ಕುಡುಪು ಘಟನೆ | ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು: ಸಂತ್ರಸ್ತ ಅಶ್ರಫ್ ಸಹೋದರ ಜಬ್ಬಾರ್

Date:

ಮಂಗಳೂರು ನಗರದ ಕುಡುಪು ಎಂಬಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ಸತ್ಯಶೋಧನಾ ವರದಿಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

ಸತ್ಯಶೋಧನಾ ಸಮಿತಿಯು ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗುಂಪು ಹತ್ಯೆಗೊಳಗಾದ ಅಶ್ರಫ್ ಅವರ ಸಹೋದರ ಅಬ್ದುಲ್ ಜಬ್ಬಾರ್ ಕೂಡ ಭಾಗವಹಿಸಿದ್ದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2025ರ ಏಪ್ರಿಲ್ 27ರಂದು ನಡೆದಿದ್ದ ನನ್ನ ಸಹೋದರನನ್ನು ಗುಂಪು ಹತ್ಯೆ ನಡೆಸಿ ಕೊಲ್ಲಲಾಗಿತ್ತಾದರೂ, ನಮ್ಮ ಕುಟುಂಬಕ್ಕೆ ಮಾಹಿತಿ ಸಿಕ್ಕಿದ್ದು ಏಪ್ರಿಲ್ 29ರಂದು. ಮಂಗಳೂರಿನ ಗುಜರಿ ವ್ಯಾಪಾರಿಯಾಗಿರುವ ಸಯೀದ್ ಎನ್ನುವವರ ಅಂಗಡಿಗೆ ತಾನು ಹೆಕ್ಕುತ್ತಿದ್ದ ಎಲ್ಲ ಗುಜರಿಗಳನ್ನು ನನ್ನ ಸಹೋದರ ನೀಡುತ್ತಿದ್ದ. ಪೊಲೀಸರು ವಿವರ ಕಲೆ ಹಾಕುತ್ತಿದ್ದ ವೇಳೆ ಈ ಸಂಗತಿ ಅವರಿಗೆ ಗೊತ್ತಾಯಿತು. ಸಯೀದ್ ಅವರ ಮೂಲಕ ಕೇರಳದಲ್ಲಿರುವ ನಮ್ಮ ಕುಟುಂಬದ ಸದಸ್ಯರೋರ್ವರಿಗೆ ವಿಚಾರ ಗೊತ್ತಾಯಿತು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಶ್ರಫ್ ಕೊಲೆಯಾದ ವಿಚಾರವನ್ನು ಪೊಲೀಸರ ಮೂಲಕ ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಷಡ್ಯಂತ್ರ ನಡೆದಿತ್ತು. ಮಂಗಳೂರಿನ ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಅವರು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂಬ ಹೆಸರು ಇರುವುದರಿಂದ ನಮ್ಮ ಸಹೋದರನಿಗೆ ನ್ಯಾಯ ಸಿಗುವ ನಂಬಿಕೆ ಇದೆ” ಎಂದು ಜಬ್ಬಾರ್ ತಿಳಿಸಿದರು.

ಜಬ್ಬಾರ್ ಪಿಕ್

” ಗುಂಪು ಹತ್ಯೆಯ ಬಗ್ಗೆ ಕರ್ನಾಟಕದ ಕೆಲವು ಮಾನವ ಹಕ್ಕು ಸಂಘಟನೆಗಳು ಸತ್ಯಶೋಧನಾ ವರದಿಯನ್ನು ನಡೆಸಿದೆ. ಅದರಲ್ಲಿ ಕೂಡ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ನಮಗೆ ಹಲವು ಮಾಹಿತಿ ಸಿಕ್ಕಿದೆ. ಅಶ್ರಫ್ ಗುಂಪು ಹತ್ಯೆ ಬಗ್ಗೆ ಕೇರಳ ಸರ್ಕಾರ ಕೂಡ ಕರ್ನಾಟಕ ಸರ್ಕಾರಕ್ಕೆ ಹೆಚ್ಚು ಒತ್ತಡ ಹಾಕಿಲ್ಲ ಎಂಬುದು ಕೂಡ ನಮಗಿರುವ ಮಾಹಿತಿ. ಉತ್ತರ ಪ್ರದೇಶದಲ್ಲಿ ಗುಂಪು ಹತ್ಯೆಯಾದ ಅಖ್ಲಾಕ್ ವಿಚಾರಗಳನ್ನೆಲ್ಲ ಪ್ರಸ್ತಾಪಿಸಿ ಕೇರಳದಲ್ಲಿ ಪಿಣರಾಯಿ ಸರ್ಕಾರ ಅಧಿಕಾರಕ್ಕೆ ಬಂದಿತ್ತಾದರೂ, ಮಲಯಾಳಿಯಾಗಿರುವ ಅಶ್ರಫ್ ಗುಂಪು ಹತ್ಯೆಯ ವಿಚಾರದಲ್ಲಿ ಹೆಚ್ಚು ಆಸಕ್ತಿ ತೋರಿಲ್ಲ ಎಂಬುದು ವಾಸ್ತವ” ಎಂದು ಬೇಸರಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಸತ್ಯಶೋಧನಾ ವರದಿ ಬಿಡುಗಡೆ; 2 ತಿಂಗಳಾದರೂ ಸರ್ಕಾರಿ ವಕೀಲರನ್ನೇ ನೇಮಿಸದ ರಾಜ್ಯ ಸರ್ಕಾರ!

“ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು. ಇನ್ನು ಯಾವತ್ತೂ ಯಾರನ್ನೂ ಥಳಿಸಿ ಕೊಲ್ಲಬಾರದು. ಅಶ್ರಫ್ ಅವರನ್ನು ಥಳಿಸಿ ಕೊಂದವರೆಲ್ಲರೂ ತಮ್ಮ ಅಪರಾಧಕ್ಕೆ ಶಿಕ್ಷೆ ಅನುಭವಿಸಬೇಕು. ಜಾತಿ-ಧರ್ಮ ನೋಡಿ ಕೊಲ್ಲುವುದು ದೇಶದ್ರೋಹ. ಸಹೋದರನಿಗೆ ನ್ಯಾಯ ಸಿಗಬೇಕೆಂಬುದೇ ನಮ್ಮ ಆಗ್ರಹವಾಗಿದೆ. ಅಶ್ರಫ್‌ನನ್ನು ಕೊಂದ ಬಳಿಕವೂ ಕ್ರಿಕೆಟ್ ಆಡಿದ್ದ ಮನೋಭಾವದ ವಿರುದ್ಧವಾಗಿದೆ ನಮ್ಮ ಹೋರಾಟ. ಸಹೋದರನಿಗೆ ನ್ಯಾಯ ಸಿಗಲಿದೆ ಎಂಬುದು ನಮಗೆ ನಂಬಿಕೆ ಇದೆ” ಎಂದು ಗುಂಪು ಹತ್ಯೆಗೊಳಗಾದ ಅಶ್ರಫ್ ಅವರ ಸಹೋದರ ಅಬ್ದುಲ್ ಜಬ್ಬಾರ್ ತಿಳಿಸಿದರು.

WhatsApp Image 2025 06 28 at 5.57.51 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...