ಕೊಡಗು | ಬಾಳುಗೋಡು ಆದಿವಾಸಿಗಳ ನೀರಿನ ದಾಹಕ್ಕೆ ಕೊನೆಗೂ ಮುಕ್ತಿ: ಕೊಳವೆಬಾವಿ ಕೊರೆಸಿದ ಗ್ರಾಮ ಪಂಚಾಯತಿ

Date:

ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡಿನ ಜನರು ದಶಕಗಳ ಬಳಿಕ ಪರಿಹಾರ ದೊರಕಿದೆ.

ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿದ್ದ ಬಾಳುಗೋಡಿನ ಆದಿವಾಸಿ ಜನರ ಸಮಸ್ಯೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ ಪತ್ರಗಳ ಮೂಲಕ ನೈಜ ಹೋರಾಟಗಾರರ ವೇದಿಕೆಯ ಮುಖಂಡ ಹೆಚ್ ಎಂ ವೆಂಕಟೇಶ್ ಮತ್ತವರ ತಂಡ ಮನವಿ ಮಾಡಿತ್ತು. ಆದರೆ, ಇದಕ್ಕೆ ಯಾವುದೇ ರೀತಿಯ ಸಕಾರಾತ್ಮಕ ಸ್ಪಂದನೆ ನೀಡದ ಜಿಲ್ಲಾಡಳಿತದ ವಿರುದ್ಧವೇ ಮಾನವ ಹಕ್ಕುಗಳ ಆಯೋಗಕ್ಕೆ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಮತ್ತು ವೇದಿಕೆಯ ನಿಯೋಗವು ದೂರು ನೀಡಿತ್ತು.

ಬಬಬ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದೂರಿನ ಆಧಾರದ ಮೇರೆಗೆ ಇತ್ತೀಚೆಗೆ ಮಾನವ ಹಕ್ಕುಗಳ ಆಯೋಗವು ಬಾಳುಗೋಡಿನ ಆದಿವಾಸಿ ಜನರು ವಾಸಿಸುವ ಸ್ಥಳಕ್ಕೆ ಬಂದು ಪರಿಶೀಲಿಸಿತ್ತು. ಅಲ್ಲದೇ, ಒಂದು ವಾರದೊಳಗೆ ಬೋರ್‌ವೆಲ್ ಅನ್ನು ಕೊರೆಸಿ ಶಾಶ್ವತ ನೀರನ್ನು ಒದಗಿಸುವಂತೆ ತಿಳಿಸಿದ್ದರು. ಅಲ್ಲದೇ, ತಾತ್ಕಾಲಿಕವಾಗಿ ಟ್ಯಾಂಕರ್‌ನಲ್ಲಿ ನೀರನ್ನು ಸರಬರಾಜು ಮಾಡುವಂತೆ ಸೂಚಿಸಿದ್ದರು.

22

ಮಾನವ ಹಕ್ಕುಗಳ ಆಯೋಗದ ಸೂಚನೆಯ ಹಿನ್ನೆಲೆಯಲ್ಲಿ ಬಿಟ್ಟಂಗಲ ಗ್ರಾಮ ಪಂಚಾಯತಿಯವರು ಕೊನೆಗೂ ಕೊಳವೆಬಾವಿ ಕೊರೆಸಿದ್ದು, ಅದನ್ನು ಇಂದು ಬಾಳುಗೋಡಿನ ನಿವಾಸಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ನೀರನ್ನು ಬಳಸಲು ತೊಡಗಿದ್ದಾರೆ. ಇದೇ ವೇಳೆ ನೈಜ ಹೋರಾಟಗಾರರ ಹೋರಾಟಕ್ಕೆ, ಮಾನವ ಹಕ್ಕುಗಳ ಆಯೋಗ ನೀಡಿರುವ ಬೆಂಬಲಕ್ಕೆ ಬಾಳುಗೋಡಿನ ಜನರು ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಡಗು | ಬಾಳುಗೋಡಿನ ಜನರ ಗೋಳಿಗೆ ಸ್ಪಂದಿಸಿದ ಮಾನವ ಹಕ್ಕುಗಳ ಆಯೋಗ; ದಶಕಗಳ ನಂತರ ಕುಡಿಯುವ ನೀರು

ಹೋರಾಟದ ಬಗ್ಗೆ ಮಾತನಾಡಿರುವ ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ ವೆಂಕಟೇಶ್, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕುಡಿಯುವ ನೀರಿನ ದಾಹದಲ್ಲಿ ವರ್ಷಾನುಗಟ್ಟಲೆ ಬಳಲಿ ಬೆಂಡಾದ ನಾಗರಿಕ ಸಮಾಜದಲ್ಲಿ ಬದುಕುತ್ತಿರುವ ನಮ್ಮವರು ವರ್ಷಗಳಿಂದ ನೀರಿನ ದಾಹಕ್ಕೆ ಒಂದು ಒಂದೂವರೆ ಕಿಲೋಮೀಟರ್ ನಡೆಯುತ್ತಿದ್ದರು. ಕುಡಿಯುವ ನೀರಿನ ಭವಣೆಗೆ ಕೊನೆಗೂ ಕೊಳವೆಬಾವಿ ತೆಗೆಸಿಕೊಡಲಾಗಿದೆ. ಬಿಟ್ಟಂಗಲ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರೆಲ್ಲರಿಗೂ ನೈಜ್ಯ ಹೋರಾಟಗಾರರ ವೇದಿಕೆಯ ಅಭಿನಂದನೆಗಳು ನಮ್ಮ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸ್ಥಳಕ್ಕೆ ಆಗಮಿಸಿದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಸದಸ್ಯರಿಗೆ ಅಭಿನಂದನೆ” ಸಲ್ಲಿಸುವುದಾಗಿ ತಿಳಿಸಿದ್ದಾರೆ.

356

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...