ದೇಶದಲ್ಲಿಯೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನದ ಅವಕಾಶ

Date:

  • 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
  • ಕಾಡುಕುರುಬ, ಜೇನುಕುರುಬ, ಸೋಲಿಗ ಸಮುದಾಯಕ್ಕೆ ಅವರು ಇದ್ದಲ್ಲಿಂದಲೇ ಮತದಾನ

ಕೇಂದ್ರ ಚುನಾವಣೆ ಆಯೋಗ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮನೆಯಿಂದಲೇ ಕೆಲವರಿಗೆ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಸ್ಥಿತಿಯಲ್ಲಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶವನ್ನು ಚುನಾವಣೆ ಆಯೋಗ ಕಲ್ಪಿಸಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ದೆಹಲಿಯಲ್ಲಿ ಬುಧವಾರ ನಡೆಸಿದ ಸುದ್ದಿಗೋಷ್ಠಯಲ್ಲಿ ಈ ಮಾಹಿತಿ ಹಂಚಿಕೊಂಡರು. “ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ವಿಶೇಷ ಚೇತನರು (ಪಿಡಬ್ಲ್ಯೂಸಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯ ಪಡೆದುಕೊಂಡಿದ್ದಾರೆ. ಈ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ನಿರ್ಧಾರ ಅನುಕೂಲಕರವಾಗಲಿದೆ” ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದಾರೆ. 100 ವರ್ಷ ಮೇಲ್ಪಟ್ಟವರು 16,976 ಮತದಾರರಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ 5.55 ಲಕ್ಷ ವಿಶೇಷ ಚೇತನ ಮತದಾರರಿದ್ದಾರೆ. ಇವರೆಲ್ಲರಿಗೂ ಮನೆಯಿಂದಲೇ ಮತದಾನ ಮಾಡುವ ಅವಕಾಶ ಸಿಕ್ಕಿದೆ.

ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಈ ಮತದಾರರಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ಅಧಿಕಾರಿಗಳಿಂದ ರವಾನೆಯಾಗುತ್ತದೆ. ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮನೆಯ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬಿಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...