‘ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ’ ಎಂದು ವ್ಯಕ್ತಿಗೆ ಬೆದರಿಕೆ: ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್

Date:

  • ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್
  • ಸುರೇಶ್ ಬಾಬು ಎಂಬುವವರಿಗೆ ಕರೆ ಮಾಡಿ ಬೆದರಿಸಿದ್ದ ‘ಪೋಸ್ಟ್‌ ಕಾರ್ಡ್‌’ ಸಂಚಾಲಕ

ಸಂಘಪರಿವಾರದಲ್ಲಿ ಗುರುತಿಸಿಕೊಂಡು, ಪೋಸ್ಟ್‌ ಕಾರ್ಡ್‌ ಎಂಬ ಫೇಸ್‌ಬುಕ್ ಪೇಜ್ ನಡೆಸುತ್ತಿರುವ ಹಿಂದುತ್ವ ಮುಖಂಡ ಮಹೇಶ್ ವಿಕ್ರಮ್ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಹಾಕಿದ್ದಲ್ಲದೇ, ಮಾನಹಾನಿಕಾರ ಕಾಮೆಂಟ್ ಹಾಕಿದ್ದಾರೆ ಎಂದು ಅವರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ವಿಕ್ರಮ್ ಹೆಗಡೆ ಟಿವಿ ವಿಕ್ರಮ್ ಅಧಿಕೃತ ಪೇಜ್‌ನಲ್ಲಿ ದೂರುದಾರ ಸುರೇಶ್ ಬಾಬು ಮತ್ತು ಅವರ ಮಗಳ ಬಗ್ಗೆ ಮಾನಹಾನಿಯಾಗುವ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರುದಾರ ಸುರೇಶ್ ಬಾಬು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಮಹೇಶ್ ವಿಕ್ರಮ್ ಹೆಗಡೆ ಸೆ.4ರಂದು ತನಗೆ ಕರೆ ಮಾಡಿ, “ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ತುಕೊಳ್ತೀಯಾ?” ಎಂದು ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
FIR COPY MAHESH VIKRAM HEGDE

ಎಫ್‌ಐಆರ್‌ ಪ್ರತಿ

ಅಷ್ಟಲ್ಲದೇ, ‘ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ. ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ. ನಿನಗೆ ಇನ್ನೊಂದು ವಾರದಲ್ಲಿ ಗತಿ ಕಾಣಿಸುತ್ತೇವೆ’ ಎಂಬ ರೀತಿ ದೂರುದಾರರಿಗೆ ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ಸುರೇಶ್ ಬಾಬು ಉಲ್ಲೇಖಿಸಿದ್ದು, ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...