ಬೆಳಗಾವಿ | ಫೇಸ್‌ಬುಕ್ ಸ್ನೇಹಿತನ ಜೊತೆ ಸೇರಿ ಪತಿಯ ಕೊಲೆ: ಪತ್ನಿ ಸೇರಿ ಮೂವರ ಬಂಧನ

Date:

ಬೆಳಗಾವಿ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪತ್ನಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂವರನ್ನು ಹಿಂಡಲಗಾದಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

ಉದ್ಯಮಿ ಪತ್ನಿ ಉಮಾ ಪದ್ಮಣ್ಣವರ (41), ಅವರ ಫೇಸ್‌ಬುಕ್‌ ಸ್ನೇಹಿತ, ಕೊಡಗು ಜಿಲ್ಲೆಯ ಶನಿವಾರಸಂತೆ ಗ್ರಾಮದ ಶೋಭಿತ್‌ ಗೌಡ (30) ಮತ್ತು ಪವನ್‌ (27) ಬಂಧಿತ ಆರೋಪಿಗಳು.

ಸಂತೋಷ್​ ಅವರ ಪತ್ನಿ ಉಮಾ ಪದ್ಮಣ್ಣವರ, ಬೆಳಗಾವಿ ನಗರದ ಶೋಭಿತಗೌಡ ಹಾಗೂ ಪದ್ಮಣ್ಣವರ ಮನೆ ಕೆಲಸ ಮಾಡುತ್ತಿದ್ದ ನಂದಾ ಕುರಿಯಾ, ಪ್ರಕಾಶ ಕುರಿಯಾ ಮತ್ತು ಇನ್ನೋರ್ವ ಅಪರಿಚಿತ ಸೇರಿ ಒಟ್ಟು ಐವರು ಆರೋಪಿಗಳ ವಿರುದ್ಧ ಕೇಸು ದಾಖಲಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆ ಪ್ರಕರಣದಲ್ಲಿ ಮನೆಗೆಲಸದವರಾದ ನಂದಾ ಕುರಿಯಾ, ಪ್ರಕಾಶ ಕುರಿಯಾ ಅವರ ಪಾತ್ರದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿಲ್ಲ. ಹಾಗಾಗಿ, ಅವರನ್ನು ಬಂಧಿಸಿಲ್ಲ ಎಂದು ಬೆಳಗಾವಿ ಪೊಲೀಸರು ತಿಳಿಸಿದ್ದಾರೆ.

ತಂದೆಯ ಕೊಲೆ ಬಗ್ಗೆ ಮಗಳಿಂದಲೇ ದೂರು

ಅ‌ಕ್ಟೋಬರ್​​ 9ರಂದು ಬೆಳಗಾವಿ ಆಂಜನೇಯ ನಗರದ ನಿವಾಸಿ ಸಂತೋಷ ಪದ್ಮಣ್ಣವರ ಸಾವನ್ನಪ್ಪಿದ್ದರು. ಬಳಿಕ ಅ‌.10ರಂದು ಸದಾಶಿವನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಆದರೆ, ಬಳಿಕ ತಂದೆಯ ಸಾವಿನ ಬಗ್ಗೆ ಅನುಮಾನದ ಮೇಲೆ ಮಗಳು ಸಂಜನಾ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು.

WhatsApp Image 2024 10 18 at 2.58.50 PM

ತಂದೆಯ ಮನೆಗೆ ಯಾರೆಲ್ಲಾ ಬಂದಿದ್ದರು ಎಂದು ಸಂಜನಾ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದ್ದಾರೆ. ಆದರೆ ಈ ವೇಳೆ, ತಾಯಿ ಉಮಾ, ಮಗಳನ್ನು ಗದರಿಸಿದ್ದರಂತೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಸಂಜನಾ, ಅಕ್ಟೋಬರ್ 15ರಂದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತಂದೆಯ ಸಾವಿನ ಬಗ್ಗೆ ಅನುಮಾನವಿದ್ದು, ತನಿಖೆ ನಡೆಸಬೇಕು ಎಂದು ದೂರು ನೀಡಿದ್ದರು.

ಪುತ್ರಿ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಮಾಳಮಾರುತಿ ಪೊಲೀಸರು, ಸಂತೋಷ ಪದ್ಮಣ್ಣವರ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದರು. ಮೃತ ಸಂತೋಷ್ ಮಗಳು ಸಂಜನಾ, ಬೆಳಗಾವಿ ಎಸಿ ಶ್ರವಣ ನಾಯಕ ಹಾಗೂ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿತ್ತು.

ಬೆಳಗಾವಿ 31

ಇದೀಗ, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಂತೋಷ್ ಅವರ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಆ ವರದಿ ಬಂದ ಬಳಿಕ ಪ್ರಕರಣದ ಸ್ಪಷ್ಟತೆ ಇನ್ನಷ್ಟು ಗೊತ್ತಾಗಲಿದೆ ಎಂದು ತನಿಖೆ ನಡೆಸುತ್ತಿರುವ ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2024 10 18 at 2.58.49 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...