ಮೈಸೂರು | ದೇಶದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಬೇಕು: ಎಂಎಲ್‌ಸಿ ಎಚ್ ವಿಶ್ವನಾಥ್ ಹೇಳಿಕೆ

Date:

ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರು ನಗರದಲ್ಲಿ ಹೇಳಿಕೆ ನೀಡಿದ್ದಾರೆ.

ಮೈಸೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ನಮ್ಮ ದೇಶದ ಅನ್ನ ತಿಂದು, ನೀರು ಕುಡಿದು ಶತ್ರು ರಾಷ್ಟ್ರಕ್ಕೆ ಜೈ ಎನ್ನುವ ದೇಶದ್ರೋಹಿಗಳಿಗೆ ಶಿಕ್ಷೆ ವಿಧಿಸಬೇಕೇ ಹೊರತು ಹಾಗೆಯೇ ಬಿಟ್ಟು ಕಳುಹಿಸಬಾರದು. ಸದ್ಯ ಯುದ್ಧದ ವಾತಾವರಣ ಇದ್ದು ಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಪರ ನಿಲ್ಲಬೇಕು” ಎಂದು ಹೇಳಿದರು.

“ಇದರ ಜತೆಗೆ ಕೇಂದ್ರ ಸರ್ಕಾರ ‘ಜನಗಣತಿಯೊಟ್ಟಿಗೆ ಜಾತಿಗಣತಿಯನ್ನೂ ನಡೆಸುವ ತೀರ್ಮಾನ ಕೈಗೊಂಡಿದ್ದು ಸ್ವಾಗತಾರ್ಹ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಾದವರನ್ನು ಕೂರಿಸಿಕೊಂಡು ಗಣತಿ ಮಾಡಿಸಿದ್ದರಿಂದ ಎಡವಟ್ಟುಗಳು ಆಗಿವೆ. ಕಾಂತರಾಜ ಆಯೋಗದ ಮೂಲ ಪ್ರತಿಗಳು ಇಲ್ಲದೇ ಹೇಗೆ ಸಮೀಕ್ಷೆ ನಡೆಸಿದ್ದಾರೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸತ್ಯ ಹೇಳುವುದಾದರೆ ಜಾತಿಗಣತಿ ರಾಜಕೀಯ ಪ್ರೇರಿತವಾಗಿದೆ. ಸಮೀಕ್ಷೆ ನಡೆಸಿದ ತಂಡವು ಕೈಗೊಂಬೆಯಾಗಿ ನಡೆದುಕೊಂಡಿದೆ. ತಜ್ಞರಲ್ಲದ, ಅನುಭವ ಇರದ, ಅವೈಜ್ಞಾನಿಕ ಸಮೀಕ್ಷೆ ನಡೆಸಿ, ಇದೇ ಸರಿ ಎನ್ನುವ ಮಟ್ಟಕ್ಕೆ ಹೋಗಿದ್ದಾರೆ” ಎಂದು ಆರೋಪ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಖ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮೇ. 3 ರಂದು ಬೃಹತ್ ಪ್ರತಿಭಟನೆ

“ರಾಜ್ಯದಲ್ಲಿ ಸರ್ಕಾರ ವಿಫಲವಾಗಿದ್ದು, ಯಾವುದೇ ವಿಚಾರಗಳಲ್ಲಿ ಪಕ್ವತೆ ಇರದೆ ಬೇಕಾಬಿಟ್ಟಿ ಕಾರ್ಯವೈಖರಿ ಮೂಲಕ ದುಂಡಾವರ್ತನೆಯಲ್ಲಿ ಮುಳುಗಿದೆ. ಜನಪರ ಕೆಲಸಗಳ ಕಡೆಗೆ, ಜನರ ಹಿತದ ಕಡೆಗೆ ಗಮನ ಹರಿಸುತಿಲ್ಲ. ರಾಜಕೀಯ ಲೆಕ್ಕಾಚಾರದಲ್ಲಿ ಇದೆಲ್ಲವೂ ನಡೆಯುತ್ತಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...