ತೀರ್ಥಹಳ್ಳಿ | ನಮಾಜ್ ವೇಳೆ ಕಳ್ಳತನ; ಆರೋಪಿಗಳ ಬಂಧನ

Date:

ನಮಾಜ್ ಮುಗಿಸಿಕೊಂಡು ಬರುವ ಹೊತ್ತಿಗೆ ಲಕ್ಷಾಂತರ ರೂ ಹಣದ ಸಮೇತ ಗೂಡ್ಸ್ ವಾಹನವನ್ನೇ ಮಂಗಮಾಯ ಮಾಡಿದ್ದ ಪ್ರಕರಣವನ್ನ ತೀರ್ಥಹಳ್ಳಿ ಪೊಲೀಸರು‌ ಬೇಧಿಸಿದ್ದಾರೆ.

ದಾವಣಗೆರೆ ಮೂಲದ ಸೈಯದ್‌ ಅಬ್ದುಲ್ಲಾ(45), ನವೀದ್‌ ಅಹಮದ್‌(40) ಹಾಗೂ ಜಾವೀದ್(42)‌ ಬಂಧಿತ ಆರೋಪಿಗಳು.

ಮಾ.14ರಂದು ಬೆಳಗ್ಗೆ ಹೊನ್ನಾಳಿ ಬೊಂಬು ಬಜಾರ್‌ನ ಮಹಮದ್ ಇರ್ಷಾದ್, ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ₹29,00,000ಗಳನ್ನು ತೆಗೆದುಕೊಂಡು, ಸ್ಕ್ರಾಪ್ ವ್ಯವಹಾರದ ಸಂಬಂಧ ಹೊನ್ನಾಳಿಯಿಂದ ಮಂಗಳೂರಿಗೆ ಹೊರಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಗ ಮಧ್ಯೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಂಜದಕಟ್ಟೆ ಮಸೀದಿಯ ಹತ್ತಿರ ನಮಾಜ್ ಮಾಡುವ ಸಲುವಾಗಿ ವಾಹನವನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ, ಹಣವಿದ್ದ ಬ್ಯಾಗ್ ಅನ್ನು ವಾಹನದಲ್ಲಿಯೇ ಇಟ್ಟು ಮಸೀದಿಗೆ ನಮಾಜ್ ಮಾಡಲು ಹೋಗಿ ವಾಪಸ್ಸು ಬಂದು ನೋಡಿದಾಗ, ವಾಹನವು ಸ್ಥಳದಲ್ಲಿ ಇರಲಿಲ್ಲ. ಹಣ ಹಾಗೂ ಗೂಡ್ಸ್ ವಾಹನವನ್ನು ಕಳುವ ಮಾಡಲಾಗಿತ್ತು.

ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಕಳುವಾದ ನಗದು ಹಣ, ವಾಹನ ಮತ್ತು ಆರೋಪಿಗಳ ಪತ್ತೆಗಾಗಿ ಎಸ್‌ಪಿ ಮಿಥುನ್ ಕುಮಾರ್ ಜಿ. ಕೆ, ಅಡಿಷನಲ್ ಎಸ್‌ಪಿಗಳಾದ ಅನಿಲ್ ಕುಮಾರ್ ಭೂಮರಡ್ಡಿ, ಕಾರಿಯಪ್ಪ ಎ. ಜಿರವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ಇದನ್ನೂ ಓದಿ: ತೀರ್ಥಹಳ್ಳಿ | 15ನೇ ಮೈಲಿಗಲ್ಲು ಬಳಿ ಅಪಘಾತ; ಯುವಕರ ಕಾಲು ಮುರಿತ

ತನಿಖಾ ತಂಡವು ಹೊನ್ನಾಳಿ ಪೊಲೀಸ್ ಠಾಣೆಯ ಪಿಐ ಸುನೀಲ್ ಕುಮಾರ ಹೆಚ್, ಎಎಸ್ಐ ಹರೀಶ್ ಮತ್ತು ಸಿಬ್ಬಂದಿಗಳಾದ ಸಿ.ಹೆಚ್.ಸಿ ಜಗದೀಶ, ಹೇಮಾನಾಯ್ಕ್, ಸುರೇಶ್ ನಾಯ್ಕ್ ಮತ್ತು ರಾಜಶೇಖರ್ ರವರ ಸಹಕಾರದೊಂದಿಗೆ ಆಪರೇಷನ್ ನಡೆಸಿತ್ತು. ಆರೋಪಿತರಿಂದ 29 ಲಕ್ಷ ನಗದು ಹಾಗೂ ಅಂದಾಜು ಮೌಲ್ಯ ₹10,00,000ಗಳ ವಾಹನ ಮತ್ತು ಕೃತ್ಯಕ್ಕೆ ಬಳಸಿದ ‌ಅಂದಾಜು ಮೌಲ್ಯ ₹6,00,000 ಟೊಯೋಟಾ ಇಟಿಯೋಸ್ ಕಾರು ಸೇರಿ ಒಟ್ಟು ₹45,00,000ಗಳ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...