ʼಅಡ್ಡಗೋಡೆ ಮೇಲೆ ದೀಪ ಇಟ್ಟರೆ ಏನೂ ಪ್ರಯೋಜನವಿಲ್ಲ’: ಕೃಷಿ ಇಲಾಖೆಗೆ ಕೃಷ್ಣ ಬೈರೇಗೌಡರ ಖಡಕ್ ಕ್ಲಾಸ್

Date:

ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿ ಮಂಡಿಸಿದ ಅಧಿಕಾರಿಯ ವಿರುದ್ಧ, ‘ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ’ ವರದಿ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುಡುಗಿದರು.

ಹಾಸನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೃಷಿ ಇಲಾಖೆಯ ಅಧಿಕಾರಿಯೊಬ್ಬರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದು, ಅವರ ಆಳವಾದ ಕೃಷಿ ಜ್ಞಾನ ಮತ್ತು ಕಾರ್ಯಕ್ಷಮತೆಯ ಮೇಲಿನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತಾಗಿದೆ. ಅಲ್ಲದೆ ಅವರ ಈ ನೇರ ಮತ್ತು ಆಕ್ರಮಣಕಾರಿ ಶೈಲಿಯು ಸಭೆಯಲ್ಲಿ ಗಮನ ಸೆಳೆಯಿತು.

ಬಿಳಿಸುಳಿ ರೋಗದ ನಿಜವಾದ ಸವಾಲು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

5655 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದುನಿಂತಿದೆ. ಆದರೆ ಬಿಳಿಸುಳಿ ರೋಗ(white whorl disease) ರೈತರ ಬದುಕನ್ನೇ ಬೆಂಕಿ ಹಚ್ಚಿದಂತೆ ಹರಡುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು, ಕೃಷಿ ಅಧಿಕಾರಿ ಕೇವಲ ರೋಗ ಹರಡಿರುವ ವಿಸ್ತೀರ್ಣದ ಬಗ್ಗೆ ಮಾಹಿತಿ ನೀಡಿ ಕೈತೊಳೆದುಕೊಂಡರು. ಇದಕ್ಕೆ ಸಚಿವ ಬೈರೇಗೌಡರ ಪ್ರತಿಕ್ರಿಯೆ ತೀಕ್ಷ್ಣವಾಗಿತ್ತು.

“ಇಷ್ಟು ಕೃಷಿ ವಿಶ್ವವಿದ್ಯಾಲಯಗಳು, ತಂತ್ರಜ್ಞಾನಗಳು ಇವೆ. ಆದರೂ ಬಿಳಿಸುಳಿ ರೋಗಕ್ಕೆ ನಿಖರ ಕಾರಣ ತಿಳಿದಿಲ್ಲವೆಂದರೆ ಏನು ಪ್ರಯೋಜನ?” ಎಂದು ಅವರು ನೇರವಾಗಿ ಪ್ರಶ್ನಿಸಿದರು. ಇದು ಕೃಷಿ ಕ್ಷೇತ್ರದ ಮೂಲಭೂತ ಸಮಸ್ಯೆಗಳ ಬಗ್ಗೆ ಅವರ ಸ್ಪಷ್ಟ ಕಲ್ಪನೆಯನ್ನು ತೋರಿಸುತ್ತದೆ.

ʼಬ್ಯಾನರ್ ಪ್ರಚಾರ ಬೇಡ, ಪ್ರಾಕ್ಟಿಕಲ್ ಆಗಿ ಕೆಲಸ ಮಾಡಿʼ

ಕೃಷಿ ಅಧಿಕಾರಿಗಳು ಕೇವಲ ನಗರದಲ್ಲಿ ಕುಳಿತು, ಬ್ಯಾನರ್‌ ಹಿಡಿದು ಫೋಟೋ ತೆಗೆಸಿಕೊಳ್ಳುವುದನ್ನೇ ‘ಅರಿವು’ ಎಂದುಕೊಳ್ಳುತ್ತಾರೆ. ಇದು ರೈತರಿಗೆ ಯಾವುದೇ ಸಹಾಯ ಮಾಡುವುದಿಲ್ಲ. ಬ್ಯಾನರ್ ಹಿಡ್ಕೊಂಡು ಫೋಟೋ ತೆಗಿಸೋ ಅವೇರ್‌ನೆಸ್ ಬೇಡ… ರೈತರ ಬಳಿ ನೇರವಾಗಿ ಹೋಗಿ ಮಾಹಿತಿ ನೀಡಿ” ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಜತೆಗೆ, ಬೀಜೋಪಚಾರ(seed treatment) ಮತ್ತು ಬೆಳೆ ಪರಿವರ್ತನೆ(crop rotation) ಬಗ್ಗೆ ರೈತರಿಗೆ ವೈಜ್ಞಾನಿಕ ಮಾಹಿತಿ ನೀಡುವಂತೆ ತಾಕೀತು ಮಾಡಿದ್ದು, “ಕೃಷಿ ಇಲಾಖೆಯ ಕಾರ್ಯಗಳು ಕೇವಲ ಕಡತಗಳಲ್ಲಿ ಉಳಿಯಬಾರದು. ಬದಲಾಗಿ ರೈತರ ಜಮೀನುಗಳಲ್ಲಿ ಕಾರ್ಯರೂಪಕ್ಕೆ ಬರಬೇಕು” ಎಂಬುದು ಅವರ ಮುಖ್ಯ ಆಶಯವಾಗಿತ್ತು.

