ಸ್ವಾತಂತ್ರ್ಯ ಪೂರ್ವದಿಂದಲೂ ವೀರಶೈವ–ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯಿದೆ : ಸಚಿವ ಈಶ್ವರ ಖಂಡ್ರೆ

Date:

ಅಖಿಲ ಭಾರತ ವೀರಶೈವ ಮಹಾಸಭೆ ಸ್ವಾತಂತ್ರ್ಯ ಪೂರ್ವದಿಂದಲೂ ವೀರಶೈವ–ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಎಲ್ಲಾ ಪೂಜ್ಯರು ಮತ್ತು ರಾಜಕೀಯ ನಾಯಕರ ಸಮ್ಮುಖದಲ್ಲಿಯೇ ಮುಂದಿಟ್ಟಿದೆ ಎಂದು ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬಸವಕಲ್ಯಾಣದಲ್ಲಿ ಬಸವ ಮಹಾಮನೆಯಲ್ಲಿ ನಡೆದ 24ನೇ ಕಲ್ಯಾಣ ಪರ್ವದಲ್ಲಿ ಮಾತನಾಡಿದ ಅವರು, ʼ2000ನೇ ವರ್ಷದಲ್ಲಿ ಕೇಂದ್ರಕ್ಕೆ ಕಳಿಸಲಾಗಿತ್ತು. ಅಂದಿನ ಯುಪಿಎ ಸರ್ಕಾರ ಅದನ್ನು ತಿರಸ್ಕರಿಸಿತು. ಮತ್ತೆ 2013ರಲ್ಲಿ ಕಳುಹಿಸಿದ ಪ್ರಸ್ತಾವನೆಗೆ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ, ಸಚಿವರಾದ ವಿ.ಸೋಮಣ್ಣ, ಎಂ.ಬಿ.ಪಾಟೀಲ್ ಹಾಗೂ ಬಸವ ಸಮಿತಿಯ ಅರವಿಂದ ಜತ್ತಿ ಸಹಿ ಹಾಕಿ ಕೇಂದ್ರಕ್ಕೆ ಕಳುಹಿಸಲಾಗಿತ್ತು, ಅದನ್ನೂ ಸಹ ಕೇಂದ್ರ ವಾಪಸ್‌ ಕಳುಹಿಸಿತ್ತು. ತದನಂತರ 2017-18ರಲ್ಲಿ ಸಿದ್ದರಾಮಯ್ಯ ನೇತ್ರತ್ವದ ಸರ್ಕಾರ ಸಂಪುಟ ಸಭೆಯ ಶಿಪಾರಸ್ಸಿನೊಂದಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದು ವಾಪಸ್‌ ಬಂದಿತ್ತುʼ ಎಂದು ತಿಳಿಸಿದರು.

ʼಪ್ರತ್ಯೇಕ ಧರ್ಮ ಮಾನ್ಯತೆಗೆ ಎಲ್ಲಾ ಹಿರಿಯರು, ಮಠಾಧೀಶರು, ಪೂಜ್ಯರು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚಿಸಿ ಒಮ್ಮತದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಸಮಾಜವನ್ನು ಒಗ್ಗೂಡಿಸಿ ಬಲವಾದ ಸಮಾಜ ಕಟ್ಟುವ ಕಾರ್ಯ ಯಶಸ್ವಿಯಾಗುತ್ತದೆ. ಒಬ್ಬರ ಮೇಲೆ ಒಬ್ಬರು ಆರೋಪ-ಪ್ರತ್ಯಾರೋಪ ಮಾಡಿದರೆ ಸಮಾಜ ಒಗ್ಗೂಡಿಸಲು ಅಸಾಧ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಮಾಜವನ್ನು ನಮ್ಮ ಸ್ವಾರ್ಥಕ್ಕಾಗಿ ಸಮಾಜಕ್ಕಾಗಿ ಬಹಳ ಸಲ ಯಾವುದೇ ರೀತಿಯಲ್ಲಿ ಉಪಯೋಗ ಮಾಡಿಕೊಂಡಿಲ್ಲ. ಅಸತ್ಯವಾದ ಮಾತು ನಮ್ಮ ಬಾಯಲ್ಲಿ ಯಾವತ್ತೂ ಬರುವದಿಲ್ಲ. ನಾನಾಗಲಿ, ನಮ್ಮ ತಂದೆಯಾಗಲಿ, ಸಮಾಜವನ್ನು ನಮ್ಮ ಸ್ವಾರ್ಥಕ್ಕೆ ಎಂದಿಗೂ ಬಳಸಿಕೊಂಡಿಲ್ಲ. ಆದರೆ, ಸಮಾಜಕ್ಕಾಗಿ ನಾವು, ಪ್ರಹಾರಗಳನ್ನು ಎದುರಿಸಿದ್ದೇವೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

ʼಬಸವಣ್ಣನವರನ್ನು ಎಲ್ಲಾ ಜಾತಿ-ಧರ್ಮ ಹಾಗೂ ಭಾಷಿಕರನ್ನು ನಮ್ಮವರೇ ಎಂದು ಹೇಳಿದ್ದಾರೆ. ಎಲ್ಲ ಮಠಾಧೀಶರು, ಪೂಜ್ಯರಿಗೂ ಪೂಜ್ಯನೀಯವಾಗಿ ಗೌರವಿಸುತ್ತೇವೆ. ಇದೇ ಬಸವತತ್ವವಾಗಿದೆ. ಎಲ್ಲರ ತೀರ್ಮಾನಕ್ಕೆ ನನ್ನ ಯಾವುದೇ ಅಪಸ್ವರ ಇಲ್ಲʼ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...