ಮಂಡ್ಯ | ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು

Date:

ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಾಗೃತ ಕರ್ನಾಟಕದ ಸಂಚಾಲಕರಾದ ನಾಗೇಶ್ ಮಾತನಾಡಿ ‘ ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು’ ಎಂದು ಹೇಳಿದರು.

“ಸಾಮಾಜಿಕ ನ್ಯಾಯಕ್ಕಾಗಿ ಜಾತಿ ಸಮೀಕ್ಷೆ ಅಗತ್ಯ. ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಶೋಷಿತ ಸಮುದಾಯಗಳ, ಹಿಂದುಳಿದ ವರ್ಗಗಳ ಹಿತವಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ” ಎಂದು ಎಚ್ಚರಿಗೆ ನೀಡಿದರು.

“ಭಾರತದಲ್ಲಿ ಜಾತಿ ವ್ಯವಸ್ಥೆ ವಾಸ್ತವ. ಅದೇ ರೀತಿ ಕೆಲವೇ ಕೆಲವು ಜಾತಿಗಳು ಅಭಿವೃದ್ಧಿ ಹೊಂದಿರುವುದು ಮತ್ತು ಹಲವು ಜಾತಿಗಳು ಹಿಂದುಳಿದಿರುವುದು ಕೂಡ ವಾಸ್ತವವೇ. ಅದಕ್ಕಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ?, ಎಷ್ಟು ಮುಂದುವರೆದಿವೆ?, ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು.”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮೀಕ್ಷೆ ಆಧಾರದ ಮೇಲೆ ಸರ್ಕಾರಗಳು ನೀತಿ-ನಿರೂಪಣೆ ರೂಪಿಸಬೇಕು. ಜೊತೆಗೆ ಸಾಮಾಜಿಕ ನ್ಯಾಯವನ್ನು ಜಾರಿ ಮಾಡಲು ಪ್ರಯತ್ನಿಸಬೇಕು. ಇದರ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ (ಮಂಡಲ್ ಕೇಸಿನಲ್ಲಿ) ಎಲ್ಲಾ ರಾಜ್ಯಗಳು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಬೇಕು ಎಂದು ಹೇಳಿದೆ. ಆನಂತರ ಬಂದ ಕಾಯ್ದೆಗಳು, ಈ ಆಯೋಗಗಳು 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು ಎಂದು ಹೇಳಿರುವುದು. ಇದರಿಂದಾಗಿ, ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ನ್ಯಾಯಯುತವಾದುದಾಗಿದೆ.” ಎಂದು ತಿಳಿಸಿದರು.

“ಯಾರೂ ಕೂಡ ಜಾತಿ ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಬಾರದು. ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸುತ್ತದೆಯಾದರೂ, ಅದು ಹಿಂದುಳಿದ ಜಾತಿಗಳನ್ನು ಮಾತ್ರ ಸಮೀಕ್ಷೆಗೆ ಒಳಪಡಿಸುವುದಿಲ್ಲ. ರಾಜ್ಯದ ಎಲ್ಲಾ ಜಾತಿಗಳನ್ನು ಅಧ್ಯಯನ ನಡೆಸುತ್ತದೆ. ಅದುದರಿಂದಾಗಿ, ಈ ಸಮೀಕ್ಷೆಯಲ್ಲಿ ಸರ್ವ ಸಮುದಾಯಗಳ ಹಿತ ಅಡಗಿದೆ. ಹಿಂದುಳಿದಿರುವ ಜಾತಿಗಳನ್ನು ಗುರುತಿಸಿ ಅವುಗಳ ಬೆಳವಣಿಗೆಗೆ ಅನುಕೂಲವಾಗುವಂತಹ ಶಿಫಾರಸುಗಳನ್ನು ಮಾಡುವುದರಿಂದ ಸಹಜವಾಗಿ ಹಿಂದುಳಿದಿರುವ ಎಲ್ಲಾ ಜಾತಿ-ಉಪಜಾತಿಗಳಿಗೆ ಲಾಭವಿದೆ. ಹಾಗಾಗಿ, ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಹಿಂದುಳಿದವರ ವಿರೋಧಿಗಳೇ ಆಗಿರುತ್ತಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪೃಥ್ವಿರಾಜ್ ಅವರು ಮಾತನಾಡಿ, “ಹಿಂದುಳಿದ ವರ್ಗಗಳ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರವನ್ನು ಹಿಂದುಳಿದ ಸಮುದಾಯಗಳು ಎಂದಿಗೂ ಮರೆಯುವುದಿಲ್ಲ. ಜಾತಿ ಸಮೀಕ್ಷೆ ನಡೆಸುವುದೇ ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು. ಆದುದರಿಂದ, ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಸಾಮಾಜಿಕ ನ್ಯಾಯದ ವಿರೋಧಿಗಳು. ನಮ್ಮ ಮತಗಳನ್ನು ತೆಗೆದುಕೊಂಡು ಅಧಿಕಾರ ಪಡೆದು ನಮ್ಮ ವಿರುದ್ಧ ಮಸಲತ್ತು ನಡೆಸುತ್ತಿರುವ ಖಳನಾಯಕರು. ಇಂಥ ಸಮುದಾಯ ಮತ್ತು ನಾಯಕರ ವಿರುದ್ಧ ಹಿಂದುಳಿದ ಸಮುದಾಯಗಳು ಒಗ್ಗಟ್ಟಾಗುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

“ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಮೀಕ್ಷೆ ವೇಳೆ ಆಗುತ್ತಿರುವ ಸಣ್ಣಪುಟ್ಟ ಲೋಪದೋಷಗಳನ್ನು ಕೂಡಲೇ ಬಗೆಹರಿಸಬೇಕು. ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದು ಎಷ್ಟು ಮುಖ್ಯವೋ ಅದನ್ನು ಸಮರ್ಪಕವಾಗಿ ನಡೆಸುವುದು ಕೂಡಾ ಅಷ್ಟೇ ಮುಖ್ಯ. 2015ರ ಸಮೀಕ್ಷೆ ಬಗ್ಗೆ ಆಕ್ಷೇಪಗಳು ಬಂದು ಕಡೆಗೆ ಸರಕಾರ ಅದನ್ನು ಅಂಗೀಕರಿಸದಿರುವುದು ದುರ್ಬಲ ಸಮುದಾಯಗಳಿಗೆ ಆದ ದೊಡ್ಡ ಅನ್ಯಾಯ. ಮತ್ತೊಮ್ಮೆ ಅಂಥ ಮಹದನ್ಯಾಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಆಯೋಗದ ಮೇಲಿದೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಸಂತೋಷ್, ಸುಬ್ರಮಣ್ಯ, ಪ್ರಶಾಂತ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...