ಹುಲಿ ಉಗುರು | ವರ್ತೂರು ಸಂತೋಷ್​ ಬಳಿಕ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

Date:

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿ ಇದೀಗ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಹಾಗೂ ವಿನಯ್ ಗುರೂಜಿ ಅವರ ಮೇಲೆ ಹುಲಿ ಉಗುರು ಮತ್ತು ಹುಲಿ ಚರ್ಮ ಬಳಸಿದ ಆರೋಪ ಕೇಳಿಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಲಿ ಉಗುರು ಲಾಕೆಟ್ ಧರಿಸಿದ್ದಾರೆ ಹಾಗೂ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ ಇಬ್ಬರ ಮೇಲೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಎನ್ನುವವರು ಅರಣ್ಯಾಧಿಕಾರಿಗೆ ದೂರು ನೀಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಟ ದರ್ಶನ್ ವಿರುದ್ಧ ದೂರು ದಾಖಲಾಗಿದೆ.

ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿದ ಕಾರಣಕ್ಕೆ ಬಂಧನವಾದ ಬೆನ್ನಲ್ಲೇ, ಇದೀಗ ನಟ ದರ್ಶನ್ ಮತ್ತು ವಿನಯ್ ಗುರೂಜಿ ಅವರ ಮೇಲೆ ಆರೋಪ ಕೇಳಿಬಂದಿದೆ. ಈ ಹಿಂದೆ ದರ್ಶನ್ ಅವರು ಧರಿಸಿದ್ದ ಹುಲಿ ಉಗುರಿನ ಫೋಟೋ ವೈರಲ್ ಆಗಿತ್ತು. ಹಾಗೆಯೇ, ವಿನಯ್ ಗುರೂಜಿ ಅವರು ಹುಲಿಯ ಚರ್ಮದ ಮೇಲೆ ಕುಳಿತಿರುವ ಫೋಟೋ ಕೂಡ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಟೀಕೆಗಳು ವ್ಯಕ್ತವಾಗುತ್ತಿದ್ದು, ನ್ಯಾಯ ಎಂದರೆ ಎಲ್ಲರಿಗೂ ಒಂದೇ ರೀತಿ ಇರಬೇಕು. ಈಗ ಇವರಿಬ್ಬರ ಮೇಲೆ ಯಾವಾಗ ಕ್ರಮ ಕೈಗೊಳ್ಳಲಾಗುವುದು ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕ್ಯಾರಿ ಬ್ಯಾಗ್‌ಗೆ ₹20 ಶುಲ್ಕ ವಿಧಿಸಿದ ಐಕಿಯಾ; ₹3 ಸಾವಿರ ಪರಿಹಾರ ನೀಡಲು ಸೂಚಿಸಿದ ನ್ಯಾಯಾಲಯ

“ದರ್ಶನ್ ಬಂಗಾರದ ಚೈನ್ ಹಾಕಿದ್ದಾರೆ. ಅದರಲ್ಲಿ ಹುಲಿಯ ಉಗುರು ಇದೆ. ಅವರಿಂದ ಕಾನೂನಿನ ಉಲ್ಲಂಘನೆ ಆಗಿದೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ. ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು ಸಂತೋಷ ಅವರನ್ನು ಬಂಧಿಸಿದ್ದೀರಿ. ಅದೇ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ” ಎಂದು ದೂರು ನೀಡಿದ ಶಿವಕುಮಾರ್ ಹೇಳಿದ್ದಾರೆ.

ಹುಲಿ ಚರ್ಮ

“ನಟ ದರ್ಶನ್ ಅವರು ಧರಿಸಿರುವುದು ಹುಲಿ ಉಗುರು ನಕಲಿಯೋ ಅಥವಾ ಅಸಲಿಯೋ ಎಂಬ ಬಗ್ಗೆ ಅರಣ್ಯಾಧಿಕಾರಿಗಳು ತನಿಖೆ ನಡೆಸಬೇಕು. ದರ್ಶನ ಅವರು ಅರಣ್ಯ ಇಲಾಖೆಯ ರಾಯಭಾರಿ ಆಗಿದ್ದಾರೆ. ಈ ಬಗ್ಗೆ ಅವರಿಗೆ ಮಾಹಿತಿ ಇಲ್ಲವೇಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...