ಕೋಲಾರ | ದಬ್ಬಾಳಿಕೆಯ ಪಿಡುಗನ್ನು ಹೋಗಲಾಡಿಸಬೇಕಿದೆ : ಎಂಎಲ್‌ಸಿ ನಾಗರಾಜ್ ಯಾದವ್

Date:

ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆಯಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಹೇಳಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಒಂದು ಕಡೆ ಶೋಷಣೆ, ಮತ್ತೊಂದು ಕಡೆ ಭ್ರಷ್ಟಾಚಾರ, ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ. ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ. ಇದು ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
gfgc̄

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ. ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ. ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ. ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ. ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದೊಂದಿಗೆ ಚರ್ಚಿಸಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ. ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ. ಡಾ.ಶಂಕರಪ್ಪನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ. ಮುಂದೆ ಅವರು ಬರವಣಿಗೆಗೆ ಹೆಚ್ಚಿನ ಸಮಯ ಕೊಡಲಿದ್ದಾರೆ. ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದು ಬೇಡಿಕೆಯಿಟ್ಟರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು. ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕೆಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ. ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು. ಇವು ಮನುಷ್ಯನ ವಿಕಸನಕ್ಕೆ ನಾಲ್ಕು ಪ್ರಮುಖ ಅಂಶಗಳಾಗಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಕಾರಿನ ಗಾಜು ಹೊಡೆದು 2 ಲಕ್ಷ ರೂ. ದೋಚಿದ ಕಳ್ಳ ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್, ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಶಿವಚಿತ್ತಪ್ಪ, ಸಮಾಜ ಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...