ಕೊಡಗು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಜಿಲ್ಲಾಡಳಿತದ ವಿರುದ್ಧ ಕಿಡಿ

Date:

  • ಬಡವರ ಮತಗಳಿಗೆ ಬೆಲೆ ಇಲ್ಲದಂತೆ ನಡೆದುಕೊಳ್ಳುತ್ತಿರುವ ಜಿಲ್ಲಾಡಳಿತ
  • ಮೂಲ ಸೌಕರ್ಯ, ಹಕ್ಕುಪತ್ರದಲ್ಲಾಗಿರುವ ಲೋಪ ಸರಿಪಡಿಸಲು ಆಗ್ರಹ

ಮೂಲ ಸೌಕರ್ಯ ಮತ್ತು ಹಕ್ಕುಪತ್ರದಲ್ಲಿ ಆಗಿರುವ ಲೋಪ ಸರಿಪಡಿಸುವಂತೆ ಆಗ್ರಹಿಸಿ, ಮತದಾನ ಬಹಿಷ್ಕರಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 31 ದಿನ ಪೂರೈಸಿದೆ. ಆದರೂ, ತಮ್ಮತ್ತ ಸಮಸ್ಯೆಗಳನ್ನು ಆಲಿಸದ ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಶುಕ್ರವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಹೊದ್ದುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾನ್ಸಿರಾಂ ನಗರದ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮತದಾನ ಬಹಿಷ್ಕರಿಸುತ್ತೇವೆಂದರೂ ಜಿಲ್ಲಾಡಳಿತ ಆ ನಿವಾಸಿಗಳತ್ತ ತಿರುಗಿಯೂ ನೋಡಿಲ್ಲವೆಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡ ಎಂ.ಎಸ್ ಅನಂದ, “ಮೂಲ ಸೌಕರ್ಯ ಮತ್ತು ಹಕ್ಕುಪತ್ರದಲ್ಲಿ ಕಂದಾಯ ಇಲಾಖೆಯಿಂದ ಆಗಿರುವ ಲೋಪದೋಷ ಸರಿಪಡಿಸಿಕೊಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಠಾವಧಿ ಹೋರಾಟ 31 ದಿನ ಪೂರೈಸಿದೆ. ಆದರೆ, ನಮ್ಮ ಹೋರಾಟದ ಬಗ್ಗೆ ಜಿಲ್ಲಾಡಳಿತ ಈವರೆಗೂ ಗಮನಹರಿಸಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಬಡವರ ಬೇಡಿಕೆಗಳನ್ನು ಆಲಿಸಿ, ಎಷ್ಟು ದಿನದಲ್ಲಿ ಬಗೆಹರಿಸಬಹುದು ಎಂದು ಭರವಸೆ ನೀಡಬೇಕು ಎಂದು ಈಗಾಗಲೇ ಹೇಳಿಕೆ ನೀಡಿದ್ದೇವೆ. ನಿರಂತರವಾಗಿ ಒಂದು ತಿಂಗಳಿನಿಂದ ಸುಡು ಬಿಸಿಲಿನಲ್ಲಿ ಧರಣಿ ನಡೆಸುತ್ತಿದ್ದರೂ ಕೊಡಗು ಜಿಲ್ಲಾಡಳಿತವು ಬಡವರನ್ನು, ದೀನ ದಲಿತರನ್ನು, ಕೂಲಿ ಕಾರ್ಮಿಕರನ್ನು ಅತ್ಯಂತ ಹೀನಾಯವಾಗಿ ಕಾಣುತ್ತಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

“ಬಡಜನಗಳ ಮತಕ್ಕೆ ಬೆಲೆಯೇ ಇಲ್ಲ ಎಂಬಂತೆ ಜಿಲ್ಲಾಡಳಿತ ವರ್ತಿಸುತ್ತಿದೆ. ನಾವು ಭಾರತ ದೇಶದ ಯಾವ ನಾಗರಿಕತೆಯಲ್ಲಿ ಬದುಕುತ್ತಿದ್ದೇವೆ ಎಂಬುದು ನಮಗೆ ಅನುಮಾನ ಮೂಡುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.

“ಆಡಳಿತದಲ್ಲಿರುವ ಭ್ರಷ್ಟ ಅಧಿಕಾರಿಗಳು ಬಡವರ ಜೀವನವನ್ನೇ ಬೆತ್ತಲೆ ಮಾಡಿದ್ದಾರೆ. ಅದಕ್ಕಾಗಿ ನಾವು ಇಂದು ಅರೆಬೆತ್ತಲೆ ಪ್ರತಿಭಟನೆ ಮಾಡುವ ಮೂಲಕ ಜಿಲ್ಲಾಡಳಿತದ ಗಮನ ಸೆಳೆದಿದ್ದೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...