ಜುಲೈನಲ್ಲಿ ಉತ್ತಮ ಮಳೆ, ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಇಲ್ಲ: ಸಚಿವ ಕೃಷ್ಣಭೈರೇಗೌಡ

Date:

  • ‘ಮಳೆ ಕೊರತೆ ಶೇ. 56 ರಿಂದ ಶೇ. 29ಕ್ಕೆ ಇಳಿಕೆಯಾಗಿದೆʼ
  • ಹಿಂದಿನ ಸರ್ಕಾರದಲ್ಲಿ ಜಲಾಶಯಗಳ ಆಶಿಸ್ತಿನ ನಿರ್ವಹಣೆ

ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿಲ್ಲ, ರೈತರ ಬೆಲೆ ಹಾನಿಯಾಗಿದೆ, ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ ಎಂದು ಸದನದಲ್ಲಿ ಅನೇಕ ಶಾಸಕರು ಪ್ರಶ್ನೆ ಮುಂದಿಟ್ಟರು. ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, “ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮಳೆಯ ಕೊರತೆ ಇದೀಗ ಶೇ. 29ಕ್ಕೆ ಇಳಿದಿದೆ. ಹೀಗಾಗಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿದ್ದರೂ ಸಹ, ಕೆಲವು ಜಿಲ್ಲೆಗಳು ಈಗಲೂ ಮಳೆ ಕೊರತೆಯನ್ನು ಎದುರಿಸುತ್ತಿವೆ. ರಾಜ್ಯದ 330 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ. 404 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆದು ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ಹೊರೆಯನ್ನು ಸರ್ಕಾರ ಗ್ರಾಮ ಪಂಚಾಯಿತಿಗಳ ಮೇಲೆ ಹೊರಿಸಿಲ್ಲ. ಬದಲಾಗಿ ಪ್ರತಿ ಜಿಲ್ಲೆಗೆ ನೀರಿನ ಪೂರೈಕೆಗೆಂದೆ ಸರ್ಕಾರ ತಲಾ 1 ಕೋಟಿ ರೂ.ಹಣ ಮಂಜೂರು ಮಾಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಎಚ್ಚರವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೆ, ಹೆಚ್ಚುವರಿ ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲು ಸರ್ಕಾರ ಬದ್ಧವಾಗಿರುವುದಾಗಿ ಸಚಿವರಿಗೆ ತಿಳಿಸಲಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ- ಮಣಿಪುರದ ಪೈಶಾಚಿಕ ಕೃತ್ಯ- ಸುಪ್ರೀಮ್ ಉಸ್ತುವಾರಿಯಲಿ ನಡೆಯಲಿ ನ್ಯಾಯಾಂಗ ತನಿಖೆ

“ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ ಎಲ್ಲ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ಪರಿಣಾಮ ಜಲಾಶಯಗಳು ಬಹುತೇಕ ಬರಿದಾಗಿವೆ. ಕಳೆದ ವರ್ಷಾಂತ್ಯದ ಡಿಸೆಂಬರ್ ವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಜಲಾಶಯಗಳಿಗೆ ನೀರಿನ ಹರಿವು ಭರಪೂರವಾಗಿತ್ತು. ಆದರೆ, ಹಿಂದಿನ ಸರ್ಕಾರ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ನೀರನ್ನು ಬೇಕಾಬಿಟ್ಟಿ ನಾಲೆಗಳಿಗೆ ಹರಿಸಿದೆ. ಪರಿಣಾಮ ಬಹುತೇಕ ಜಲಾಶಯಗಳು ಖಾಲಿಯಾಗಿವೆ” ಎಂದು ಅಸಮಾಧಾನ ಹೊರಹಾಕಿದರು.

“ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗದ ಕಾರಣ ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ಕುಸಿದಿತ್ತು. ಆದರೆ, ಜುಲೈನಲ್ಲಿ ಉತ್ತಮ ಮಳೆಯಾಗಿದೆ. ಕಾವೇರಿಯ ನಾಲ್ಕು ಜಲಾಶಯಗಳಿಗೆ 18,617 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಕೃಷ್ಣ ನದಿಯ 6 ಜಲಾಶಯಗಳಿಗೆ 76,264 ಕ್ಯೂಸೆಕ್ಸ್ ನೀರಿನ ಹರಿವಿದೆ. ಆಲಮಟ್ಟಿಗೂ 32,146 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಘಟಪ್ರಭ-ಮಲಪ್ರಭದಲ್ಲೂ ನೀರಿನ ಒಳಹರಿವು ಹಣನೀಯವಾಗಿ ಹೆಚ್ಚಾಗಿದೆ” ಎಂದರು.

ಸಿಎಂ ಜೊತೆ ಚರ್ಚಿಸಿ ಬರಗಾಲ ಘೋಷಣೆ

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತ ಸಂಕಷ್ಟಕ್ಕೆ ಈಡಾಗಿದ್ದಾನೆ. ಹಲವೆಡೆ ಬೆಲೆ ನಷ್ಟವಾಗಿದೆ. ಹೀಗಾಗಿ ಬರಗಾಲ ಘೋಷಿಸಿ ರೈತರಿಗೆ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದು ವಿಧಾನಸಭೆಯಲ್ಲಿ ಹಲವು ಶಾಸಕರು ಒತ್ತಾಯಿಸಿದರು. ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ, “ರಾಜ್ಯದಲ್ಲಿ ಕೆಲವು ತಾಲೂಕುಗಳಲ್ಲಿ ಬರದ ಛಾಯೆ ಇದೆ. ಅಲ್ಲದೆ, ಬರ ಘೋಷಣೆಗೆ ಕೇಂದ್ರ ಸರ್ಕಾರದ ಕೆಲವು ಮಾನದಂಡಗಳಿವೆ. ಆಗಸ್ಟ್ ಮೊದಲ ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಬರ ಘೋಷಣೆಯ ಬಗ್ಗೆ ಚಿಂತನೆ ನಡೆಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...