ್ಯಗಳಿಂದ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರ ಜನರ ಹಾದಿ ತಪ್ಪಿಸುತ್ತಿದೆ
  • ಬರಗಾಲ ಘೋಷಿಸಿ ರೈತರಿಗೆ ನೆರವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು.

ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ ಸಂಪೂರ್ಣ ಬೇಜವಾಬ್ದಾರಿಯಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತ ಸಂಕಷ್ಟದಲ್ಲಿದ್ದಾನೆ ಎಂದು ಬಿಜೆಪಿ ಶಾಸಕ ಎಮ್.ಆರ್.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಕುಂದಗೋಳ ತಾಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶೀಲ್ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಅವರು ಮಾತನಾಡಿದರು. “ಈ ನಡುವೆ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ಕೃಷಿಕರು ಹೈರಾಣಾಗಿದ್ದಾರೆ. ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲು ಪಂಪ್ ಸೆಟ್ ಗಳಿಗೆ ವಿದ್ಯುತ್ ಇಲ್ಲದೇ ರೈತ ಸಂಕಷ್ಟ ಅನುಭವಿಸುವಂತಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ ಅವಧಿಯಲ್ಲಿ ರೈತರಿಗಾಗಿ ಜಾರಿಗೊಳಿಸಿದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಸಿರಿ, ಶ್ರಮ ಶಕ್ತಿ, ರೈತ ಸಂಪದ ಸೇರಿದಂತೆ ಇನ್ನಿತರ ಯೋಜನೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಬಿಟ್ಟಿಭಾಗ್ಯಗಳನ್ನು‌ ಕೊಟ್ಟು ಜನರನ್ನು ಹಾದಿತಪ್ಪಿಸುತ್ತಿದೆ” ಎಂದು ಕಿಡಿಕಾರಿದರು.

“ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಿಂದ ರೈತನ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಬೇಕು, ರೈತರಿಗೆ ನೆರವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು” ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸೆ.14ರಂದು ಕುಂದಗೋಳ ಬಂದ್‌ಗೆ ರೈತ ಸಂಘ ಕರೆ

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಘವೇಂದ್ರಗೌಡ ಪಾಟೀಲ್, ಮಂಡಲ ಅಧ್ಯಕ್ಷ ರವಿಗೌಡ ಪಾಟೀಲ್, ತಾಲೂಕ ರೈತ ಮೋರ್ಚಾ ಅಧ್ಯಕ್ಷ ಚನ್ನಪ್ಪ ಹರಕುಣಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ,ಮುಖಂಡರು ಕಾರ್ಯಕರ್ತರು, ರೈತರು ಉಪಸಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...