ಸುಪ್ರೀಂ ಕೋರ್ಟ್‌ ಸೂಚನೆ ಗಾಯದ ಮೇಲೆ ಬರೆ ಎಳೆದಂತಾಗಿದೆ: ಸಿ ಟಿ ರವಿ

Date:

  • ‘ತಮಿಳುನಾಡು ಕೇಳುವ ಮೊದಲೇ ಕರ್ನಾಟಕ ಸರ್ಕಾರ ನೀರು ಬಿಟ್ಟಿತ್ತು’
  • ಇಂಡಿಯಾದ ಭಾಗವಾಗಲು ನೀರು ಬಿಡಿ ಎಂದಿರಬಹುದು: ಸಿ ಟಿ ರವಿ

ತಮಿಳುನಾಡು ಸರ್ಕಾರ ಕೇಳುವ ಮೊದಲೇ ಕರ್ನಾಟಕ ಸರ್ಕಾರ ಕಾವೇರಿ ನೀರು ಬಿಟ್ಟಿತ್ತು. ನಂತರದ ದಿನಗಳಲ್ಲಿ ನಮ್ಮ ನೆರವಿಗೆ ಸಿಡಬ್ಲ್ಯುಆರ್‌ಸಿ ಬರಲಿಲ್ಲ.‌ ಸುಪ್ರೀಂ ಕೋರ್ಟ್‌ನಿಂದಲೂ ಈಗ ಸೂಚನೆ ಬಂದಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಕಾವೇರಿ ವಿವಾದ ವಿಚಾರವಾಗಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿಲ್ಲ. ಆದರೆ ನಮ್ಮ ರಾಜ್ಯ ಸರ್ಕಾರದ ತಪ್ಪುಗಳನ್ನು ನಾವು ಎತ್ತಿ ಹೇಳಲೇಬೇಕಿದೆ” ಎಂದರು.

“ನೀರು ಬಿಟ್ಟು ಸಭೆ ಕರೆಯುವ ಹೊಸ ಸಂಪ್ರದಾಯ ಕಾಂಗ್ರೆಸ್‌ ಸರ್ಕಾರ ಆರಂಭಿಸಿದೆ. ನೀರು ಬಿಟ್ಟ ಮೇಲೆ ಸಂಸದರ ಸಭೆ ಮಾಡಿದ್ದಾರೆ. ನೀರು ಬಿಟ್ಟ ಮೇಲೆ ವಾದ ಶುರು ಮಾಡಿದ್ದಾರೆ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಎಂಕೆ ನಿಮಗೆ ಬೆದರಿಕೆ ಹಾಕಿರಬಹುದು, ನಿಮ್ಮ ಇಂಡಿಯಾದ ಭಾಗವಾಗಿರಬೇಕು ಎಂದರೆ ನೀರು ಬಿಡಿ ಎಂದಿರಬಹುದು. ಅಥವಾ ನಿಮ್ಮ ಹೈಕಮಾಂಡ್ ನಿಮಗೆ ನೀರು ಬಿಡಲು ಸೂಚನೆ ನೀಡಿರಬಹುದು” ಎಂದು ತರಾಟೆಗೆ ತೆಗೆದುಕೊಂಡರು.

“ಮುಂದಿನ 15 ದಿನ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಪರಿಣಾಮ ಬರದಿಂದ ಕಂಗೆಟ್ಟಿದ್ಧ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಕಾವೇರಿ ಪ್ರಾಧಿಕಾರದ ಸಮಿತಿಯ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಕರ್ನಾಟಕಕ್ಕೆ ಶಾಕ್‌ ನೀಡಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ವಿಧಾನಸೌಧ ಮುತ್ತಿಗೆಗೆ ಮುಂದಾದ ಕರವೇ

ಸರ್ಕಾರದ ಢೋಂಗಿ‌ತನ ಬಯಲು

ಕಾವೇರಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರದ ಢೋಂಗಿ‌ತನ ಮತ್ತೊಮ್ಮೆ ಬಯಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರ ಸಮರ್ಥವಾಗಿ ವಾದ ಮಂಡಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

“ಮಿತ್ರಪಕ್ಷ ಡಿಎಂಕೆಯ ಸರ್ಕಾರದ ಮುಂದೆ ಮಂಡಿಯೂರಿ ಕುಳಿತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡಲು ಸಿದ್ದರಾಮಯ್ಯರವರ ಸರ್ಕಾರ ಒಪ್ಪಿಕೊಂಡು ಬಂದಿದೆ. ಕನ್ನಡಿಗರು ನೀರಿಲ್ಲದೆ ಪರಿತಪಿಸುತ್ತಿದ್ದರೂ ಪರವಾಗಿಲ್ಲ, ಕಾಂಗ್ರೆಸ್ಸಿಗೆ I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಬೇಕಿದೆ‌. “ನಾನು ಸತ್ತಂತೆ ಮಾಡುವೆ, ನೀನು ಅತ್ತಂತೆ ಮಾಡು” ಎನ್ನುವ ಧೋರಣೆಯ ಮೂಲಕ ಕಾಂಗ್ರೆಸ್ ಸರ್ಕಾರ ಕನ್ನಡನಾಡಿಗೆ ದ್ರೋಹ ಬಗೆದಿದೆ. ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ” ಎಂದಿದೆ.

“ತಮಿಳುನಾಡಿನ 35 ಸಚಿವರಿಗಿಂತಲೂ ಹೆಚ್ಚು ಶ್ರಮಪಟ್ಟು, ನ್ಯಾಯಾಲಯ ಹಾಗೂ ನ್ಯಾಯಾಧಿಕರಣ ಪ್ರಾಧಿಕಾರದಲ್ಲಿ ತಮಿಳುನಾಡಿನ ಹಿತಾಸಕ್ತಿಯನ್ನು ಕಾಪಾಡಿ, ಕಾವೇರಿ ನೀರು ಲೀಲಾಜಾಲವಾಗಿ ಹರಿಯುವಂತೆ ಮಾಡಿದ ಸಿದ್ದರಾಮಯ್ಯ
ಅವರನ್ನು ಗುರುತಿಸಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ತಮ್ಮ ಸಂಪುಟಕ್ಕೆ ನೂತನ ನೀರಾವರಿ ಸಚಿವರನ್ನಾಗಿ ನೇಮಕ ಮಾಡಿಕೊಂಡರೆ ಅಚ್ಚರಿಯಿಲ್ಲ” ಎಂದು ಲೇವಡಿ ಮಾಡಿದೆ.

“ಕರ್ನಾಟಕದ ಹಿತವನ್ನು ಬದಿಗಿಟ್ಟು ತಮಿಳುನಾಡಿಗೆ ನೀರು ಹರಿಸುತ್ತಾ DMK ಹಾಗೂ I.N.D.I ಮೈತ್ರಿಕೂಟದ ಬಾಂಧವ್ಯವನ್ನು ಮತ್ತಷ್ಟು ಭದ್ರಗೊಳಿಸಬೇಕೆಂಬ ರಾಹುಲ್ ಗಾಂಧಿರವರ ಸೂಚನೆಯನ್ನು ಸಿದ್ದರಾಮಯ್ಯರವರು ಚಾಚೂ ತಪ್ಪದೆ ಪರಿಪಾಲಿಸುತ್ತಿದ್ದಾರೆ!” ಎಂದು ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...