ಕಂದಾಯ ಇಲಾಖೆಯನ್ನು ನಿರ್ವಹಿಸುವ ಬೈರೇಗೌಡರು, ಕೃಷಿ ಇಲಾಖೆಯ ಸಮಸ್ಯೆಗಳ ಬಗ್ಗೆ ತೋರಿಸಿದ ಅಪಾರ ಜ್ಞಾನ ಅಚ್ಚರಿ ಮೂಡಿಸಿದೆ. ಮೆಕ್ಕೆಜೋಳ ಒಂದೇ ಬೆಳೆಯತ್ತ ರೈತರ ಅವಲಂಬನೆ, ಬೀಜಗಳ ಕಲುಷಿತದ ಬಗ್ಗೆ(seed contamination) ವೈಜ್ಞಾನಿಕ ಪ್ರಶ್ನೆಗಳು ಮತ್ತು ಎಐಸಿಆರ್‌ಟಿ(AICRT)ಯಂತಹ ಸಂಶೋಧನಾ ಸಂಸ್ಥೆಗಳ ಕಾರ್ಯವೈಖರಿ ಕುರಿತು ಅವರ ನಿಖರವಾದ ಟೀಕೆಗಳು ಕೃಷಿ ವಿಷಯಗಳ ಮೇಲೆ ಅವರಿಗಿರುವ ಹಿಡಿತವನ್ನು ತೋರಿಸುತ್ತದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ; ಜಿಲ್ಲೆಯಲ್ಲಿಯೂ ಪ್ರಾರಂಭ : ಜಿಲ್ಲಾಧಿಕಾರಿ

ಕೃಷಿಯನ್ನು ಕೇವಲ ಆರ್ಥಿಕ ದೃಷ್ಟಿಕೋನದಿಂದ ಅಳೆಯಲು ಸಾಧ್ಯವಿಲ್ಲ. ಅದು ರೈತರ ಬದುಕು, ಅವರ ಶ್ರಮ ಮತ್ತು ಸಂಕಷ್ಟಗಳೊಂದಿಗೆ ನೇರವಾಗಿ ಬೆಸೆದುಕೊಂಡಿದೆ” ಎಂದು ಸಚಿವರು ಪ್ರತಿಪಾದಿಸಿದರು.

ಒಟ್ಟಾರೆಯಾಗಿ, ಕೃಷ್ಣ ಬೈರೇಗೌಡರ ಈ ನಡೆ ಕೇವಲ ಒಬ್ಬ ಮಂತ್ರಿಯ ತರಾಟೆಯಾಗಿರದೆ, ವ್ಯವಸ್ಥೆಯೊಳಗಿನ ಬೇಜವಾಬ್ದಾರಿತನ ಮತ್ತು ತಾಂತ್ರಿಕ ಕುರುಡುತನದ ವಿರುದ್ಧದ ಧ್ವನಿಯಾಗಿತ್ತು. ಕೃಷಿ ಕ್ಷೇತ್ರಕ್ಕೆ ಹಣಕಾಸು ಮತ್ತು ಯೋಜನೆಗಳು ಎಷ್ಟೇ ಬಂದರೂ, ಅದನ್ನು ಸರಿಯಾದ ರೀತಿಯಲ್ಲಿ ಜಾರಿಗೆ ತರುವ ಕಾರ್ಯತಂತ್ರ ಮತ್ತು ಬದ್ಧತೆ ಇಲ್ಲದೆ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂಬುದು ಅವರ ಕಠಿಣ ಮಾತುಗಳ ಅಂತರಾರ್ಥ. ಅವರ ಈ ನಿಲುವು ಇಲಾಖೆಯ ಅಧಿಕಾರಿಗಳಿಗೆ ಪಾಠವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...