ಪ್ರವೀಣ್‌ ನೆಟ್ಟಾರು ಪತ್ನಿಗೆ ಬೊಮ್ಮಾಯಿ ಸರ್ಕಾರ ನೀಡಿದ್ದ ತಾತ್ಕಾಲಿಕ ಹುದ್ದೆ ರದ್ದು

Date:

  • ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ
  • ಸಿಎಂ ಸಚಿವಾಲಯದ ಹಿರಿಯ ಸಹಾಯಕಿ(ಗ್ರೂಪ್‌ ಸಿ) ಹುದ್ದೆಗೆ ನೇಮಿಸಲಾಗಿತ್ತು

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಬೊಮ್ಮಾಯಿ ಸರ್ಕಾರ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗವನ್ನು ರದ್ದು ಮಾಡಲಾಗಿದೆ.

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ನೂತನ ಅವರ ನೇಮಕಾತಿಯನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ರದ್ದು ಮಾಡಿದೆ.

ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಅಲ್ಲದೆ, ಅಂದಿನ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶದವರೆಗೆ ಎಂದು ನೇಮಕಾತಿ ಚಾಲ್ತಿಯಲ್ಲಿರುತ್ತದೆ ಎಂದು ಹೇಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುಂಡು, ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ, ನೂತನ ಕುಮಾರಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ.

ಈ ಸುದ್ದಿ ಓದಿದ್ದೀರಾ? ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಕಾಂಗ್ರೆಸ್‌ ನೇತೃತ್ವದ ಹೊಸ ಸರ್ಕಾರವು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...