ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ ಮಳೆಯಾಗಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ಬಿರುಸಿನ ಮಳೆಯಾಗಿದ್ದು ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದಿದೆ. ಹುಣಸೂರು ಹಾಗು ಹೆಚ್ ಡಿ ಕೋಟೆಯಲ್ಲಿಯು ಸಹ ಮಳೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮಾನುಷವಾಗಿ ಥಳಿಸಲಾಗಿದ್ದ ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ
ಇತ್ತ ಕೊಡಗಿನಲ್ಲಿ ನಾಪೋಕ್ಲು, ವಿರಾಜಪೇಟೆಯಲ್ಲಿ ಸಾಧಾರಣ ಮಳೆ ಕಂಡಿದೆ. ಅಕಾಲಿಕ ಮಳೆಯಿಂದಾಗಿ ಕಾಫಿ, ಮಾವು ಬೆಳೆಗೆ ಹಾನಿ ಉಂಟಾಗುವ ಆತಂಕದಲ್ಲಿದ್ದಾರೆ ಬೆಳೆಗಾರರು.





