ತುಮಕೂರು | ಮೂರು ದೇವಾಲಯಕ್ಕೆ ಕನ್ನ: ಹುಂಡಿ ಹಣ ದೋಚಿದ ಖದೀಮರು

Date:

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರದ ಸಂತೆ ಮೈದಾನದ ಬಳಿಯ ಹೊರಕೆರಮ್ಮ ದೇವಾಲಯ, ಶನಿಮಹಾತ್ಮ ದೇವಾಲಯ ಹಾಗೂ ಪಾಂಡುರಂಗಸ್ವಾಮಿ ದೇವಾಲಯಕ್ಕೆ ಕನ್ನ ಹಾಕಿರುವ ಖದೀಮರು ಹುಂಡಿ ಬೀಗ ಮುರಿದು ಅಂದಾಜು 70 ಸಾವಿರ ಹಣ ದೋಚಿರುವ ಘಟನೆ ನಡೆದಿದೆ.

ಗ್ರಾಮದ ಮಧ್ಯೆ ಸಂತೆ ಮೈದಾನದ ಬಳಿಯ ಈ ದೇವಾಲಯಗಳು ಗುರಿಯಾಗಿಸಿಕೊಂಡ ಕಳ್ಳರ ಗುಂಪು ಸರಾಗವಾಗಿ ಕಳ್ಳತನ ಮಾಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಈಗಾಗಲೇ ಸಿ.ಎಸ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಲವು ಗ್ರಾಮದ ದೇವಾಲಯಕ್ಕೆ ಕನ್ನ ಹಾಕಿರುವ ಘಟನೆ ನಡೆದಿದ್ದು, ಒಂದೇ ಹೋಬಳಿಯಲ್ಲಿ ಕಳ್ಳತನ ನಡೆದಿರುವುದು ಹಿನ್ನಲೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂಟಿ ಮನೆ, ಬೀಗ ಹಾಕಿದ ಮನೆ ಹಾಗೂ ದೇವಾಲಯಗಳತ್ತ ರಾತ್ರಿ ವೇಳೆ ಜಾಗೃತೆ ವಹಿಸಿ ಒಡವೆಗಳು, ಹಣ, ಬೆಳ್ಳಿ ಪೂಜಾ ಸಾಮಗ್ರಿಗಳು ಜೋಪಾನ ಮಾಡಿಕೊಳ್ಳಲು ದೇವಾಲಯ ಸಮಿತಿಗಳಿಗೆ ಸೂಚಿಸಲಾಗಿದೆ.

ಸಿ.ಎಸ್.ಪುರ ಹೋಬಳಿ ಜೊತೆಗೆ ಕಡಬ ಹೋಬಳಿಯ ಕೆಲ ದೇವಾಲಯಗಳಲ್ಲಿ ಸಹ ಹುಂಡಿ ಹಣಕ್ಕೆ ಟಾರ್ಗೆಟ್ ಮಾಡಿರುವುದು ವ್ಯವಸ್ಥಿತ ಗುಂಪು ಸ್ಥಳೀಯವಾಗಿ ಎಲ್ಲಾ ಚಲನವಲನ ಅರಿತು ಕಳ್ಳತನ ಮಾಡಿದೆ. ಈ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಬೇಕಿದೆ.

ರಾತ್ರಿ ಗಸ್ತು ಹೆಚ್ಚಳ ಹಾಗೂ 112 ವಾಹನ ಓಡಾಟ ರಾತ್ರಿ ನಡೆಸಿದಲ್ಲಿ ಕಳ್ಳತನ ಪ್ರಕರಣಕ್ಕೆ ತಡೆಯೊಡ್ಡಬಹುದು. ಹೀಗೆ ಕಳ್ಳತನ ಮುಂದುವರೆದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಸಿ.ಎಸ್.ಪುರ ಪೊಲೀಸರು ಧಾವಿಸಿ ಮುಂದಿನ ತನಿಖೆ ಆರಂಭಿಸಿ ಪ್ರಕರಣ ದಾಖಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...