ಗ್ರಾಮೀಣ ಬಡವರ ಉದ್ಯೋಗದ ಹಕ್ಕು ಕಸಿಯುವ ವಿಬಿ ಜಿ ರಾಮ್‌ ಜಿ ಮಸೂದೆಯ ಹುನ್ನಾರ: ಸಿಪಿಐಎಂ ಆರೋಪ

Date:

"ಕೇಂದ್ರ ಸರ್ಕಾರವು ಮನರೇಗಾವನ್ನು ಬಲಪಡಿಸಲು, ಸಾರ್ವತ್ರಿಕ ಮತ್ತು ಹಕ್ಕು ಆಧಾರಿತ ಉದ್ಯೋಗ ಖಾತರಿಯಾಗಿ ಅದರ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಲು ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಗಳು ಮತ್ತು ಗ್ರಾಮೀಣ ಬಡವರ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಬೇಕು"

ಕೇಂದ್ರ ಸರ್ಕಾರದ ‘ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್(ಗ್ರಾಮೀಣ)(ವಿಬಿ ಜಿ ರಾಮ್‌ ಜಿ) ಮಸೂದೆ-2025 ಅನ್ನು ಪರಿಚಯಿಸುತ್ತಿರುವ ನಡೆ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯನ್ನು ಬದಲಿಸುವ ಪ್ರಯತ್ನ ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಬಲವಾಗಿ ವಿರೋಧಿಸಿದೆ.

ಸಿಪಿಐಎಂ ಕಲಬುರಗಿ ಜಿಲ್ಲಾ ಸಮಿತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆ ನೀಲಾ ಅವರು ಮಾತನಾಡಿ, “ಮನರೇಗಾಸೀಮಿತ ಕೆಲಸದ ಹಕ್ಕನ್ನು ಒದಗಿಸುವ ಸಾರ್ವತ್ರಿಕ ಬೇಡಿಕೆ ಚಾಲಿತ ಕಾನೂನು ಆಗಿದ್ದು, ಪ್ರಸ್ತಾವಿತ ಮಸೂದೆಯು ಈ ಕಾನೂನಿನ ಮೂಲ ಸ್ವರೂಪವನ್ನೇ ಸಂಪೂರ್ಣವಾಗಿ ನಿರಾಕರಿಸುತ್ತದೆ. ಬೇಡಿಕೆಗೆ ಅನುಗುಣವಾಗಿ ಹಣವನ್ನು ಹಂಚಿಕೆ ಮಾಡುವ ಕಾನೂನಾತ್ಮಕ ಜವಾಬ್ದಾರಿಯಿಂದ ಇದು ಕೇಂದ್ರ ಸರ್ಕಾರವನ್ನು ಮುಕ್ತಗೊಳಿಸುತ್ತದೆ” ಎಂದು ಟೀಕಿಸಿದರು.

