ಹಿಂದುತ್ವಕ್ಕೂ ಹಿಂದು ಧರ್ಮಕ್ಕೂ ಸಂಬಂಧವೇ ಇಲ್ಲ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್

Date:

ಹಿಂದೂ ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೇ ಸಂಬಂಧ ಇಲ್ಲ. ಹಿಂದುತ್ವವು ಸಂಘಪರಿವಾರದ ಸುಳ್ಳು, ಹಿಂಸೆಗಳನ್ನು ಒಳಗೊಂಡ ರಾಜಕೀಯ ಅಜೆಂಡಾ ಮಾತ್ರ. ತನ್ನ ರಾಜಕೀಯ ಉದ್ದೇಶವನ್ನು ಸಾಧಿಸಲು ಅದು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ. ಆ ಮೂಲಕ ಹಿಂದೂಗಳಲ್ಲಿ ಭಯ ಮೂಡಿಸಿ ತನ್ನ ಹಿಂದುತ್ವದ ಜಾಲದೊಳಗಡೆ ಕೆಡವುವ ಕೆಲಸ ಮಾಡುತ್ತಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ ಕೆ.ಪ್ರಕಾಶ್ ಆರೋಪಿಸಿದರು.

ಅವರು ಸೋಮವಾರ ಮಂಗಳೂರಿನ ಕ್ಲಾಕ್‌ ಟವರ್‌ ಬಳಿ ನಡೆದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮತೀಯ ದ್ವೇಷದ ಕೊಲೆ, ಪ್ರತಿಕೊಲೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಮೂರು ದಶಕದ ಅವಧಿಯಲ್ಲಿ ನಡೆದಿರುವ ಕೋಮುವಾದಿ ಕೊಲೆಗಳನ್ನು ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒಳಪಡಿಸಲು ಒತ್ತಾಯಿಸಿದರು. ಜಿಲ್ಲೆಯಲ್ಲಿ ಮತೀಯ ದ್ವೇಷದ ಸರಣಿ ಕೊಲೆಗಳು ನಡೆಯಲು ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿತನ, ಕೋಮುವಾದಿ ಶಕ್ತಿಗಳ ಜತೆಗಿನ ಒಡನಾಟವೇ ನೇರ ಕಾರಣ. ಸಿಪಿಐಎಂ ಪಕ್ಷದ ಎಚ್ಚರಿಕೆಯನ್ನು ಜಿಲ್ಲೆಯ ಕಾಂಗ್ರೆಸ್ ನಾಯಕತ್ವ ಅಂದು ನಿರ್ಲಕ್ಷಿಸಿತು. ಪೊಲೀಸ್ ಕಮಿಷನರ್ ಅಗ್ರವಾಲ್ ರನ್ನು ಆರೋಪಗಳ ಹೊರತಾಗಿ ರಕ್ಷಿಸಿತು. ಅದರ ಪರಿಣಾಮ ಅಮಾಯಕರು ಕೊಲೆಗೀಡಾಗುವಂತಾಯ್ತು. ಈಗಲಾದರು ಕಾಂಗ್ರೆಸ್ ನಾಯಕತ್ವ ಎಚ್ಚೆತ್ತುಕೊಳ್ಳಲಿ, ನೂತನ ಪೊಲೀಸ್ ಅಧಿಕಾರಿಗಳು ಹಾಗೂ ಕೋಮುವಾದಿ ವಿರೋಧಿ ಪಡೆಗೆ ಬಲತುಂಬುವ ಕೆಲಸ ಮಾಡಲಿ” ಎಂದು ಹೇಳಿದರು.

ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, “ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಕೋಮು ದ್ವೇಷದ ಕೊಲೆ, ಪ್ರತಿಕೊಲೆಗಳು ಕನಿಷ್ಠ ಹತ್ತು ನಡೆದಿವೆ. ಬಹುತೇಕ ಪ್ರಕರಣಗಳ ಆರೋಪಿಗಳು ವರ್ಷದ ಒಳಗಡೆ ಜಾಮೀನು ಪಡೆದು ರಾಜೋರೋಷವಾಗಿ ತಿರುಗಾಡುತ್ತಿದ್ದಾರೆ. ಕಳೆದ ಮೂರು ದಶಕದ ಅವಧಿಯಲ್ಲಿ ಇಂತಹ ಕನಿಷ್ಟ ಮೂವತ್ತಕ್ಕೂ ಹೆಚ್ಚು ಕೊಲೆಗಳು ಇಲ್ಲಿ ನಡೆದಿವೆ. ಇವರಿಗೆ ರಾಜಕೀಯ ಆಶ್ರಯ ನೀಡುವವರು ಯಾರು ? ಈ ಕೊಲೆಗಳ ಹಿಂದಿನ ಪಿತೂರಿ ದಾರರು ಯಾರು, ರಾಜಕೀಯ ಫಲಾನುಭವಿಗಳು ಯಾರು? ಎಂಬುದು ಬಯಲಾಗಬೇಕಿದೆ. ಇದರ ಸತ್ಯಗಳು ಜನತೆಯ ಅರಿವಿಗೆ ಬರಬೇಕಾಗಿದೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಅಶ್ರಫ್ ಗುಂಪು ಹತ್ಯೆ; ಪಿಸ್ತೂಲ್ ರವಿ ಹಲ್ಲೆ ನಡೆಸಿರುವುದಕ್ಕೆ ಸಾಕ್ಷ್ಯಾಧಾರ‌ ಸಿಕ್ಕಿಲ್ಲ: ಪೊಲೀಸ್ ಕಮಿಷನರ್

ಪ್ರತಿಭಟನೆಯಲ್ಲಿ ಕೆ.ಯಾದವ ಶೆಟ್ಟಿ, ದೇವಿ ಮಂಡ್ಯ, ಸುನಿಲ್ ಕುಮಾರ್ ಬಜಾಲ್, ಕೃಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟು, ಬಿ ಎಂ ಭಟ್, ಸದಾಶಿವ ದಾಸ್, ಜಯಂತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಪ್ರಮೀಳಾ ಶಕ್ತಿನಗರ, ರಮಣಿ ಮೂಡಬಿದ್ರೆ, ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ವಸಂತಿ ಕುಪ್ಪೆಪದವು, ಮನೋಜ್ ವಾಮಂಜೂರು, ರಫೀಕ್ ಹರೇಕಳ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...