ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಿ: ಸರೋವರ ಬೆಂಕಿಕೆರೆ ಆಗ್ರಹ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ಸರೋವರ ಬೆಂಕಿಕೆರೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮುಸ್ಲಿಮ್ ಧರ್ಮದವರು ಎಂಬ ಕಾರಣಕ್ಕೆ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಪ್ರಕರಣವು ಅತ್ಯಂತ ಕ್ರೂರವಾಗಿದೆ ಮತ್ತು ಯಾವುದೇ ಕಾರಕ್ಕೂ ಕ್ಷಮಾಪಣೆಗೆ ಅರ್ಹವಾಗಿರುವುದಿಲ್ಲ. ಇಂತಹ ನೀಚ ಕೃತ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಬಗೆಯ ಕೋಮುವೈಷಮ್ಯ ಆಧಾರಿತ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. 15 ದಿನದ ಹಿಂದೆ ನಡೆದ ಈ ಘಟನೆಯಲ್ಲಿ ವಿದ್ಯಾರ್ಥಿಗಳು ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಒಂದು ಧರ್ಮದ ಮೇಲಿನ ದ್ವೇಷವು ಮುಗ್ಧ ಮಕ್ಕಳನ್ನು ಕೊಲ್ಲುವ ಹಂತಕ್ಕೆ ತಲುಪುವುದಾದರೆ, ಸಮಾಜದಲ್ಲಿ ಯಾವ ರೀತಿ ಕೋಮು ವೈಷಮ್ಯವನ್ನು ವ್ಯವಸ್ಥಿತವಾಗಿ ಬಿತ್ತಲಾಗಿದೆ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಸರೋವರ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ಲಾಭಕ್ಕಾಗಿ ಸೃಷ್ಟಿಸಿದ ಕೋಮು ದ್ವೇಷದ ಮನಸ್ಥಿತಿ ಇಷ್ಟೊಂದು ನೀಚ ಮಟ್ಟಕ್ಕೆ ಇಳಿದಿದೆ ಎಂದರೆ, ಮುಂದೆ ಇದು ಯಾವ ಬಗೆಯ ದುರಂತಕ್ಕೆ ಕಾರಣವಾಗಬಹುದು ಎಂಬ ಆತಂಕವನ್ನು ಸೃಷ್ಟಿಸುತ್ತದೆ. ಧರ್ಮ ರಕ್ಷಣೆಯ ಹೆಸರಿನಲ್ಲಿ ಇನ್ನೊಂದು ಧರ್ಮದ ಬಗೆಗೆ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳ ಮೂಲಕ ಸೃಷ್ಟಿಸಿರುವ ಅಪನಂಬಿಕೆಗಳು, ಪೂರ್ವಾಗ್ರಹ ವಿಚಾರಗಳು ಹೇಗೆ ಸಮಾಜಘಾತುಕ ಶಕ್ತಿಗಳಾಗಿ ಪರಿವರ್ತನೆ ಆಗುತ್ತವೆ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ ಎಂದಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಖಚಿತಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನಾಗರಿಕ ಸಮಾಜವು ಆಂದೋಲನವನ್ನು ರೂಪಿಸಬೇಕು. ಕೋಮುವಾದಿಗಳು ಅನ್ಯಧರ್ಮದವರ ವಿರುದ್ಧ ಕೋಮುದ್ವೇಷವನ್ನು ಬಿತ್ತುತ್ತಿರುವುದರ ಪರಿಣಾಮವಾಗಿಯೇ, ಇಂತಹ ಘಟನೆಗಳು ನಡೆಯುತ್ತಿರುವುದು. ಹಾಗಾಗಿ ಈ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ತಗೆದುಕೊಳ್ಳುವ ಜೊತೆಗೇ, ಸಮಾಜದಲ್ಲಿ ಕೋಮು ಸಾಮರಸ್ಯವನ್ನು ಕದಡುತ್ತಿರುವ, ದ್ವೇಷ ಭಾಷಣ ಮಾಡುವವರ ಮೇಲೆಯೂ ಪೊಲೀಸ್ ಇಲಾಖೆ, ಸರಕಾರ ಸೂಕ್ತ ಕ್ರಮಗಳನ್ನು ತಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಮತಗಳ್ಳತನ | ಚುನಾವಣಾ ಆಯೋಗ ಬಿಜೆಪಿ ಏಜೆಂಟ್: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಮಕ್ಕಳಲ್ಲಿ, ಸಮುದಾಯಗಳಲ್ಲಿ ಕೋಮುದ್ವೇಷ ಬಿತ್ತುವ ಯಾವುದೇ ಸಂಘಟನೆ, ವ್ಯಕ್ತಿಗಳ ಮೇಲೆ ನಮ್ಮ ಸರಕಾರ, ನ್ಯಾಯಾಲಯಗಳು ಕಠಿಣ ಕಾನೂನು ಕ್ರಮಕ್ಕೆ ಗುರುಯಾಗಿಸಿದರೆ, ಇಂತಹ ನೀಚ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸರೋವರ ಬೆಂಕಿಕೆರೆ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...