ರಾಜ್ಯದಲ್ಲಿ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಹೆಚ್ಚಳ ಆತಂಕ

Date:

ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಟೊಮೆಟೊ ಬೆಲೆ ಗಗನಕ್ಕೇರಿ ಜನರನ್ನು ಕಂಗಾಲಾಗಿ ಮಾಡಿತ್ತು. ಇದೀಗ ಜನ ಬೆಲೆ ಇಳಿಕೆ ಕಂಡಿದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿಯೇ ಈರುಳ್ಳಿ ದರ ಏರಿಕೆ ಆತಂಕ ಎದುರಾಗಿದೆ.

ಕಳೆದ ವಾರ ಕೆಜಿಗೆ ₹15 ರಿಂದ ₹20 ಇದ್ದ ಈರುಳ್ಳಿ ದರ ಇದೀಗ, ಕೆಜಿಗೆ ₹40 ರಿಂದ ₹45 ಏರಿಕೆ ಕಂಡಿದೆ. ರಾಜ್ಯದಲ್ಲಿ ಈರುಳ್ಳಿ ಬೆಳೆಯುವ ಜಿಲ್ಲೆಗಳಿಂದ ಪೂರೈಕೆ ಬಹುತೇಕ ಕುಸಿದಿದೆ. ಅಲ್ಲದೇ ನಾಸಿಕ್ ಹಾಗೂ ಪುಣೆಯಿಂದ ಪೂರೈಕೆಯಾಗುತ್ತಿರುವುದು ಸ್ಥಗಿತವಾಗಿದೆ. ಈರುಳ್ಳಿಗೆ ಬೇಡಿಕೆ ಹೆಚ್ಚಾಗಿದ್ದರಿಂದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಚಿತ್ರದುರ್ಗ, ಚಳ್ಳಕೆರೆ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣದ ರಾಜ್ಯಗಳಿಂದ ಈರುಳ್ಳಿ ಮಾರುಕಟ್ಟೆಗೆ ಬರುತ್ತದೆ. ನವೆಂಬರ್ ಬಳಿಕ ಗದಗ, ವಿಜಯಪುರದಿಂದ ಪೂರೈಕೆಯಾಗುತ್ತದೆ. ಕಳೆದೆರಡು ವರ್ಷ ಅತಿವೃಷ್ಟಿ, ರೋಗಬಾಧೆಯಿಂದ ಈರುಳ್ಳಿ ನಷ್ಟವಾಗಿದ್ದರೆ, ಈ ಬಾರಿ ಅನಾವೃಷ್ಟಿ ಬಿತ್ತನೆ ಪ್ರಮಾಣವನ್ನು ಕುಗ್ಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಯಶವಂತಪುರ ಎಪಿಎಂಸಿಗೆ ಈ ವೇಳೆಗೆ 1.20 ಲಕ್ಷ ಚೀಲ ಈರುಳ್ಳಿ ಬರಬೇಕಿತ್ತು. ಆದರೆ, ಶೇ. 35ರಷ್ಟು ಕಡಿಮೆ ಅಂದರೆ, ನಿತ್ಯ ಸರಾಸರಿ 60 ಸಾವಿರದಿಂದ 70 ಸಾವಿರ ಚೀಲಗಳು ಮಾತ್ರ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಡು ಕೊರತೆಯಾಗುವ ಸಾಧ್ಯತೆಗಳಿವೆ. ಯಶವಂತಪುರ, ದಾಸನಪುರ ಎಪಿಎಂಸಿಯಲ್ಲಿ ಕ್ವಿಂಟಲ್‌ಗೆ ₹ 1,000 ದಿಂದ ₹ 3,000 ಈರುಳ್ಳಿ ಬೆಲೆಯಿದೆ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ

ಕೇಂದ್ರ ಸರ್ಕಾರ ನಾಫೆಡ್ (ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ) ಮೂಲಕ ಮಹಾರಾಷ್ಟ್ರದ ಈರುಳ್ಳಿಯನ್ನು ರಾಜ್ಯಕ್ಕೆ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣದಲ್ಲಿದೆ. ಒಂದು ವೇಳೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಪೂರೈಕೆ ಕಡಿಮೆಯಾದರೆ ರಾಜ್ಯದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಹೆಚ್ಚಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...