ಉಡುಪಿ | ತೊಟ್ಟಂ ಚರ್ಚಿನಲ್ಲಿ ಮುದ ನೀಡಿದ ‘ಈಸ್ಟರ್ ಕಲಾ ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ

Date:

ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ತೊಟ್ಟಂ ಸಂತ ಅನ್ನಮ್ಮ ಚರ್ಚ್ ಘಟಕದ ವಿವಿಧ ಯೋಜನೆಗಳ ಸಹಾಯರ್ಥವಾಗಿ ಭಾನುವಾರ ಚರ್ಚಿನ ಬಯಲು ರಂಗ ವೇದಿಕೆಯಲ್ಲಿ ಆಯೋಜಿಸಿದ್ದ ಈಸ್ಟರ್ ಕಲಾ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನೆರೆದ ಪ್ರೇಕ್ಷಕರಿಗೆ ಮುದ ನೀಡಿತು.
ಕಾರ್ಯಕ್ರಮವನ್ನು ಹೆಸರಾಂತ ಕೊಂಕಣಿ ಗಾಯಕರಾದ ದಿ|ವಿಲ್ಫಿ ರೆಬಿಂಬಸ್ ಮತ್ತು ಕೊಂಕಣ್ ಮೈನಾ ಮೀನಾ ರೆಬಿಂಬಸ್ ಅವರ ಪುತ್ರ ಗಾಯಕ ವಿಶ್ವಾಸ್ ರೆಬಿಂಬಸ್ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ರೊನಾಲ್ಡ್ ಡಿ ಆಲ್ಮೇಡಾ ಮಾತನಾಡಿ ಸಮುದಾಯದಲ್ಲಿ ಸಂಘಟನಾತ್ಮಕವಾಗಿ ಒಗ್ಗಟ್ಟಿನಿಂದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಾಗ ಉತ್ತಮ ಫಲಿತಾಂಶ ಸಾಧ್ಯವಿದೆ. ನಾವು ನೀಡುವ ಸೇವೆ ಸಮುದಾಯದ ಒಳಿತಿಗೆ ಕಾರಣವಾಗುವಂತಿರಬೇಕು ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಬೇಕು ಎಂದರು.

1005211244

ಕಾರ್ಯಕ್ರಮದಲ್ಲಿ ಪ್ರತಿಭಾಂಗಣ್ ಸಾಂಸ್ಕೃತಿಕ ಸಂಘಟನೆಯ ಉದ್ಘಾಟನೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ನೆರವೇರಿಸಿ ನಾವು ಮನುಷ್ಯರಾಗಬೇಕೆ ಹೊರತು ಯಂತ್ರಗಳಾಗಬಾರದು. ಮನುಷ್ಯನ ಬದುಕಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅತೀ ಅಗತ್ಯವಾಗಿ ಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ ಸಾಧ್ಯವಿದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ಕಥೊಲಿಕ್ ಸಭಾ ಸಂಘಟನೆಯ ವತಿಯಿಂದ ಆಧ್ಯಾತ್ಮಿಕ ನಿರ್ದೇಶಕರಾಗಿರುವ ವಂ|ಡೆನಿಸ್ ಡೆಸಾ ಅವರನ್ನು ಸರ್ವ ಸದಸ್ಯರು ಸೇರಿಕೊಂಡು ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಾಸಂಜೆ ಕಾರ್ಯಕ್ರಮದಲ್ಲಿ ಹೆಸರಾಂತ ಸಂಗೀತ ತಂಡ ನೆಲ್ಸನ್ ಲೂವಿಸ್ ಸಂತೆಕಟ್ಟೆ ಇವರ ಕ್ಯಾರಲ್ಸ್ ಬೀಟ್ ಗ್ರೂಪ್ ತಂಡ ಹಾಗೂ ಸ್ಥಳೀಯ ಕಲಾವಿದರಿಂದ ಉತ್ತಮವಾದ ಕೊಂಕಣಿ, ಕನ್ನಡ, ಹಿಂದಿ, ಹಾಡುಗಳು ಪ್ರದರ್ಶನಗೊಂಡವು. ಮಂಗಳೂರಿನ ಹಾಸ್ಯ ತಂಡ ಮೆಮೊರಿ ಇವರಿಂದ ಹಾಸ್ಯ ಕಾರ್ಯಕ್ರಮಗಳು ನೆರೆದಿದ್ದವರನ್ನು ಹಾಸ್ಯ ಲೋಕದಲ್ಲಿ ಮುಳುಗಿಸಿತು. ಪ್ರತಿಭಾಂಗಣ್ ಸಂಘಟನೆಯ ಕಲಾವಿದರಿಂದ ವೆಚಿಕ್ ಪೂತ್ ಹಾಸ್ಯ ಪ್ರಹಸನ ಪ್ರದರ್ಶನಗೊಂಡಿತು
ವಂ|ಡೆನಿಸ್ ಡೆಸಾ ಅವರಿಂದ ತಾಯಿಯ ಪ್ರೀತಿ ಮತ್ತು ಮಮತೆಯನ್ನು ಸಾರುವ ಕೊಂಕಣಿ ಗೀತೆ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್, ಸ್ಥಳೀಯ ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ಸುಶ್ಮಾ, ಪ್ರತಿಭಾಂಗಣ್ ಸಂಘಟನೆಯ ಅಧ್ಯಕ್ಷರಾದ ಕ್ಲಾರೆನ್ಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಕಥೊಲಿಕ್ ಸಭಾ ತೊಟ್ಟಂ ಘಟಕದ ಅಧ್ಯಕ್ಷರಾದ ವೀನಾ ಫೆರ್ನಾಂಡಿಸ್ ಸ್ವಾಗತಿಸಿ ಕಾರ್ಯದರ್ಶಿ ಶಾಂತಿ ಪಿಕಾರ್ಡೊ ವಂದಿಸಿದರು. ಲವೀನಾ ಫೆರ್ನಾಂಡಿಸ್ ಸಭಾ ಕಾರ್ಯಕ್ರಮ ಹಾಗೂ ನಾನು ಮರೋಲ್ ತೊಟ್ಟಂ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...