“ಮಸೂದೆಯಲ್ಲಿ ಖಾತರಿಪಡಿಸುವ ಉದ್ಯೋಗವನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗುತ್ತದೆ ಎಂಬ ಸರ್ಕಾರದ ದಾವೆ ಕೇವಲ ಅಲಂಕಾರಿಕವಾಗಿದೆ. ವಾಸ್ತವದಲ್ಲಿ, ಉದ್ಯೋಗ ಚೀಟಿಗಳನ್ನು ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಗ್ರಾಮೀಣ ಕುಟುಂಬಗಳ ದೊಡ್ಡ ವಿಭಾಗಗಳನ್ನು ಹೊರಗಿಡಲು ಮಸೂದೆ ಬಾಗಿಲು ತೆರೆಯುತ್ತದೆ. ಕೃಷಿ ಋತುವಿನ ಗರಿಷ್ಠ ಅವಧಿಯಲ್ಲಿ 60 ದಿನಗಳವರೆಗೆ ಉದ್ಯೋಗವನ್ನು ಸ್ಥಗಿತಗೊಳಿಸಲು ಸರ್ಕಾರಗಳಿಗೆ ಅವಕಾಶ ನೀಡುವ ನಿಬಂಧನೆಯು ಗ್ರಾಮೀಣ ಕುಟುಂಬಗಳಿಗೆ ಅತಿ ಅಗತ್ಯವಾಗಿರುವ ಸಮಯದಲ್ಲಿ ಕೆಲಸವನ್ನು ನಿರಾಕರಿಸುತ್ತದೆ ಮತ್ತು ಅವರನ್ನು ಭೂಮಾಲೀಕರ ಮೇಲೆ ಅವಲಂಬಿತರನ್ನಾಗಿ ಮಾಡುತ್ತದೆ. ಕೆಲಸದ ಸ್ಥಳದಲ್ಲಿ ಡಿಜಿಟಲ್ ಹಾಜರಾತಿಯನ್ನು ಕಡ್ಡಾಯಗೊಳಿಸುವುದರಿಂದ ಕಾರ್ಮಿಕರಿಗೆ ಕೆಲಸದ ನಷ್ಟ ಮತ್ತು ಅವರ ಹಕ್ಕುಗಳ ನಿರಾಕರಣೆಯಂತಹ ಅಪಾರ ತೊಂದರೆಗಳು ಉಂಟಾಗುತ್ತವೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಪ್ರಮುಖ ಕಳವಳವೆಂದರೆ ಈ ಯೋಜನೆಗೆ ಹಣಕಾಸು ನೀಡಿಕೆಯ ವಿಧಾನದಲ್ಲಿ ಪ್ರಸ್ತಾವಿತ ಬದಲಾವಣೆ. ಈ ಮಸೂದೆಯು ವೇತನ ಪಾವತಿಗಳಿಗೆ ಕೇಂದ್ರದ ಜವಾಬ್ದಾರಿಯನ್ನು ಶೇ.100ರಿಂದ ಪ್ರಮುಖ ರಾಜ್ಯಗಳೊಂದಿಗೆ 60:40 ಹಂಚಿಕೆ ವ್ಯವಸ್ಥೆಗೆ ಇಳಿಸುತ್ತದೆ. ಇದು ನಿರುದ್ಯೋಗ ಭತ್ಯೆ ಮತ್ತು ವಿಳಂಬ ಪರಿಹಾರದ ವೆಚ್ಚವನ್ನು ಭರಿಸುವ ಜವಾಬ್ದಾರಿಯನ್ನು ರಾಜ್ಯಗಳಿಗೆ ದಾಟಿಸುತ್ತದೆ. ಇದು ರಾಜ್ಯ ಸರ್ಕಾರಗಳ ಮೇಲೆ ತಾಳಿಕೊಳ್ಳಲು ಸಾಧ್ಯವಿಲ್ಲದ ಆರ್ಥಿಕ ಹೊರೆಯನ್ನು ಹೇರುತ್ತದೆ. ಆದರೆ, ಅದೇ ವೇಳೆ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅವುಗಳಿಗೆ ಯಾವುದೇ ಪಾತ್ರವನ್ನು ನಿರಾಕರಿಸುತ್ತದೆ” ಎಂದು ಹೇಳಿದರು.

ಪೂರ್ತಿ ವೀಡಿಯೋಗೆ ಲಿಂಕ್‌ ಕ್ಲಿಕ್‌ ಮಾಡಿ https://www.facebook.com/share/v/1Akjf6Xb9L

“ಕೇಂದ್ರವು ರಾಜ್ಯವಾರು ವೆಚ್ಚದ ಮಿತಿಗಳನ್ನು ವಿಧಿಸುವ ಮತ್ತು ಹೆಚ್ಚುವರಿ ವೆಚ್ಚಗಳನ್ನು ರಾಜ್ಯಗಳು ಭರಿಸಬೇಕು ಎನ್ನುವ ʼವಾಡಿಕೆಯ ಹಂಚಿಕೆʼಯನ್ನು ಇದರಲ್ಲಿ ತಂದಿರುವುದು ಈ ಕಾರ್ಯಕ್ರಮದ ವ್ಯಾಪ್ತಿಯನ್ನು ಮತ್ತಷ್ಟು ಮೊಟಕುಗೊಳಿಸುತ್ತದೆ ಮತ್ತು ಕೇಂದ್ರದ ಹೊಣೆಗಾರಿಕೆಯನ್ನು ತಗ್ಗಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮನರೇಗಾ ಬದಲಿಗೆ ವಿಬಿ ಜಿ ರಾಮ್‌ ಜಿ ಮಸೂದೆ: ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರ ಪ್ರತಿಭಟನೆ

“ಯೋಜನೆಯ ಹೆಸರನ್ನು ಮನರೇಗಾದಿಂದ ಜಿ ರಾಮ್‌ ಜಿ ಗೆ ಬದಲಾಯಿಸುವ ದುಷ್ಟ ನಡೆ ಬಿಜೆಪಿ-ಆರ್‌ಎಸ್‌ಎಸ್ ಸೈದ್ಧಾಂತಿಕ ಕೊಂಕನ್ನು ಬಿಂಬಿಸುತ್ತದೆ. ಹಾಗಾಗಿ VB-G RAM G ಮಸೂದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರವು ಮನರೇಗಾವನ್ನು ಬಲಪಡಿಸಲು, ಸಾರ್ವತ್ರಿಕ ಮತ್ತು ಹಕ್ಕು ಆಧಾರಿತ ಉದ್ಯೋಗ ಖಾತರಿಯಾಗಿ ಅದರ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಲು ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಗಳು ಮತ್ತು ಗ್ರಾಮೀಣ ಬಡವರ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಬೇಕು” ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಈ ವೇಳೆ ಸಾಹಿತಿ ಮೀನಾಕ್ಷಿ ಬಾಳಿ ಸೇರಿದಂತೆ ಹಲವು ಜನಪರ ಮನಸುಳ್ಳವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...