ತೀರ್ಥಹಳ್ಳಿ | ದೀಪಾವಳಿಗಾದರೂ ಆರಗಜ್ಞಾನೇಂದ್ರ ಬೆಳ್ಳಿ ನಾಣ್ಯ ಹಂಚಲಿ : ಕಿಮ್ಮನೆ ರತ್ನಾಕರ್

Date:

ತೀರ್ಥಹಳ್ಳಿ, ದೇಶದಲ್ಲಿ ಎಲ್ಲಾ ಭಾಷೆ, ಧರ್ಮ, ಜಾತಿಯವರನ್ನು ಸೈದ್ಧಾಂತಿಕವಾಗಿ ಒಟ್ಟಿಗೆ ತೆಗೆದುಕೊಂಡು ಹೋಗುವ ಸಿದ್ಧಾಂತವಿರುವ ಪಕ್ಷವೆಂದರೆ ಕಾಂಗ್ರೆಸ್ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ವೇತಾ ಬಂಡಿಯವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತಿ ಸದಸ್ಯೆಯಾಗಿ ಶ್ವೇತಾ ಬಂಡಿ ಉತ್ತಮ ಕೆಲಸ ಮಾಡಿದ್ದಾರೆ. ಸಂಘಟನೆ ಮಾಡುವ ಪೂರ್ಣ ಅರ್ಹತೆ ಅವರಿಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ಸಮಾವೇಶವನ್ನು ತೀರ್ಥಹಳ್ಳಿಯಲ್ಲಿ ಮಾಡಿ ಎಂದು ಸಲಹೆ ನೀಡಿದರಲ್ಲದೆ, ಕಾಂಗ್ರೆಸ್ ಪಕ್ಷದ ಹೋರಾಟ ಒಂದು ತಲೆಮಾರಿನ ಹೋರಾಟವಾಗಬಾರದು. ಬಿಜೆಪಿಯ ಕೆಟ್ಟ ನಿಲುವಿನ ಸಿದ್ಧಾಂತದ ವಿರುದ್ಧ ಹೋರಾಟ ಅಗತ್ಯವಿದೆ. ಸೈದ್ಧಾಂತಿಕವಾಗಿ ಕಾರ್ಯಕರ್ತರಲ್ಲಿ ಗೊಂದಲವಿರಬಾರದು ಎಂದರು.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯವರು ಮತದಾರರನ್ನು ಬೆಂಗಳೂರಿನಿಂದ ತೀರ್ಥಹಳ್ಳಿಗೆ 204 ಬಸ್ಸುಗಳು ಕರೆತಂದಿದ್ದು, ಬಸ್ಸಿನ ಖರ್ಚು, ಮತದಾರರಿಗೆ ನೀಡುವ ಹಣಸೇರಿ 1.25 ಕೋಟಿಯಾಗಿದೆ. ಅವರನ್ನು ಎದುರಿಸುವುದು ಅಷ್ಟು ಸುಲಭವಲ್ಲ. ಸಂಘಟನೆಯ ಮೂಲಕ ಅವರನ್ನು ಎದುರಿಸುವ ಕೆಲಸ ಕಾರ್ಯಕರ್ತರು ಮಾಡಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ವಿರುದ್ಧ ಹೋರಾಟದಲ್ಲಿ ನಾನು ಸ್ವಲ್ಪವೂ ಹಿಂದೆ ಸರಿದಿಲ್ಲ. 1972 ರಿಂದ ಹೋರಾಟ ಮಾಡುತ್ತಿದ್ದೇನೆ. ಹೆಡಗೇವಾರ್ ಮತ್ತು ಗೋಲ್ವಾಲ್ಕರ್ ಬಂಚ್ ಆಫ್ ಥಾಟ್ಸ್ ನಲ್ಲಿ ಹರಿಜನರು ಹಿಂದುಗಳೇ ಅಲ್ಲ ಎಂದು ಬರೆದಿದ್ದಾರೆ. ಇಂತಹ ವಿಷಯಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ತಿಳಿಸುವ ಕೆಲಸ ಮಾಡಬೇಕೆಂದರು.

ಈ ಹಿಂದೆ ನಡೆದ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ತೀರ್ಥಹಳ್ಳಿಯಲ್ಲಿ ಬಿಜೆಪಿಯವರು ಅದ್ದೂರಿಯಾಗಿ ವರಮಹಾಲಕ್ಷ್ಮೀ ಪೂಜೆಮಾಡಿ ಬೆಳ್ಳಿ ನಾಣ್ಯ, ಸೀರೆ, 500 ರೂಪಾಯಿಗಳನ್ನು ಹಂಚಿದ್ದರು. ಈ ವರ್ಷ ಬೆಳ್ಳಿ ನಾಣ್ಯ ಹಂಚಿಲ್ಲ ಎಂಬುದು ಬೇಸರವಾಗುತ್ತದೆ. ಇನ್ನೂ ಸಾಕಷ್ಟು ಕಾಲಾವಕಾಶವಿದೆ, ಆರಗ ಜ್ಞಾನೇಂದ್ರ ದೀಪಾವಳಿಗಾದರೂ ಹಂಚಲಿ ಎಂದು ವ್ಯಂಗ್ಯವಾಡಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ವೇತಾ ಬಂಡಿ ಮಾತನಾಡಿ ಜಿಲ್ಲಾಧ್ಯಕ್ಷೆ ಸ್ಥಾನ ತೆಗೆದುಕೊಳ್ಳಲು ಮೊದಲು ಭಯವಾಗಿತ್ತು, ಕಿಮ್ಮನೆ ರತ್ನಾಕರ್, ಜಿಲ್ಲಾ ನಾಯಕರ ಬೆಂಬಲದಿಂದ ಜಿಲ್ಲಾಧ್ಯಕ್ಷೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷದ 5 ಯೋಜನೆಗಳಿಂದ ಮಹಿಳೆಯರನ್ನು ಒಗ್ಗೂಡಿಸಲು ಸಹಕಾರಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸ್ವಂದನೆಯೂ ಸಹ ದೊರಕಿದೆ. ಎಲ್ಲಾ ತಾಲ್ಲೂಕಿನಲ್ಲಿ ಮಹಿಳೆಯ ಸಹಕಾರ ದೊರೆಯುತ್ತಿದ್ದೂ ಸಂಘಟನೆ ಮಾಡಲು ಕಷ್ಟ ಎನಿಸುವುದಿಲ್ಲ ಎಂದರು.

ಸಭೆಯಲ್ಲಿ ತೀರ್ಥಹಳ್ಳಿ ಬ್ಲಾಕ್ ನ ಅಧ್ಯಕ್ಷ ಕೆಸ್ತೂರ್ ಮಂಜುನಾಥ್, ಜಿಪಂ ಮಾಜಿ ಸದಸ್ಯರಾದ ಪದ್ಮನಾಭ್, ಬಾಳೇಹಳ್ಳಿ ಪ್ರಭಾಕರ್, ಭಾರತೀ ಪ್ರಭಾಕರ್, ಹೊಸನಗರ ಬ್ಲಾಕ್ ಮಹಿಳಾ ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ತೀರ್ಥಹಳ್ಳಿ ಬ್ಲಾಕ್ ಮಹಿಳಾ ಅಧ್ಯಕ್ಷೆ ಅನ್ನಪೂರ್ಣಾ, ಗ್ಯಾರಂಟಿ ಯೋಜನೆಯ ಅಧ್ಯಕ್ಷ ಸಚ್ಚೀಂದ್ರ ಹೆಗಡೆ ಮುಂತಾದದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...